AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ
ಸಿದ್ಧಾರ್ಥ್ ಶುಕ್ಲಾ , ಶೆಹನಾಜ್ ಗಿಲ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 02, 2021 | 4:55 PM

ಬಿಗ್​ ಬಾಸ್​ ಸೀಸನ್​ 13ರ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ (ಸೆ.2) ನಿಧನರಾಗಿರುವ ಸುದ್ದಿ ಕೇಳಿ ಇಡೀ ಬಾಲಿವುಡ್​ ಶಾಕ್​ನಲ್ಲಿದೆ. ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದ 40ರ ಪ್ರಾಯದ ಅವರು ಹೀಗೆ ಏಕಾಏಕಿ ಬಾರದ ಲೋಕಕ್ಕೆ ತೆರಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ರಾತ್ರಿ ಯಾವುದೋ ಔಷಧಿ ಸೇವಿಸಿ ಮಲಗಿದ್ದ ಅವರು ಬೆಳಗಾಗುವುದರೊಳಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವರದಿ ಆಗಿದೆ. ಸಿದ್ಧಾರ್ಥ್​ ಶುಕ್ಲಾ ಜೊತೆ ನಟಿ ಶೆಹನಾಜ್​ ಗಿಲ್​ ತುಂಬ ಆಪ್ತವಾಗಿದ್ದರು. ಗೆಳೆಯನ ಸಾವಿನ ಸುದ್ದಿ ತಿಳಿದ ಬಳಿಕ ಅವರ ಸ್ಥಿತಿ ಬಗ್ಗೆ ಕುಟುಂಬದವರಿಗೆ ಚಿಂತೆ ಆಗಿದೆ.

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಸಿದ್ಧಾರ್ಥ್​ ಸಾವಿನ ನಂತರ ಶೆಹನಾಜ್​ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಲು ಇಡೀ ಕುಟುಂಬವೇ ಮುಂದಾಗಿದೆ. ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್​ ಶುಕ್ಲಾ ಅಗಲಿದ್ದಾರೆ. ಮಾಡೆಲ್​ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಅವರು ವಿನ್ನರ್​ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್​ ಬಾಸ್​ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್​ 7’ರಲ್ಲೂ ಅವರು ವಿನ್ನರ್​ ಆಗಿದ್ದರು. ಬಿಗ್​ ಬಾಸ್​ 14ರಲ್ಲಿ ಅವರು ಗೆಸ್ಟ್​ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾ ಆಸ್ತಿ ಮೌಲ್ಯ ಎಷ್ಟು, ಅವರ ಬಳಿ ಇದ್ದ ಕಾರುಗಳಾವವು? ಇಲ್ಲಿದೆ ಮಾಹಿತಿ

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ