AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಾಂಪತ್ಯಕ್ಕೆ 12 ವರ್ಷದ ಸಂಭ್ರಮ; ಸುಖ ಸಂಸಾರದ ಗುಟ್ಟು ಬಿಚ್ಚಿಟ್ಟ ನಟಿ

Shilpa Shetty | Raj Kundra: ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಜೋಡಿಗೆ ಇಂದು (ನ.22) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ದಾಂಪತ್ಯ ಜೀವನದಲ್ಲಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಈ ಹೊತ್ತಿನಲ್ಲಿ ಪತಿ ರಾಜ್​ ಕುಂದ್ರಾಗೆ ಶಿಲ್ಪಾ ಶೆಟ್ಟಿ ಪ್ರೀತಿಯ ಸಂದೇಶ ನೀಡಿದ್ದಾರೆ.

ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಾಂಪತ್ಯಕ್ಕೆ 12 ವರ್ಷದ ಸಂಭ್ರಮ; ಸುಖ ಸಂಸಾರದ ಗುಟ್ಟು ಬಿಚ್ಚಿಟ್ಟ ನಟಿ
ಶಿಲ್ಪಾ ಶೆಟ್ಟಿ - ರಾಜ್ ಕುಂದ್ರಾ ಮದುವೆ ಫೋಟೋ
TV9 Web
| Edited By: |

Updated on: Nov 22, 2021 | 12:07 PM

Share

ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಮನೆಯಲ್ಲೀಗ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಅನೇಕ ವಿವಾದಗಳನ್ನು ಎದುರಿಸಿದ ಬಳಿಕವೂ ಅವರು ಜೀವನೋತ್ಸಾಹ ಕಳೆದುಕೊಂಡಿಲ್ಲ. ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳುತ್ತ ಅವರು ಸಂಸಾರ ತೂಗಿಸುತ್ತಿದ್ದಾರೆ. ಪತಿ ರಾಜ್​ಕುಂದ್ರಾ ಮೇಲೆ ಎಷ್ಟೇ ಆರೋಪ ಬಂದರೂ ಶಿಲ್ಪಾ ಶೆಟ್ಟಿ (Raj Kundra) ಕುಗ್ಗಿಲ್ಲ. ಎಂಥ ಕಷ್ಟದ ಸಂದರ್ಭದಲ್ಲೂ ಅವರು ಗಂಡನನ್ನು ಬಿಟ್ಟುಕೊಟ್ಟಿಲ್ಲ.  ಈಗ ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ಜೋಡಿಗೆ ವಿವಾಹ ವಾರ್ಷಿಕೋತ್ಸವದ (Wedding Anniversary) ಸಂಭ್ರಮ. ದಾಂಪತ್ಯ ಜೀವನದಲ್ಲಿ ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಈ ಹೊತ್ತಿನಲ್ಲಿ ಪತಿ ರಾಜ್​ ಕುಂದ್ರಾಗೆ ಶಿಲ್ಪಾ ಶೆಟ್ಟಿ ಪ್ರೀತಿಯ ಸಂದೇಶ ನೀಡಿದ್ದಾರೆ. ಜೊತೆಗೆ ಅಪರೂಪದ ಫೋಟೋ ಕೂಡ ಶೇರ್​ ಮಾಡಿಕೊಂಡಿದ್ದಾರೆ.

ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು 2009ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಅವರ ಸಂಸಾರದಲ್ಲಿ ಯಾವುದೇ ಬಿರುಕು ಮೂಡಿಲ್ಲ. ಈ ದಂಪತಿಗೆ ವಿಹಾನ್​ ಮತ್ತು ಸಮೀಶಾ ಎಂಬಿಬ್ಬರು ಮಕ್ಕಳಿದ್ದಾರೆ. 12ನೇ ವರ್ಷದ ವೆಡ್ಡಿಂಗ್​ ಆ್ಯನಿವರ್ಸರಿ ಪ್ರಯುಕ್ತ ಮದುವೆ ಫೋಟೋ ಪೋಸ್ಟ್​ ಮಾಡಿಕೊಂಡಿರುವ ಶಿಲ್ಪಾ ಶೆಟ್ಟಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

‘12 ವರ್ಷಗಳ ಹಿಂದೆ ಈ ದಿನ ಪರಸ್ಪರ ಒಂದು ಪ್ರಾಮಿಸ್​ ಮಾಡಿಕೊಂಡಿದ್ದೆವು. ಒಳ್ಳೆಯ ಮತ್ತು ಕಷ್ಟದ ಕಾಲವನ್ನು ಜೊತೆಯಾಗಿ ಹಂಚಿಕೊಳ್ಳುತ್ತೇವೆ, ಪ್ರೀತಿಯಲ್ಲಿ ನಂಬಿಕೆ ಇಡುತ್ತೇವೆ, ಪ್ರತಿ ದಿನ ಜೊತೆಯಾಗಿ ಇರುತ್ತೇವೆ ಎಂದು ಪ್ರಾಮಿಸ್​ ಮಾಡಿದ್ದೆವು. ನಮ್ಮ ದಾಂಪತ್ಯಕ್ಕೆ 12 ವರ್ಷವಾಗಿ ಮುಂದುವರಿಯುತ್ತಿದೆ. ಎಲ್ಲ ಸಮಯದಲ್ಲೂ ನಮ್ಮ ಜೊತೆ ಇದ್ದ ಹಿತೈಷಿಗಳಿಗೆ ಧನ್ಯವಾದಗಳು’ ಎಂದು ಶಿಲ್ಪಾ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ತಮ್ಮಿಬ್ಬರ ಗಟ್ಟಿ ಸಂಬಂಧಕ್ಕೆ ಬುನಾದಿ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಜುಲೈ 19ರಂದು ರಾಜ್​ ಕುಂದ್ರ ಅರೆಸ್ಟ್​ ಆಗಿದ್ದರು. ಅದಕ್ಕೂ ಮೊದಲು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ಆಗಿದ್ದರು. ಬಗೆಬಗೆಯ ಫೋಟೋ ಮತ್ತು ವಿಡಿಯೋಗಳನ್ನು ಅವರು ಶೇರ್​ ಮಾಡಿಕೊಳ್ಳುತ್ತಿದ್ದರು. ಆದರೆ ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಕೇಳಿಬಂದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕುಂದ್ರಾ ಬಹುತೇಕ ಕಣ್ಮರೆ ಆಗಿಬಿಟ್ಟರು. ಜಾಮೀನು ಪಡೆದು ಹೊರಬಂದು ಹಲವು ದಿನಗಳು ಕಳೆದರೂ ಅವರ ಖಾತೆಯಲ್ಲಿ ಯಾವುದೇ ಹೊಸ ಪೋಸ್ಟ್​ ಕಾಣಿಸಿಕೊಂಡಿಲ್ಲ. ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ಅವರು ಡಿಲೀಟ್​ ಮಾಡಿದ್ದಾರೆ. ಈ ರೀತಿ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಅವರು ಯಾವುದೇ ಸೂಚನೆಯನ್ನೂ ನೀಡಿಲ್ಲ. ಗಂಡನ ಈ ವರ್ತನೆ ಬಗ್ಗೆ ಶಿಲ್ಪಾ ಶೆಟ್ಟಿ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:

ಫಿಟ್ನೆಸ್​ ಹೇಳಿಕೊಡ್ತೀವಿ ಅಂತ 1.5 ಕೋಟಿ ರೂ. ಮೋಸ ಮಾಡಿದ ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ? ಕೇಸ್​ ದಾಖಲು

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ