‘ಶಾರುಖ್​ ನೀಡ್ತಿದ್ದ ಪಾರ್ಟಿಯಲ್ಲಿ ಸ್ಟಾರ್​ ನಟರ ಪತ್ನಿಯರು ಶೌಚಾಲಯಕ್ಕೆ ತೆರಳಿ ಡ್ರಗ್ಸ್​ ಸೇವಿಸಿದ್ರು’; ಶೆರ್ಲಿನ್​ ಚೋಪ್ರಾ

ಶೆರ್ಲಿನ್​ ಚೋಪ್ರಾ ನೀಡಿದ್ದ ಸಂದರ್ಶನದ ವಿಡಿಯೋ ವೈರಲ್​ ಆಗುತ್ತಿದೆ. ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಪರಿಣಾಮವಾಗಿ ಬಾಲಿವುಡ್​ನ ಡ್ರಗ್ಸ್​ ಪುರಾಣ ಮತ್ತೆ ಮುನ್ನೆಲೆಗೆ ಬಂದಿದೆ.

‘ಶಾರುಖ್​ ನೀಡ್ತಿದ್ದ ಪಾರ್ಟಿಯಲ್ಲಿ ಸ್ಟಾರ್​ ನಟರ ಪತ್ನಿಯರು ಶೌಚಾಲಯಕ್ಕೆ ತೆರಳಿ ಡ್ರಗ್ಸ್​ ಸೇವಿಸಿದ್ರು’; ಶೆರ್ಲಿನ್​ ಚೋಪ್ರಾ
ಶೆರ್ಲಿನ್ ಚೋಪ್ರಾ, ಶಾರುಖ್ ಖಾನ್
Follow us
| Updated By: Digi Tech Desk

Updated on:Oct 07, 2021 | 11:09 AM

ಬಾಲಿವುಡ್ ಸೆಲೆಬ್ರಿಟಿಗಳ ಮೇಲೆ ಮಾದಕ ವಸ್ತು ಸೇವನೆಯ ಆರೋಪ ಆಗಾಗ ಕೇಳಿಬರುತ್ತಲೇ ಇರುತ್ತದೆ. ಶಾಕಿಂಗ್​ ವಿಚಾರ ಏನೆಂದರೆ, ಸ್ಟಾರ್​ ನಟರ ಪತ್ನಿಯರು ಕೂಡ ಡ್ರಗ್ಸ್​ ಸೇವಿಸುತ್ತಾರೆ ಎಂದು ನಟಿ ಶೆರ್ಲಿನ್​ ಚೋಪ್ರಾ ಬಹಳ ಹಿಂದೆಯೇ ಹೇಳಿದ್ದರು. ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಬಳಿಕ ಬಾಲಿವುಡ್​ನಲ್ಲಿರುವ ಡ್ರಗ್ಸ್​ ಜಾಲದ ಬಗ್ಗೆ ತನಿಖೆ ಆರಂಭ ಆಯಿತು. ಆಗ ನೀಡಿದ ಸಂದರ್ಶನದಲ್ಲಿ ಶೆರ್ಲಿನ್​ ಚೋಪ್ರಾ ಅವರು ಕೆಲವು ಶಾಕಿಂಗ್​ ಮಾಹಿತಿ ಹಂಚಿಕೊಂಡಿದ್ದರು. ಶಾರುಖ್​ ಖಾನ್​ ನೀಡಿದ್ದ ಪಾರ್ಟಿಯಲ್ಲಿ ನಶೆ ತುಂಬಿ ತುಳುಕುತ್ತಿತ್ತು ಎಂಬ ವಿಚಾರವನ್ನು ಅವರು ಬಾಯಿ ಬಿಟ್ಟಿದ್ದರು.

ಆ ಸಂದರ್ಶನದ ವಿಡಿಯೋವನ್ನು ಶೆರ್ಲಿನ್​ ಚೋಪ್ರಾ ಈಗ ಮತ್ತೆ ಶೇರ್​ ಮಾಡಿಕೊಂಡಿದ್ದಾರೆ. ‘ಪಾರ್ಟಿಯಲ್ಲಿ ಡ್ಯಾನ್ಸ್​ ಮಾಡುತ್ತ ನನಗೆ ಸುಸ್ತಾಯಿತು. ಹಾಗಾಗಿ ಶೌಚಾಲಯಕ್ಕೆ ತೆರಳಿದೆ. ಬಾಗಿಲು ತೆರೆದು ನೋಡಿದಾಗ ನನಗೆ ಶಾಕ್​ ಆಯಿತು. ನಾನೇನಾದರೂ ತಪ್ಪಾದ ಜಾಗಕ್ಕೆ ಬಂದುಬಿಟ್ನಾ ಎಂದು ಅನುಮಾನ ಬಂತು. ಹಾಗೇನೂ ಇಲ್ಲ, ಅದು ಸರಿಯಾದ ಜಾಗವೇ ಆಗಿತ್ತು. ಅಲ್ಲಿ ಸ್ಟಾರ್​ ನಟರ ಹೆಂಡತಿಯರು ಕನ್ನಡಿ ಮುಂದೆ ನಿಂತುಕೊಂಡು ಕೊಕೇನ್​ ಸೇವಿಸುತ್ತಿದ್ದರು’ ಎಂದು ಶೆರ್ಲಿನ್​ ಆ ಸಂದರ್ಶನದಲ್ಲಿ ಹೇಳಿದ್ದರು.

‘ಅಂಥ ಒಂದು ದೃಶ್ಯ ನೋಡಿದಾಗ ನನಗೆ ಶಾಕ್​ ಆಯಿತು. ಆದರೆ ಅವರ ಕಡೆಗೆ ಸುಮ್ಮನೆ ಸ್ಮೈಲ್​ ಮಾಡಿ ಅದನ್ನೆಲ್ಲ ನಿರ್ಲಕ್ಷ ಮಾಡಿದೆ. ಅವರ ಪಾಡಿಗೆ ಅವರು ಎಂಜಾಯ್​ ಮಾಡುತ್ತಿದ್ದರು. ಶಾರುಖ್​ ಖಾನ್​ ಮತ್ತು ಅವರ ಸ್ನೇಹಿತರನ್ನು ಭೇಟಿ ಮಾಡಿದ ಬಳಿಕ ನಾನು ಅಲ್ಲಿಂದ ಜಾಗ ಖಾಲಿ ಮಾಡಿದೆ. ಬಾಲಿವುಡ್​ನಲ್ಲಿ ಎಂಥ ಪಾರ್ಟಿಗಳು ಆಗುತ್ತವೆ ಅಂತ ಅಂದು ನನಗೆ ಅರ್ಥವಾಯಿತು’ ಎಂದಿದ್ದರು ಶೆರ್ಲಿನ್​.

ಸದ್ಯ ಈ ವಿಡಿಯೋ ವೈರಲ್​ ಆಗುತ್ತಿದೆ. ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅದರ ಪರಿಣಾಮವಾಗಿ ಬಾಲಿವುಡ್​ನ ಡ್ರಗ್ಸ್​ ಪುರಾಣ ಮತ್ತೆ ಮುನ್ನೆಲೆಗೆ ಬಂದಿದೆ. ಆರ್ಯನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಮಗನ ಎಡವಟ್ಟಿನಿಂದಾಗಿ ಶಾರುಖ್​ ಸಿನಿಮಾಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಆಗುತ್ತಿದೆ. ಅವರು ನಟಿಸುತ್ತಿದ್ದ ಎಲ್ಲ ಚಿತ್ರಗಳ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ:

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

Published On - 8:17 am, Thu, 7 October 21

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ