AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ 75 ಕೋಟಿ ರೂಪಾಯಿ ನೀಡಿ’; ಶಿಲ್ಪಾ ಶೆಟ್ಟಿಗೆ ಶೆರ್ಲಿನ್ ಕಡೆಯಿಂದ ಬಂತು ಹೊಸ ಆಗ್ರಹ

ಶಿಲ್ಪಾ ಹಾಗೂ ರಾಜ್​ ಕುಂದ್ರಾ ಅವರಿಂದ ನನಗೆ ಮಾನಸಿಕವಾಗಿ ಹಿಂಸೆ ಆಗಿದೆ. ಇದಕ್ಕೆ ಪರಿಹಾರವಾಗಿ ಅವರು 75 ಕೋಟಿ ರೂಪಾಯಿ ನೀಡಬೇಕು ಎಂದು ಶೆರ್ಲಿನ್​ ಆಗ್ರಹಿಸಿದ್ದಾರೆ.

‘ನನಗೆ 75 ಕೋಟಿ ರೂಪಾಯಿ ನೀಡಿ’; ಶಿಲ್ಪಾ ಶೆಟ್ಟಿಗೆ ಶೆರ್ಲಿನ್ ಕಡೆಯಿಂದ ಬಂತು ಹೊಸ ಆಗ್ರಹ
ಶೆರ್ಲಿನ್ ಚೋಪ್ರಾ, ರಾಜ್ ಕುಂದ್ರಾ, ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Oct 28, 2021 | 7:38 PM

Share

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಹಲವು ದಿನಗಳ ಕಾಲ ಜೈಲಿನಲ್ಲಿ ಕಳೆದು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ. ಈ ಮಧ್ಯೆ ನಟಿ ಶೆರ್ಲಿನ್​ ಚೋಪ್ರಾ ನಾನಾ ರೀತಿಯ ಆರೋಪಗಳನ್ನು ಮಾಡುತ್ತಲೇ ಬಂದಿದ್ದರು. ತಮ್ಮನ್ನು ರಾಜ್​ ಕುಂದ್ರಾ ಅವರು ಮೋಸದಿಂದ ಅಶ್ಲೀಲ ಸಿನಿಮಾ ದಂಧೆಗೆ ಎಳೆದುತಂದರು ಎಂದು ಶೆರ್ಲಿನ್​ ಚೋಪ್ರಾ ಹೇಳಿಕೊಂಡಿದ್ದಿದೆ. ಈಗ ಶಿಲ್ಪಾ ಶೆಟ್ಟಿ ಹಾಗೂ ರಾಜ್​ ಕುಂದ್ರಾ ಅವರು 75 ಕೋಟಿ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ರಾಜ್​ ಕುಂದ್ರಾ ತಮಗೆ ಮೋಸ ಮಾಡಿದ್ದಾರೆ ಎಂದು ಶೆರ್ಲಿನ್​ ಹೇಳಿಕೊಂಡಿದ್ದರು. ‘ಮೊದಲಿಗೆ ನಾನು ಅವರ ಕಂಪನಿ ಜೊತೆ ಒಪ್ಪಂದ ಮಾಡಿಕೊಂಡು ನಟಿಸಲು ಶುರುಮಾಡಿದೆ. ಆರಂಭದಲ್ಲಿ ಗ್ಲಾಮರಸ್​ ವಿಡಿಯೋ, ನಂತರ ಬೋಲ್ಡ್​ ವಿಡಿಯೋ, ಬಳಿಕ ಅರೆ ನಗ್ನ ವಿಡಿಯೋ ಮಾಡಿದೆ. ಕೊನೆಗೆ ಸಂಪೂರ್ಣ ನಗ್ನವಾಗಿ ನಟಿಸಬೇಕಾಯಿತು. ಇದನ್ನು ಎಲ್ಲರೂ ಮಾಡುತ್ತಾರೆ. ಹಾಗಾಗಿ ಇದರಲ್ಲಿ ತಪ್ಪೇನೂ ಇಲ್ಲ ಅಂತ ನನ್ನನ್ನು ನಂಬಿಸಲಾಗಿತ್ತು’ ಎಂದು ಶೆರ್ಲಿನ್​ ಚೋಪ್ರಾ ಆರೋಪಿಸಿದ್ದರು. ಇದರಿಂದ ಮಾನ ಹಾನಿ ಆಗಿದೆ ಎಂದು ಶಿಲ್ಪಾ ಶೆಟ್ಟಿ ಕೋರ್ಟ್​ ಮೆಟ್ಟಿಲೆರಿದ್ದರು. ಅಲ್ಲದೆ, 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈಗ ಶೆರ್ಲಿನ್​ ಸರದಿ.

ಶಿಲ್ಪಾ ಹಾಗೂ ರಾಜ್​ ಕುಂದ್ರಾ ಅವರಿಂದ ನನಗೆ ಮಾನಸಿಕವಾಗಿ ಹಿಂಸೆ ಆಗಿದೆ. ಇದಕ್ಕೆ ಪರಿಹಾರವಾಗಿ ಅವರು 75 ಕೋಟಿ ರೂಪಾಯಿ ನೀಡಬೇಕು ಎಂದು ಶೆರ್ಲಿನ್​ ಆಗ್ರಹಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಅವರು ದಂಪತಿಗೆ ನೋಟಿಸ್ ಕೂಡ ನೀಡಿದ್ದಾರೆ.

ಸ್ಟಾರ್​ ನಟರ ಪತ್ನಿಯರು ಕೂಡ ಡ್ರಗ್ಸ್​ ಸೇವಿಸುತ್ತಾರೆ ಎಂದು ನಟಿ ಶೆರ್ಲಿನ್​ ಚೋಪ್ರಾ ಬಹಳ ಹಿಂದೆಯೇ ಹೇಳಿದ್ದರು. ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಬಳಿಕ ಬಾಲಿವುಡ್​ನಲ್ಲಿರುವ ಡ್ರಗ್ಸ್​ ಜಾಲದ ಬಗ್ಗೆ ತನಿಖೆ ಆರಂಭ ಆಯಿತು. ಆಗ ನೀಡಿದ ಸಂದರ್ಶನದಲ್ಲಿ ಶೆರ್ಲಿನ್​ ಚೋಪ್ರಾ ಅವರು ಕೆಲವು ಶಾಕಿಂಗ್​ ಮಾಹಿತಿ ಹಂಚಿಕೊಂಡಿದ್ದರು. ಶಾರುಖ್​ ಖಾನ್​ ನೀಡಿದ್ದ ಪಾರ್ಟಿಯಲ್ಲಿ ನಶೆ ತುಂಬಿ ತುಳುಕುತ್ತಿತ್ತು ಎಂಬ ವಿಚಾರವನ್ನು ಅವರು ಬಾಯಿ ಬಿಟ್ಟಿದ್ದರು.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾ ಜಗತ್ತಿನಿಂದ ಹೊರಬನ್ನಿ, ನಿಮಗೆ ಜನ ನಮಸ್ಕಾರ ಮಾಡ್ತಾರೆ’; ಶಿಲ್ಪಾ ಶೆಟ್ಟಿಗೆ ಕುಟುಕಿದ ಶೆರ್ಲಿನ್​ ಚೋಪ್ರಾ

‘ಶಾರುಖ್​ ನೀಡ್ತಿದ್ದ ಪಾರ್ಟಿಯಲ್ಲಿ ಸ್ಟಾರ್​ ನಟರ ಪತ್ನಿಯರು ಶೌಚಾಲಯಕ್ಕೆ ತೆರಳಿ ಡ್ರಗ್ಸ್​ ಸೇವಿಸಿದ್ರು’; ಶೆರ್ಲಿನ್​ ಚೋಪ್ರಾ

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!