AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆರ್ಲಿನ್​ ನೀಡಿದ ಮಾಹಿತಿಯಿಂದ ರಾಜ್​ ಕುಂದ್ರಾಗೆ ಮತ್ತಷ್ಟು ಸಂಕಷ್ಟ; ಚೋಪ್ರಾ ಹಂಚಿಕೊಂಡಿದ್ದೇನು?

ನಟಿ ಶೆರ್ಲಿನ್​ ಚೋಪ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರಿಗೆ ಏನನ್ನು ಕೇಳಲಾಗಿತ್ತು ಎಂಬುದಕ್ಕೆ ಇಲ್ಲಿದೆ ಉತ್ತರ.

ಶೆರ್ಲಿನ್​ ನೀಡಿದ ಮಾಹಿತಿಯಿಂದ ರಾಜ್​ ಕುಂದ್ರಾಗೆ ಮತ್ತಷ್ಟು ಸಂಕಷ್ಟ; ಚೋಪ್ರಾ ಹಂಚಿಕೊಂಡಿದ್ದೇನು?
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ
TV9 Web
| Edited By: |

Updated on: Aug 09, 2021 | 4:08 PM

Share

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನ ನಡೆದು ಕೆಲ ವಾರಗಳು ಕಳೆದಿವೆ. ಅವರ ಜಾಮೀನು ಅರ್ಜಿ ಕೂಡ ವಜಾಗೊಂಡಿದ್ದು, ಜೈಲಿನಲ್ಲಿ ಕಳೆಯೋದು ಅನಿವಾರ್ಯ ಆಗಿದೆ. ಈ ಮಧ್ಯೆ ನೀಲಿ ಚಿತ್ರ ಪ್ರಕರಣದಲ್ಲಿ ನಟಿ ಶೆರ್ಲಿನ್​ ಚೋಪ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರಿಗೆ ಏನನ್ನು ಕೇಳಲಾಗಿತ್ತು ಎಂಬುದಕ್ಕೆ ಇಲ್ಲಿದೆ ಉತ್ತರ.

ವಿಚಾರಣೆ ಮುಗಿಸಿ ಬಂದ ನಂತರ ಮಾತನಾಡಿದ ಶೆರ್ಲಿನ್ ಚೋಪ್ರಾ, ‘ಕೆಲವು ದಿನಗಳ ಹಿಂದೆ ತನಿಖಾಧಿಕಾರಿಗಳು ನನಗೆ ಸಮನ್ಸ್ ನೀಡಿದ್ದರು. ನಾನು ಇಂದು ಅಧಿಕಾರಿಗಳ ಮುಂದೆ ಹಾಜರಾಗಿದ್ದೆ. ಈ ವೇಳೆ ರಾಜ್ ಕುಂದ್ರಾಗೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ನನ್ನನ್ನು ಕೇಳಿದರು. ಆರ್ಮ್ಸ್‌ಪ್ರೈಮ್‌ ಆ್ಯಪ್​​ನೊಂದಿಗೆ ನನ್ನ ಒಪ್ಪಂದದ ಬಗ್ಗೆ, ಒಪ್ಪಂದದ ನಿಯಮಗಳು ಮತ್ತು ಷರತ್ತುಗಳೇನು ಎಂದು ಅವರು ನನ್ನನ್ನು ಕೇಳಿದರು. ಎಷ್ಟು ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದೀರಿ ಎಂಬುದನ್ನು ಕೇಳಿದರು’ ಎಂದಿದ್ದಾರೆ ಶೆರ್ಲಿನ್​.

‘ರಾಜ್ ಕುಂದ್ರಾ ಅವರೊಂದಿಗಿನ ನನ್ನ ಸಂಬಂಧ ಹೇಗಿದೆ ಎಂದು ಕೇಳಿದರು. ಅವರ ಮಾಲಿಕತ್ವದ ಇತರ ಕಂಪನಿಗಳ ಬಗ್ಗೆ ನಿಮಗೆ ಏನಾದರೂ ಮಾಹಿತಿ ಇದೆಯೇ? ಎಂದು ನನ್ನನ್ನು ಪ್ರಶ್ನಿಸಿದರು. ದಯವಿಟ್ಟು ಈ ನೀಲಿ ಚಿತ್ರ ದಂಧೆಗೆ ಬಲಿಯಾದ ಎಲ್ಲ ಮಹಿಳೆಯರು, ಕಲಾವಿದರಿಗೆ ನ್ಯಾಯ ಕೊಡಿಸಿ ಎಂದು ಕೇಳಿದೆ. ಈ ದಂಧೆ ನಿಲ್ಲಬೇಕು. ಯಾರಿಗಾದರೂ ಈ ದಂಧೆಗೆ ಸಂಬಂಧಪಟ್ಟಂತೆ ಏನಾದರೂ ತಿಳಿದಿದ್ದರೆ, ದಯವಿಟ್ಟು ಮುಂದೆ ಬನ್ನಿ ಮತ್ತು ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿ’ ಎಂದು ಕೋರಿದ್ದಾರೆ ಅವರು.

ವಿಚಾರಣೆ ವೇಳೆ ಶೆರ್ಲಿನ್​ ಚೋಪ್ರಾ ಪೊಲೀಸರ ಜತೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರು ಇದನ್ನೇ ಇಟ್ಟುಕೊಂಡು ರಾಜ್​ ಕುಂದ್ರಾ ಅವರನ್ನು ಪ್ರಶ್ನಿಸಬಹುದು. ಅಲ್ಲದೆ, ರಾಜ್​ ಕುಂದ್ರಾ ಪ್ರಕರಣದಲ್ಲಿ ಇದನ್ನು ಪ್ರಮುಖ ಸಾಕ್ಷಿ ಎಂದು ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲಾ ಕಾರಣಕ್ಕೆ ರಾಜ್​ ಕುಂದ್ರಾ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಬಹುದು.

ಇದನ್ನೂ ಓದಿ: ‘ಶಿಲ್ಪಾ ಶೆಟ್ಟಿಗೂ ನಿಮ್ಮ ವಿಡಿಯೋ ಸಖತ್​ ಇಷ್ಟ’ ಎಂದು ಪತ್ನಿ ಹೆಸರಲ್ಲಿ ಶೆರ್ಲಿನ್​ಗೆ ಯಾಮಾರಿಸಿದ್ದ ರಾಜ್​ ಕುಂದ್ರಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್