AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehzada: 2022ರಲ್ಲಿ ಗೆದಿದ್ದ ಕಾರ್ತಿಕ್​ ಆರ್ಯನ್​ಗೆ ಈ ವರ್ಷ ಆರಂಭದಲ್ಲೇ ಆಘಾತ? ಕಷ್ಟದಲ್ಲಿ ‘ಶೆಹಜಾದಾ’ ಭವಿಷ್ಯ

Shehzada Movie Box Office Collection: ಟ್ರೇಡ್​ ವಿಶ್ಲೇಷಕರ ಅಂದಾಜಿನ ಪ್ರಕಾರ ‘ಶೆಹಜಾದಾ’ ಸಿನಿಮಾ ಮೊದಲ ದಿನ ಕೇವಲ 6ರಿಂದ 7 ಕೋಟಿ ರೂಪಾಯಿ ಕಮಾಯಿ ಮಾಡಲಿದೆ. ಇದು ಒಬ್ಬ ಸ್ಟಾರ್​ ನಟನ ಚಿತ್ರಕ್ಕೆ ತೀರಾ ಕಳಪೆ ಕಲೆಕ್ಷನ್​.

Shehzada: 2022ರಲ್ಲಿ ಗೆದಿದ್ದ ಕಾರ್ತಿಕ್​ ಆರ್ಯನ್​ಗೆ ಈ ವರ್ಷ ಆರಂಭದಲ್ಲೇ ಆಘಾತ? ಕಷ್ಟದಲ್ಲಿ ‘ಶೆಹಜಾದಾ’ ಭವಿಷ್ಯ
ಕಾರ್ತಿಕ್ ಆರ್ಯನ್
ಮದನ್​ ಕುಮಾರ್​
|

Updated on:Feb 17, 2023 | 10:09 PM

Share

ನಟ ಕಾರ್ತಿಕ್​ ಆರ್ಯನ್ (Kartik Aaryan)​ ಅವರು ಬಾಲಿವುಡ್​ನಲ್ಲಿ ಭರವಸೆಯ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಏಳು-ಬೀಳು ಕಂಡಿರುವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. 2022ರಲ್ಲಿ ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳು ನೆಲ ಕಚ್ಚಿದ್ದವು. ಆದರೆ ಕಾರ್ತಿಕ್​ ಆರ್ಯನ್​ ಅಭಿನಯದ ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಆ ಚಿತ್ರ ಬರೋಬ್ಬರಿ 185 ಕೋಟಿ ರೂಪಾಯಿ ಗಳಿಸಿತ್ತು. ಅಷ್ಟು ದೊಡ್ಡ ಗೆಲುವು ಪಡೆದು ಬೀಗಿದ್ದ ಕಾರ್ತಿಕ್​ ಆರ್ಯನ್​ ಅವರು ಈಗ ‘ಶೆಹಜಾದಾ’ (Shehzada Movie) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಆದರೆ ಈ ಚಿತ್ರಕ್ಕೆ ನೀರಸ ಓಪನಿಂಗ್​ ಸಿಕ್ಕಿದೆ.

‘ಶೆಹಜಾದಾ’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಮತ್ತು ಕೃತಿ ಸನೋನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಫೆಬ್ರವರಿ 10ರಂದು ಬಿಡುಗಡೆ ಆಗಬೇಕಿತ್ತು. ಆದರೆ ‘ಪಠಾಣ್​’ ಚಿತ್ರದ ಅಬ್ಬರ ಜೋರಾಗಿ ಇದ್ದಿದ್ದರಿಂದ ‘ಶೆಹಜಾದಾ’ ರಿಲೀಸ್​ ದಿನಾಂಕ ಮುಂದೂಡಿಕೆ ಆಯಿತು. ಅಂತೂ ಫೆಬ್ರವರಿ 17ರಂದು ಈ ಸಿನಿಮಾ ರಿಲೀಸ್​ ಆಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡುವುದು ಕಷ್ಟ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಸಡನ್ನಾಗಿ ಮಾಜಿ ಲವರ್ ಸಿಕ್ಕರೆ? ಸಾರಾ ಅಲಿ ಖಾನ್​ ಕಂಡು ಕಾರ್ತಿಕ್​ ಆರ್ಯನ್​ ಏನ್​ ಮಾಡಿದ್ರು ನೋಡಿ..

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಟ್ರೇಡ್​ ವಿಶ್ಲೇಷಕರ ಅಂದಾಜಿನ ಪ್ರಕಾರ ‘ಶೆಹಜಾದಾ’ ಸಿನಿಮಾ ಮೊದಲ ದಿನ ಕೇವಲ 6ರಿಂದ 7 ಕೋಟಿ ರೂಪಾಯಿ ಕಮಾಯಿ ಮಾಡಲಿದೆ. ಇದು ಒಬ್ಬ ಸ್ಟಾರ್​ ನಟನ ಚಿತ್ರಕ್ಕೆ ತೀರಾ ಕಳಪೆ ಕಲೆಕ್ಷನ್​. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸದೇ ಇದ್ದರೆ ಚಿತ್ರದ ಭವಿಷ್ಯ ಕಷ್ಟ ಆಗಲಿದೆ. ಇನ್ನೂ ಕೆಲವು ಕಡೆಗಳಲ್ಲಿ ‘ಪಠಾಣ್​’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಜೊತೆಗೆ ಹಾಲಿವುಡ್​ ಚಿತ್ರಗಳು ರಿಲೀಸ್​ ಆಗಿ ಪೈಪೋಟಿ ನೀಡುತ್ತಿವೆ. ಇದರಿಂದ ‘ಶೆಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ: 175 ಕೋಟಿ ರೂ. ಗಳಿಕೆ​ ಮಾಡಿದ್ರೂ ಕಿಂಚಿತ್ತೂ ಗರ್ವ ಇಲ್ಲದೆ ಬೀದಿ ಮಕ್ಕಳ ಜತೆ ಮಾತಾಡಿದ ಕಾರ್ತಿಕ್​ ಆರ್ಯನ್​

‘ಶೆಹಜಾದಾ’ ಸಿನಿಮಾದ ಕಲೆಕ್ಷನ್​ ಕಡಿಮೆ ಆಗಲು ಇನ್ನೊಂದು ಪ್ರಮುಖ ಕಾರಣ ಇದೆ. ಇದು ತೆಲುಗಿನ ‘ಅಲಾ ವೈಕುಂಠಪುರಮುಲೋ’ ಸಿನಿಮಾದ ಹಿಂದಿ ರಿಮೇಕ್​. ಈಗಾಗಲೇ ಜನರು ತೆಲುಗಿನ ಸಿನಿಮಾವನ್ನು ನೋಡಿ ಎಂಜಾಯ್​ ಮಾಡಿದ್ದಾರೆ. ಅಲ್ಲು ಅರ್ಜುನ್​ ನಟನೆಯ ಆ ಸಿನಿಮಾ ಒಟಿಟಿಯಲ್ಲಿ ಲಭ್ಯವಿರುವುದರಿಂದ ಬಹುತೇಕರಿಗೆ ಕಥೆ ಏನೆಂಬುದು ತಿಳಿದಿದೆ. ಹಾಗಾಗಿ ಮತ್ತೆ ಚಿತ್ರಮಂದಿರಕ್ಕೆ ಬಂದು ರಿಮೇಕ್​ ನೋಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದು ಕಾರ್ತಿಕ್​ ಆರ್ಯನ್​ ನಟನೆಯ ಮೊದಲ ಸಾಹಸಪ್ರಧಾನ ಸಿನಿಮಾ. ಆದರೂ ಪ್ರೇಕ್ಷಕರು ಈ ಚಿತ್ರದ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:09 pm, Fri, 17 February 23

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ