AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

ಸಿದ್ದಾರ್ಥ್ ಶುಕ್ಲಾ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಇನ್ನೂ ನಡೆಯುತ್ತಿವೆ.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು
ಸಿದ್ದಾರ್ಥ್​​ ಶುಕ್ಲಾ - ಶೆಹನಾಜ್​ ಗಿಲ್​
TV9 Web
| Edited By: |

Updated on: Sep 03, 2021 | 8:59 AM

Share

ಬಿಗ್ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್ ​ಶುಕ್ಲಾ ಗುರುವಾರ (ಸೆ.2) ಮುಂಜಾನೆ ನಿಧನರಾದರು. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದರು ಎಂದು ಹೇಳಲಾಗಿದೆ. ಆದರೆ ಕೆಲವರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದಾರ್ಥ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಬುಧವಾರ ರಾತ್ರಿ ಮಲಗುವಾಗು ಅವರು ಯಾವುದೋ ಔಷಧಿ ಸೇವಿಸಿದ್ದರು. ಆದರೆ ಗುರುವಾರ ಬೆಳಗ್ಗೆಯೊಳಗೆ ಅವರು ನಿಧನರಾಗಿದ್ದಾರೆ ಎಂದು ಮುಂಬೈನ ಕೂಪರ್​ ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗ ಮರಣೋತ್ತರ ಪರೀಕ್ಷೆಯ ವರದಿಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ಘಟನೆ ಬಳಿಕ ಸಿದ್ದಾರ್ಥ್ ​ ಗೆಳತಿ ಶೆಹನಾಜ್ ಗಿಲ್​ ಮೊಬೈಲ್​ ಫೋನ್​ ಸ್ವಿಚ್​ಆಫ್​ ಆಗಿದೆ!

ಸಿದ್ದಾರ್ಥ್ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರ ಮೊಬೈಲ್​ ಫೋನ್​ ಸ್ವಿಚ್​ ಆಫ್​ ಆಗಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಆಸ್ಪತ್ರೆಯವರು ಮೃತದೇಹವನ್ನು ನೀಡಿದ ಬಳಿಕ ಇಂದು (ಸೆ.3) ಅಂತ್ಯ ಸಂಸ್ಕಾರ ನಡೆಯಲಿದೆ.

ಸಿದ್ದಾರ್ಥ್​-ಶೆಹನಾಜ್​ ನಡುವೆ ಇತ್ತು ಆಪ್ತತೆ:

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ದಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಶೆಹನಾಜ್​ಗೆ ಧೈರ್ಯ ತುಂಬುತ್ತಿರುವ ಕುಟುಂಬ:

ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾದು ಸಹಜ ಸಾವೇ? ಮುಂಬೈ ಪೊಲೀಸರಿಗೆ ಕುಟುಂಬದವರು ಹೇಳಿದ್ದೇನು?

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ