AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೆರ್ಲಿನ್​ ನೀಡಿದ ಮಾಹಿತಿಯಿಂದ ರಾಜ್​ ಕುಂದ್ರಾಗೆ ಮತ್ತಷ್ಟು ಸಂಕಷ್ಟ; ಚೋಪ್ರಾ ಹಂಚಿಕೊಂಡಿದ್ದೇನು?

ನಟಿ ಶೆರ್ಲಿನ್​ ಚೋಪ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರಿಗೆ ಏನನ್ನು ಕೇಳಲಾಗಿತ್ತು ಎಂಬುದಕ್ಕೆ ಇಲ್ಲಿದೆ ಉತ್ತರ.

ಶೆರ್ಲಿನ್​ ನೀಡಿದ ಮಾಹಿತಿಯಿಂದ ರಾಜ್​ ಕುಂದ್ರಾಗೆ ಮತ್ತಷ್ಟು ಸಂಕಷ್ಟ; ಚೋಪ್ರಾ ಹಂಚಿಕೊಂಡಿದ್ದೇನು?
ರಾಜ್​ ಕುಂದ್ರಾ- ಶೆರ್ಲಿನ್​ ಚೋಪ್ರಾ
TV9 Web
| Edited By: |

Updated on: Aug 09, 2021 | 4:08 PM

Share

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನ ನಡೆದು ಕೆಲ ವಾರಗಳು ಕಳೆದಿವೆ. ಅವರ ಜಾಮೀನು ಅರ್ಜಿ ಕೂಡ ವಜಾಗೊಂಡಿದ್ದು, ಜೈಲಿನಲ್ಲಿ ಕಳೆಯೋದು ಅನಿವಾರ್ಯ ಆಗಿದೆ. ಈ ಮಧ್ಯೆ ನೀಲಿ ಚಿತ್ರ ಪ್ರಕರಣದಲ್ಲಿ ನಟಿ ಶೆರ್ಲಿನ್​ ಚೋಪ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರಿಗೆ ಏನನ್ನು ಕೇಳಲಾಗಿತ್ತು ಎಂಬುದಕ್ಕೆ ಇಲ್ಲಿದೆ ಉತ್ತರ.

ವಿಚಾರಣೆ ಮುಗಿಸಿ ಬಂದ ನಂತರ ಮಾತನಾಡಿದ ಶೆರ್ಲಿನ್ ಚೋಪ್ರಾ, ‘ಕೆಲವು ದಿನಗಳ ಹಿಂದೆ ತನಿಖಾಧಿಕಾರಿಗಳು ನನಗೆ ಸಮನ್ಸ್ ನೀಡಿದ್ದರು. ನಾನು ಇಂದು ಅಧಿಕಾರಿಗಳ ಮುಂದೆ ಹಾಜರಾಗಿದ್ದೆ. ಈ ವೇಳೆ ರಾಜ್ ಕುಂದ್ರಾಗೆ ಸಂಬಂಧಿಸಿದ ಮಾಹಿತಿ ಹಂಚಿಕೊಳ್ಳಲು ನನ್ನನ್ನು ಕೇಳಿದರು. ಆರ್ಮ್ಸ್‌ಪ್ರೈಮ್‌ ಆ್ಯಪ್​​ನೊಂದಿಗೆ ನನ್ನ ಒಪ್ಪಂದದ ಬಗ್ಗೆ, ಒಪ್ಪಂದದ ನಿಯಮಗಳು ಮತ್ತು ಷರತ್ತುಗಳೇನು ಎಂದು ಅವರು ನನ್ನನ್ನು ಕೇಳಿದರು. ಎಷ್ಟು ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದೀರಿ ಎಂಬುದನ್ನು ಕೇಳಿದರು’ ಎಂದಿದ್ದಾರೆ ಶೆರ್ಲಿನ್​.

‘ರಾಜ್ ಕುಂದ್ರಾ ಅವರೊಂದಿಗಿನ ನನ್ನ ಸಂಬಂಧ ಹೇಗಿದೆ ಎಂದು ಕೇಳಿದರು. ಅವರ ಮಾಲಿಕತ್ವದ ಇತರ ಕಂಪನಿಗಳ ಬಗ್ಗೆ ನಿಮಗೆ ಏನಾದರೂ ಮಾಹಿತಿ ಇದೆಯೇ? ಎಂದು ನನ್ನನ್ನು ಪ್ರಶ್ನಿಸಿದರು. ದಯವಿಟ್ಟು ಈ ನೀಲಿ ಚಿತ್ರ ದಂಧೆಗೆ ಬಲಿಯಾದ ಎಲ್ಲ ಮಹಿಳೆಯರು, ಕಲಾವಿದರಿಗೆ ನ್ಯಾಯ ಕೊಡಿಸಿ ಎಂದು ಕೇಳಿದೆ. ಈ ದಂಧೆ ನಿಲ್ಲಬೇಕು. ಯಾರಿಗಾದರೂ ಈ ದಂಧೆಗೆ ಸಂಬಂಧಪಟ್ಟಂತೆ ಏನಾದರೂ ತಿಳಿದಿದ್ದರೆ, ದಯವಿಟ್ಟು ಮುಂದೆ ಬನ್ನಿ ಮತ್ತು ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಿ’ ಎಂದು ಕೋರಿದ್ದಾರೆ ಅವರು.

ವಿಚಾರಣೆ ವೇಳೆ ಶೆರ್ಲಿನ್​ ಚೋಪ್ರಾ ಪೊಲೀಸರ ಜತೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರು ಇದನ್ನೇ ಇಟ್ಟುಕೊಂಡು ರಾಜ್​ ಕುಂದ್ರಾ ಅವರನ್ನು ಪ್ರಶ್ನಿಸಬಹುದು. ಅಲ್ಲದೆ, ರಾಜ್​ ಕುಂದ್ರಾ ಪ್ರಕರಣದಲ್ಲಿ ಇದನ್ನು ಪ್ರಮುಖ ಸಾಕ್ಷಿ ಎಂದು ಪರಿಗಣಿಸುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲಾ ಕಾರಣಕ್ಕೆ ರಾಜ್​ ಕುಂದ್ರಾ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಬಹುದು.

ಇದನ್ನೂ ಓದಿ: ‘ಶಿಲ್ಪಾ ಶೆಟ್ಟಿಗೂ ನಿಮ್ಮ ವಿಡಿಯೋ ಸಖತ್​ ಇಷ್ಟ’ ಎಂದು ಪತ್ನಿ ಹೆಸರಲ್ಲಿ ಶೆರ್ಲಿನ್​ಗೆ ಯಾಮಾರಿಸಿದ್ದ ರಾಜ್​ ಕುಂದ್ರಾ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?