AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

ಸಿದ್ದಾರ್ಥ್ ಶುಕ್ಲಾ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಇನ್ನೂ ನಡೆಯುತ್ತಿವೆ.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು
ಸಿದ್ದಾರ್ಥ್​​ ಶುಕ್ಲಾ - ಶೆಹನಾಜ್​ ಗಿಲ್​
TV9 Web
| Edited By: |

Updated on: Sep 03, 2021 | 8:59 AM

Share

ಬಿಗ್ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್ ​ಶುಕ್ಲಾ ಗುರುವಾರ (ಸೆ.2) ಮುಂಜಾನೆ ನಿಧನರಾದರು. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದರು ಎಂದು ಹೇಳಲಾಗಿದೆ. ಆದರೆ ಕೆಲವರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದಾರ್ಥ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಬುಧವಾರ ರಾತ್ರಿ ಮಲಗುವಾಗು ಅವರು ಯಾವುದೋ ಔಷಧಿ ಸೇವಿಸಿದ್ದರು. ಆದರೆ ಗುರುವಾರ ಬೆಳಗ್ಗೆಯೊಳಗೆ ಅವರು ನಿಧನರಾಗಿದ್ದಾರೆ ಎಂದು ಮುಂಬೈನ ಕೂಪರ್​ ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗ ಮರಣೋತ್ತರ ಪರೀಕ್ಷೆಯ ವರದಿಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ಘಟನೆ ಬಳಿಕ ಸಿದ್ದಾರ್ಥ್ ​ ಗೆಳತಿ ಶೆಹನಾಜ್ ಗಿಲ್​ ಮೊಬೈಲ್​ ಫೋನ್​ ಸ್ವಿಚ್​ಆಫ್​ ಆಗಿದೆ!

ಸಿದ್ದಾರ್ಥ್ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರ ಮೊಬೈಲ್​ ಫೋನ್​ ಸ್ವಿಚ್​ ಆಫ್​ ಆಗಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಆಸ್ಪತ್ರೆಯವರು ಮೃತದೇಹವನ್ನು ನೀಡಿದ ಬಳಿಕ ಇಂದು (ಸೆ.3) ಅಂತ್ಯ ಸಂಸ್ಕಾರ ನಡೆಯಲಿದೆ.

ಸಿದ್ದಾರ್ಥ್​-ಶೆಹನಾಜ್​ ನಡುವೆ ಇತ್ತು ಆಪ್ತತೆ:

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ದಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಶೆಹನಾಜ್​ಗೆ ಧೈರ್ಯ ತುಂಬುತ್ತಿರುವ ಕುಟುಂಬ:

ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾದು ಸಹಜ ಸಾವೇ? ಮುಂಬೈ ಪೊಲೀಸರಿಗೆ ಕುಟುಂಬದವರು ಹೇಳಿದ್ದೇನು?

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್