AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ದಂಧೆ ಕೇಸ್​; ಶಿಲ್ಪಾ ಶೆಟ್ಟಿ ಮನೆ ಮೇಲೆ ಪೊಲೀಸ್ ದಾಳಿ

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ಅಶ್ಲೀಲ ವಿಡಿಯೋ ದಂಧೆ ಕೇಸ್​; ಶಿಲ್ಪಾ ಶೆಟ್ಟಿ ಮನೆ ಮೇಲೆ ಪೊಲೀಸ್ ದಾಳಿ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ ದಂಪತಿ
TV9 Web
| Edited By: |

Updated on: Jul 23, 2021 | 5:29 PM

Share

ಅಶ್ಲೀಲ ಸಿನಿಮಾ ಚಿತ್ರೀಕರಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಶಿಲ್ಪಾ ಶೆಟ್ಟಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರನ್ನು ಬಂಧಿಸಿ ನಾಲ್ಕು ದಿನ ಕಳೆದಿದೆ. ಈಗ ಮುಂಬೈನ ಜುಹುದಲ್ಲಿರುವ ಶಿಲ್ಪಾ ಶೆಟ್ಟಿ (Shilpa Shetty) ಮನೆ ಮೇಲೆ ಕ್ರೈಮ್​ ಬ್ರ್ಯಾಂಚ್​ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಅಪರಾಧ ವಿಭಾಗದ ಒಂದು ತಂಡ ಜುಹುದಲ್ಲಿರುವ ರಾಜ್​ ಕುಂದ್ರಾ ಅವರ ಒಡೆತನದ ಬಂಗಲೆ ಮೇಲೆ ದಾಳಿ ನಡೆಸಿದೆ. ಈ ದಾಳಿ ತನಿಖೆ ದೃಷ್ಟಿಯಲ್ಲಿ ಬಹಳ ಮಹತ್ವ ಪಡೆದುಕೊಂಡಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ರಾಜ್​ ಕುದ್ರಾ ಅವರನ್ನು ವಶಕ್ಕೆ ಪಡೆದಿರೋದು ಅಕ್ರಮ ಎಂದು ಅವರ ಪರ ವಕೀಲರು ಹೇಳಿದ್ದಾರೆ. ‘ರಾಜ್​ ಕುಂದ್ರಾ ಅವರ ಕಂಪನಿ ಅಡಿಯಲ್ಲಿ ಸಿದ್ಧವಾದವು ನೀಲಿಚಿತ್ರ ಎಂದು ಹೇಳೋಕೆ ಪುರಾವೆ ಇಲ್ಲ. ಹೀಗಿರುವಾಗ ಅವರ ಬಂಧನ ಮಾಡಿದ್ದು ಏಕೆ? ಇದು ಸರಿಯಲ್ಲ. ಇದನ್ನು ನಾವು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇವೆ’ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಮೇಲೆ ಕಣ್ಣಿಟ್ಟಿದ್ದ ನೀಲಿ ಚಿತ್ರಗಳ ಆರೋಪಿ ರಾಜ್​ ಕುಂದ್ರಾ

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್