Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ
ಸಲ್ಲು-ಶೆಹನಾಜ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 03, 2023 | 12:39 PM

ನಟ ಸಲ್ಮಾನ್ ಖಾನ್ (Salman Khan) ಅವರ ಜೊತೆಗೆ ನಟಿಸಬೇಕು ಅನ್ನೋದು ಅನೇಕರ ಕನಸು. ಆದರೆ, ಎಲ್ಲರಿಗೂ ಈ ಅವಕಾಶ ಸಿಗೋದಿಲ್ಲ. ನಟಿ ಶೆಹನಾಜ್ ಗಿಲ್​ ಅವರಿಗೆ ಈ ರೀತಿಯ ಅಪರೂಪದ ಅವಕಾಶ ಸಿಕ್ಕಿತ್ತು. ಈ ಅವಕಾಶ ಸಿಕ್ಕ ಬಳಿಕ ಅವರ ಅದೃಷ್ಟ ಬದಲಾಗಿದೆ. ಅವರು ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿದ್ದಾರೆ ಎಂದು ವರದಿ ಆಗಿದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ (Kisi Ka Bhai Kisi Ki Jaan Movie) ಬಳಿಕ ಅವರಿಗೆ ಆಫರ್ ಹೆಚ್ಚಾಗಿದೆ. ಹೀಗಾಗಿ, ಒಂದು ಸ್ವಂತ ಮನೆ ಹೊಂದುವ ಕನಸು ಅವರಿಗೆ ಇತ್ತು. ಆ ಕನಸು ಈಗ ನನಸಾಗಿದೆ.

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಿರುವಾಗಲೇ ಅವರು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಮನೆ ಮುಂಬೈನಲ್ಲಿ ಎಲ್ಲಿದೆ? ಅದರ ಬೆಲೆ ಎಷ್ಟು? ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯ ಆಗಬೇಕಿದೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ತೆರೆಗೆ ಬಂತು. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತು. ಈ ಚಿತ್ರದಿಂದ ಶೆಹನಾಜ್ ಜನಪ್ರಿಯತೆ ಹೆಚ್ಚಿತು. ಶೆಹನಾಜ್ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಸ್ಟಾರ್ ನಟಿ ಆಗಿ ಮಿಂಚಲಿ ಎಂಬುದು ಅನೇಕರ ಕೋರಿಕೆ.

ಇದನ್ನೂ ಓದಿ: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರಿಗೆ ಸಿದ್ದಾರ್ಥ್ ಶುಕ್ಲಾ ಜೊತೆ ಪ್ರೀತಿ ಮೂಡಿತು. ಅವರು ಇನ್ನೇನು ಮದುವೆ ಆಗಬೇಕಿತ್ತು. ಆದರೆ, ಶೆಹನಾಜ್ ಹೃದಯಾಘಾತದಿಂದ ನಿಧನ ಹೊಂದಿದರು. ಇದಾದ ಬಳಿಕ ಅವರು ಕಣ್ಣೀರಲ್ಲಿ ಕೈತೊಳೆದರು. ಶೆಹನಾಜ್ ಗಿಲ್ ಅವರನ್ನು ಸಲ್ಮಾನ್ ಖಾನ್ ಅನೇಕ ಬಾರಿ ಸಮಾಧಾನ ಮಾಡಿದ್ದಿದೆ. ಈಗ ಅವರು ದುಃಖ ಮರೆತು ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ