Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು.

Shehnaaz Gill: ಸಲ್ಮಾನ್ ಖಾನ್ ಜೊತೆ ನಟಿಸಿದ ಬಳಿಕ ಬದಲಾಯ್ತು ಶೆಹನಾಜ್ ಗಿಲ್ ಅದೃಷ್ಟ
ಸಲ್ಲು-ಶೆಹನಾಜ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 03, 2023 | 12:39 PM

ನಟ ಸಲ್ಮಾನ್ ಖಾನ್ (Salman Khan) ಅವರ ಜೊತೆಗೆ ನಟಿಸಬೇಕು ಅನ್ನೋದು ಅನೇಕರ ಕನಸು. ಆದರೆ, ಎಲ್ಲರಿಗೂ ಈ ಅವಕಾಶ ಸಿಗೋದಿಲ್ಲ. ನಟಿ ಶೆಹನಾಜ್ ಗಿಲ್​ ಅವರಿಗೆ ಈ ರೀತಿಯ ಅಪರೂಪದ ಅವಕಾಶ ಸಿಕ್ಕಿತ್ತು. ಈ ಅವಕಾಶ ಸಿಕ್ಕ ಬಳಿಕ ಅವರ ಅದೃಷ್ಟ ಬದಲಾಗಿದೆ. ಅವರು ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿದ್ದಾರೆ ಎಂದು ವರದಿ ಆಗಿದೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ (Kisi Ka Bhai Kisi Ki Jaan Movie) ಬಳಿಕ ಅವರಿಗೆ ಆಫರ್ ಹೆಚ್ಚಾಗಿದೆ. ಹೀಗಾಗಿ, ಒಂದು ಸ್ವಂತ ಮನೆ ಹೊಂದುವ ಕನಸು ಅವರಿಗೆ ಇತ್ತು. ಆ ಕನಸು ಈಗ ನನಸಾಗಿದೆ.

ಶೆಹನಾಜ್ ಗಿಲ್ ಹೆಚ್ಚು ಖ್ಯಾತಿ ಪಡೆದಿದ್ದು ‘ಬಿಗ್ ಬಾಸ್ ಹಿಂದಿ ಸೀಸನ್ 13’ಕ್ಕೆ ಬಂದ ಬಳಿಕ. ಆ ಮೂಲಕ ಅವರಿಗೆ ಜನಪ್ರಿಯತೆ ಹೆಚ್ಚಿತು. ಪಂಜಾಬ್ ಮೂಲದ ಅವರು ಕಿರುತೆರೆ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಿರುವಾಗಲೇ ಅವರು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಮನೆ ಮುಂಬೈನಲ್ಲಿ ಎಲ್ಲಿದೆ? ಅದರ ಬೆಲೆ ಎಷ್ಟು? ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯ ಆಗಬೇಕಿದೆ.

ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಏಪ್ರಿಲ್ 21ರಂದು ತೆರೆಗೆ ಬಂತು. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿತು. ಈ ಚಿತ್ರದಿಂದ ಶೆಹನಾಜ್ ಜನಪ್ರಿಯತೆ ಹೆಚ್ಚಿತು. ಶೆಹನಾಜ್ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಸ್ಟಾರ್ ನಟಿ ಆಗಿ ಮಿಂಚಲಿ ಎಂಬುದು ಅನೇಕರ ಕೋರಿಕೆ.

ಇದನ್ನೂ ಓದಿ: 100 ಕೋಟಿ ರೂಪಾಯಿ ಕ್ಲಬ್​ ಸೇರಿವೆ ಸಲ್ಮಾನ್​ ಖಾನ್​ ನಟನೆಯ 16 ಚಿತ್ರಗಳು; ಇಲ್ಲಿದೆ ಪಟ್ಟಿ

ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರಿಗೆ ಸಿದ್ದಾರ್ಥ್ ಶುಕ್ಲಾ ಜೊತೆ ಪ್ರೀತಿ ಮೂಡಿತು. ಅವರು ಇನ್ನೇನು ಮದುವೆ ಆಗಬೇಕಿತ್ತು. ಆದರೆ, ಶೆಹನಾಜ್ ಹೃದಯಾಘಾತದಿಂದ ನಿಧನ ಹೊಂದಿದರು. ಇದಾದ ಬಳಿಕ ಅವರು ಕಣ್ಣೀರಲ್ಲಿ ಕೈತೊಳೆದರು. ಶೆಹನಾಜ್ ಗಿಲ್ ಅವರನ್ನು ಸಲ್ಮಾನ್ ಖಾನ್ ಅನೇಕ ಬಾರಿ ಸಮಾಧಾನ ಮಾಡಿದ್ದಿದೆ. ಈಗ ಅವರು ದುಃಖ ಮರೆತು ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ