AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shehzada: 2022ರಲ್ಲಿ ಗೆದಿದ್ದ ಕಾರ್ತಿಕ್​ ಆರ್ಯನ್​ಗೆ ಈ ವರ್ಷ ಆರಂಭದಲ್ಲೇ ಆಘಾತ? ಕಷ್ಟದಲ್ಲಿ ‘ಶೆಹಜಾದಾ’ ಭವಿಷ್ಯ

Shehzada Movie Box Office Collection: ಟ್ರೇಡ್​ ವಿಶ್ಲೇಷಕರ ಅಂದಾಜಿನ ಪ್ರಕಾರ ‘ಶೆಹಜಾದಾ’ ಸಿನಿಮಾ ಮೊದಲ ದಿನ ಕೇವಲ 6ರಿಂದ 7 ಕೋಟಿ ರೂಪಾಯಿ ಕಮಾಯಿ ಮಾಡಲಿದೆ. ಇದು ಒಬ್ಬ ಸ್ಟಾರ್​ ನಟನ ಚಿತ್ರಕ್ಕೆ ತೀರಾ ಕಳಪೆ ಕಲೆಕ್ಷನ್​.

Shehzada: 2022ರಲ್ಲಿ ಗೆದಿದ್ದ ಕಾರ್ತಿಕ್​ ಆರ್ಯನ್​ಗೆ ಈ ವರ್ಷ ಆರಂಭದಲ್ಲೇ ಆಘಾತ? ಕಷ್ಟದಲ್ಲಿ ‘ಶೆಹಜಾದಾ’ ಭವಿಷ್ಯ
ಕಾರ್ತಿಕ್ ಆರ್ಯನ್
ಮದನ್​ ಕುಮಾರ್​
|

Updated on:Feb 17, 2023 | 10:09 PM

Share

ನಟ ಕಾರ್ತಿಕ್​ ಆರ್ಯನ್ (Kartik Aaryan)​ ಅವರು ಬಾಲಿವುಡ್​ನಲ್ಲಿ ಭರವಸೆಯ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಏಳು-ಬೀಳು ಕಂಡಿರುವ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. 2022ರಲ್ಲಿ ದೊಡ್ಡ ದೊಡ್ಡ ಸ್ಟಾರ್​ ನಟರ ಸಿನಿಮಾಗಳು ನೆಲ ಕಚ್ಚಿದ್ದವು. ಆದರೆ ಕಾರ್ತಿಕ್​ ಆರ್ಯನ್​ ಅಭಿನಯದ ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಆ ಚಿತ್ರ ಬರೋಬ್ಬರಿ 185 ಕೋಟಿ ರೂಪಾಯಿ ಗಳಿಸಿತ್ತು. ಅಷ್ಟು ದೊಡ್ಡ ಗೆಲುವು ಪಡೆದು ಬೀಗಿದ್ದ ಕಾರ್ತಿಕ್​ ಆರ್ಯನ್​ ಅವರು ಈಗ ‘ಶೆಹಜಾದಾ’ (Shehzada Movie) ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಆದರೆ ಈ ಚಿತ್ರಕ್ಕೆ ನೀರಸ ಓಪನಿಂಗ್​ ಸಿಕ್ಕಿದೆ.

‘ಶೆಹಜಾದಾ’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಮತ್ತು ಕೃತಿ ಸನೋನ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಫೆಬ್ರವರಿ 10ರಂದು ಬಿಡುಗಡೆ ಆಗಬೇಕಿತ್ತು. ಆದರೆ ‘ಪಠಾಣ್​’ ಚಿತ್ರದ ಅಬ್ಬರ ಜೋರಾಗಿ ಇದ್ದಿದ್ದರಿಂದ ‘ಶೆಹಜಾದಾ’ ರಿಲೀಸ್​ ದಿನಾಂಕ ಮುಂದೂಡಿಕೆ ಆಯಿತು. ಅಂತೂ ಫೆಬ್ರವರಿ 17ರಂದು ಈ ಸಿನಿಮಾ ರಿಲೀಸ್​ ಆಗಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡುವುದು ಕಷ್ಟ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಸಡನ್ನಾಗಿ ಮಾಜಿ ಲವರ್ ಸಿಕ್ಕರೆ? ಸಾರಾ ಅಲಿ ಖಾನ್​ ಕಂಡು ಕಾರ್ತಿಕ್​ ಆರ್ಯನ್​ ಏನ್​ ಮಾಡಿದ್ರು ನೋಡಿ..

ಇದನ್ನೂ ಓದಿ
Image
ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
Image
ಬಾಲಿವುಡ್​ಗಿತ್ತು ಅಂಡರ್​​ವರ್ಲ್ಡ್​​ ಸಂಪರ್ಕ; ಕರಾಳ ಸತ್ಯ ಬಿಚ್ಚಿಟ್ಟ ಖ್ಯಾತ ನಟಿ
Image
ಬಾಲಿವುಡ್​ vs ಸೌತ್ ಎಂದರೆ ನನಗೆ ಸಿಟ್ಟೇ ಬರುತ್ತದೆ; ಅಕ್ಷಯ್ ಕುಮಾರ್ ನೇರ ನುಡಿ
Image
ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

ಟ್ರೇಡ್​ ವಿಶ್ಲೇಷಕರ ಅಂದಾಜಿನ ಪ್ರಕಾರ ‘ಶೆಹಜಾದಾ’ ಸಿನಿಮಾ ಮೊದಲ ದಿನ ಕೇವಲ 6ರಿಂದ 7 ಕೋಟಿ ರೂಪಾಯಿ ಕಮಾಯಿ ಮಾಡಲಿದೆ. ಇದು ಒಬ್ಬ ಸ್ಟಾರ್​ ನಟನ ಚಿತ್ರಕ್ಕೆ ತೀರಾ ಕಳಪೆ ಕಲೆಕ್ಷನ್​. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸದೇ ಇದ್ದರೆ ಚಿತ್ರದ ಭವಿಷ್ಯ ಕಷ್ಟ ಆಗಲಿದೆ. ಇನ್ನೂ ಕೆಲವು ಕಡೆಗಳಲ್ಲಿ ‘ಪಠಾಣ್​’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಜೊತೆಗೆ ಹಾಲಿವುಡ್​ ಚಿತ್ರಗಳು ರಿಲೀಸ್​ ಆಗಿ ಪೈಪೋಟಿ ನೀಡುತ್ತಿವೆ. ಇದರಿಂದ ‘ಶೆಹಜಾದಾ’ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ: 175 ಕೋಟಿ ರೂ. ಗಳಿಕೆ​ ಮಾಡಿದ್ರೂ ಕಿಂಚಿತ್ತೂ ಗರ್ವ ಇಲ್ಲದೆ ಬೀದಿ ಮಕ್ಕಳ ಜತೆ ಮಾತಾಡಿದ ಕಾರ್ತಿಕ್​ ಆರ್ಯನ್​

‘ಶೆಹಜಾದಾ’ ಸಿನಿಮಾದ ಕಲೆಕ್ಷನ್​ ಕಡಿಮೆ ಆಗಲು ಇನ್ನೊಂದು ಪ್ರಮುಖ ಕಾರಣ ಇದೆ. ಇದು ತೆಲುಗಿನ ‘ಅಲಾ ವೈಕುಂಠಪುರಮುಲೋ’ ಸಿನಿಮಾದ ಹಿಂದಿ ರಿಮೇಕ್​. ಈಗಾಗಲೇ ಜನರು ತೆಲುಗಿನ ಸಿನಿಮಾವನ್ನು ನೋಡಿ ಎಂಜಾಯ್​ ಮಾಡಿದ್ದಾರೆ. ಅಲ್ಲು ಅರ್ಜುನ್​ ನಟನೆಯ ಆ ಸಿನಿಮಾ ಒಟಿಟಿಯಲ್ಲಿ ಲಭ್ಯವಿರುವುದರಿಂದ ಬಹುತೇಕರಿಗೆ ಕಥೆ ಏನೆಂಬುದು ತಿಳಿದಿದೆ. ಹಾಗಾಗಿ ಮತ್ತೆ ಚಿತ್ರಮಂದಿರಕ್ಕೆ ಬಂದು ರಿಮೇಕ್​ ನೋಡಲು ಜನರು ಹಿಂದೇಟು ಹಾಕುತ್ತಿದ್ದಾರೆ. ಇದು ಕಾರ್ತಿಕ್​ ಆರ್ಯನ್​ ನಟನೆಯ ಮೊದಲ ಸಾಹಸಪ್ರಧಾನ ಸಿನಿಮಾ. ಆದರೂ ಪ್ರೇಕ್ಷಕರು ಈ ಚಿತ್ರದ ಬಗ್ಗೆ ಆಸಕ್ತಿ ತೋರಿಸುತ್ತಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:09 pm, Fri, 17 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ