AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

ಸಿದ್ದಾರ್ಥ್ ಶುಕ್ಲಾ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಇನ್ನೂ ನಡೆಯುತ್ತಿವೆ.

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು
ಸಿದ್ದಾರ್ಥ್​​ ಶುಕ್ಲಾ - ಶೆಹನಾಜ್​ ಗಿಲ್​
TV9 Web
| Edited By: |

Updated on: Sep 03, 2021 | 8:59 AM

Share

ಬಿಗ್ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್ ​ಶುಕ್ಲಾ ಗುರುವಾರ (ಸೆ.2) ಮುಂಜಾನೆ ನಿಧನರಾದರು. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದರು ಎಂದು ಹೇಳಲಾಗಿದೆ. ಆದರೆ ಕೆಲವರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದಾರ್ಥ್ ಅವರಿಗೆ 40 ವರ್ಷ ವಯಸ್ಸಾಗಿತ್ತು. ಬುಧವಾರ ರಾತ್ರಿ ಮಲಗುವಾಗು ಅವರು ಯಾವುದೋ ಔಷಧಿ ಸೇವಿಸಿದ್ದರು. ಆದರೆ ಗುರುವಾರ ಬೆಳಗ್ಗೆಯೊಳಗೆ ಅವರು ನಿಧನರಾಗಿದ್ದಾರೆ ಎಂದು ಮುಂಬೈನ ಕೂಪರ್​ ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗ ಮರಣೋತ್ತರ ಪರೀಕ್ಷೆಯ ವರದಿಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ಘಟನೆ ಬಳಿಕ ಸಿದ್ದಾರ್ಥ್ ​ ಗೆಳತಿ ಶೆಹನಾಜ್ ಗಿಲ್​ ಮೊಬೈಲ್​ ಫೋನ್​ ಸ್ವಿಚ್​ಆಫ್​ ಆಗಿದೆ!

ಸಿದ್ದಾರ್ಥ್ ನಿಧನದ ಸುದ್ದಿ ಕೇಳಿ ಅವರ ಆಪ್ತ ಸ್ನೇಹಿತೆ ಶೆಹನಾಜ್​ ಗಿಲ್​ ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ಹಾಗಾಗಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಅವರ ಮೊಬೈಲ್​ ಫೋನ್​ ಸ್ವಿಚ್​ ಆಫ್​ ಆಗಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ನಡೆಯುತ್ತಿವೆ. ಆಸ್ಪತ್ರೆಯವರು ಮೃತದೇಹವನ್ನು ನೀಡಿದ ಬಳಿಕ ಇಂದು (ಸೆ.3) ಅಂತ್ಯ ಸಂಸ್ಕಾರ ನಡೆಯಲಿದೆ.

ಸಿದ್ದಾರ್ಥ್​-ಶೆಹನಾಜ್​ ನಡುವೆ ಇತ್ತು ಆಪ್ತತೆ:

ಬಿಗ್​ ಬಾಸ್​ ಸೀಸನ್​ 13ರಲ್ಲಿ ಶೆಹನಾಜ್​ ಗಿಲ್​ ಮತ್ತು ಸಿದ್ದಾರ್ಥ್​ ಶುಕ್ಲಾ ಜೊತೆಯಾಗಿ ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನ ಅವರಿಬ್ಬರು ಜೊತೆಯಾಗಿ ಹೆಚ್ಚು ಕಾಲ ಕಳೆಯುತ್ತಿದ್ದರು. ದೊಡ್ಮನೆಯಿಂದ ಹೊರಬಂದ ಬಳಿಕವೂ ಅವರ ನಡುವಿನ ಗೆಳೆತನ ಮುಂದುವರಿದಿತ್ತು. ಇತ್ತೀಚೆಗೆ ಹಲವು ಬಾರಿ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದರು. ಕೆಲವು ರಿಯಾಲಿಟಿ ಶೋಗಳಲ್ಲಿ ಜೊತೆಯಾಗಿ ಪರ್ಫಾಮ್​ ಮಾಡಿದ್ದರು. ಒಂದೆರಡು ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಜೋಡಿ ಆಗಿದ್ದರು. ಆದರೆ ಈಗ ಗೆಳೆಯನನ್ನು ಕಳೆದುಕೊಂಡು ಶೆಹನಾಜ್​ ಒಂಟಿ ಆಗಿದ್ದಾರೆ.

ಶೆಹನಾಜ್​ಗೆ ಧೈರ್ಯ ತುಂಬುತ್ತಿರುವ ಕುಟುಂಬ:

ಮಾಧ್ಯಮವೊಂದಕ್ಕೆ ಅವರ ತಂದೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಈಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆಗಿರುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಶೆಹನಾಜ್​ ಜೊತೆ ಮಾತನಾಡಿದ್ದೇನೆ. ಆಕೆಯ ಪರಿಸ್ಥಿತಿ ಚೆನ್ನಾಗಿಲ್ಲ. ಅವಳ ಜೊತೆ ಇರಲು ನನ್ನ ಮಗ ಈಗ ಮುಂಬೈಗೆ ತೆರಳುತ್ತಿದ್ದಾನೆ. ನಂತರ ನಾನು ಕೂಡ ಅಲ್ಲಿಗೆ ಹೋಗುತ್ತೇನೆ’ ಎಂದು ಶೆಹನಾಜ್​ ತಂದೆ ಹೇಳಿದ್ದಾರೆ. ಈವರೆಗೂ ಶೆಹನಾಜ್​ ಗಿಲ್​ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಸಿದ್ಧಾರ್ಥ್​ ಶುಕ್ಲಾದು ಸಹಜ ಸಾವೇ? ಮುಂಬೈ ಪೊಲೀಸರಿಗೆ ಕುಟುಂಬದವರು ಹೇಳಿದ್ದೇನು?

ಸಿದ್ಧಾರ್ಥ್​ ಶುಕ್ಲಾ ಜೊತೆ ಕೆಲಸ ಮಾಡಿದ್ದ ಸಂಜನಾ ಗಲ್ರಾನಿ; ಜೀವನ ಇಷ್ಟೇನಾ ಎಂದ ನಟಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?