AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು.

ಬಿಗ್​ ಬಾಸ್​ ವಿನ್ನರ್​ ಸಿದ್ಧಾರ್ಥ್​ ನಿಧನ; ಗೆಳತಿ ಶೆಹನಾಜ್​ ಪರಿಸ್ಥಿತಿ ಹೇಗಿದೆ? ಪ್ರತಿಕ್ರಿಯೆ ನೀಡಿದ ತಂದೆ
ಸಿದ್ಧಾರ್ಥ್ ಶುಕ್ಲಾ , ಶೆಹನಾಜ್ ಗಿಲ್
TV9 Web
| Edited By: |

Updated on: Sep 02, 2021 | 4:55 PM

Share

ಬಿಗ್​ ಬಾಸ್​ ಸೀಸನ್​ 13ರ ವಿನ್ನರ್​ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ (ಸೆ.2) ನಿಧನರಾಗಿರುವ ಸುದ್ದಿ ಕೇಳಿ ಇಡೀ ಬಾಲಿವುಡ್​ ಶಾಕ್​ನಲ್ಲಿದೆ. ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದ 40ರ ಪ್ರಾಯದ ಅವರು ಹೀಗೆ ಏಕಾಏಕಿ ಬಾರದ ಲೋಕಕ್ಕೆ ತೆರಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ರಾತ್ರಿ ಯಾವುದೋ ಔಷಧಿ ಸೇವಿಸಿ ಮಲಗಿದ್ದ ಅವರು ಬೆಳಗಾಗುವುದರೊಳಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವರದಿ ಆಗಿದೆ. ಸಿದ್ಧಾರ್ಥ್​ ಶುಕ್ಲಾ ಜೊತೆ ನಟಿ ಶೆಹನಾಜ್​ ಗಿಲ್​ ತುಂಬ ಆಪ್ತವಾಗಿದ್ದರು. ಗೆಳೆಯನ ಸಾವಿನ ಸುದ್ದಿ ತಿಳಿದ ಬಳಿಕ ಅವರ ಸ್ಥಿತಿ ಬಗ್ಗೆ ಕುಟುಂಬದವರಿಗೆ ಚಿಂತೆ ಆಗಿದೆ.

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ಧಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಸಿದ್ಧಾರ್ಥ್​ ಸಾವಿನ ನಂತರ ಶೆಹನಾಜ್​ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರಿಗೆ ಧೈರ್ಯ ತುಂಬಲು ಇಡೀ ಕುಟುಂಬವೇ ಮುಂದಾಗಿದೆ. ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ತಾಯಿ ಮತ್ತು ಇಬ್ಬರು ಸಹೋದರಿಯರನ್ನು ಸಿದ್ಧಾರ್ಥ್​ ಶುಕ್ಲಾ ಅಗಲಿದ್ದಾರೆ. ಮಾಡೆಲ್​ ಆಗಿ ವೃತ್ತಿಜೀವನ ಆರಂಭಿಸಿದ್ದ ಅವರು ನಂತರ ಕಿರುತೆರೆಯಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಹಲವು ಧಾರಾವಾಹಿಗಳಲ್ಲಿ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಬಿಗ್​ ಬಾಸ್​ ಸೀಸನ್​ 13ರಲ್ಲಿ ಅವರು ವಿನ್ನರ್​ ಆಗಿ ಹೊರಹೊಮ್ಮಿದ ಬಳಿಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದರು. ಬಿಗ್​ ಬಾಸ್​ ಮಾತ್ರವಲ್ಲದೆ, ‘ಕತ್ರೋಂಕೆ ಕಿಲಾಡಿ ಸೀಸನ್​ 7’ರಲ್ಲೂ ಅವರು ವಿನ್ನರ್​ ಆಗಿದ್ದರು. ಬಿಗ್​ ಬಾಸ್​ 14ರಲ್ಲಿ ಅವರು ಗೆಸ್ಟ್​ ಆಗಿ ದೊಡ್ಮನೆ ಪ್ರವೇಶಿಸಿದ್ದರು.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾ ಆಸ್ತಿ ಮೌಲ್ಯ ಎಷ್ಟು, ಅವರ ಬಳಿ ಇದ್ದ ಕಾರುಗಳಾವವು? ಇಲ್ಲಿದೆ ಮಾಹಿತಿ

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್