AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ

Shilpa Shetty | Raj Kundra: ಮನೆಗೆ ಬಂದ ಗಣಪನನ್ನು ಸ್ವಾಗತಿಸುವ ವೇಳೆಯೂ ರಾಜ್​ ಕುಂದ್ರಾ ಮುಖ ಮುಚ್ಚಿಕೊಂಡಿದ್ದರು. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on:Aug 30, 2022 | 7:31 AM

ಎಲ್ಲ ಕಡೆಗಳಲ್ಲಿ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಸೆಲೆಬ್ರಿಟಿಗಳ ಮನೆಯಲ್ಲಿ ಗಣಪತಿಯನ್ನು ಕೂರಿಸಿ ಹಬ್ಬ (Ganesh Chaturthi 2022) ಮಾಡಲಾಗುತ್ತಿದೆ. ಬಾಲಿವುಡ್​ನಲ್ಲಿ ಅನೇಕ ನಟ-ನಟಿಯರ ಮನೆಯಲ್ಲಿ ವಿಘ್ನ ವಿನಾಶಕನ ಮೂರ್ತಿ ಇರಿಸಿ ಪೂಜೆ ಮಾಡಲಾಗುತ್ತದೆ. ನಟಿ ಶಿಲ್ಪಾ ಶೆಟ್ಟಿ (Shilpa Shetty) ಕುಟುಂಬ ಕೂಡ ಇದಕ್ಕೆ ಹೊರತಾಗಿಲ್ಲ. ಪ್ರತಿ ವರ್ಷ ಈ ಹಬ್ಬವನ್ನು ಅವರ ಮನೆಯಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಬಾರಿ ಸಹ ಹಬ್ಬಕ್ಕೆ ಸಕಲ ಸಿದ್ಧತೆ ನಡೆದಿದೆ. ಮನೆಗೆ ತಂದಿರುವ ಗಣೇಶನ ಮೂರ್ತಿಯನ್ನು ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ (Raj Kundra) ದಂಪತಿ ಬರಮಾಡಿಕೊಂಡಿದ್ದಾರೆ. ಈ ಕ್ಷಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಎಲ್ಲಿಗೇ ಹೋದರೂ ರಾಜ್​ ಕುಂದ್ರಾ ಅವರು ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಸದ್ಯಕ್ಕಂತೂ ಮಾಸ್ಕ್​ ಕಡ್ಡಾಯ ಎಂಬ ನಿಯಮ ಇಲ್ಲ. ಕೊರೊನಾ ಹಾವಳಿಯೂ ಮೊದಲಿನಂತಿಲ್ಲ. ಆದರೂ ಕೂಡ ರಾಜ್​ ಕುಂದ್ರಾ ಮಾಸ್ಕ್​ ಹಾಕಿಕೊಂಡು ತಿರುಗಾಡುತ್ತಿದ್ದಾರೆ. ಮನೆಯಲ್ಲಿ ಇದ್ದಾಗಲೂ ಅವರು ಪೂರ್ತಿ ಮುಖ ಮುಚ್ಚುವಂತಹ ಮಾಸ್ಕ್​ ಧರಿಸುತ್ತಾರೆ. ಮನೆಗೆ ಬಂದ ಗಣಪನನ್ನು ಸ್ವಾಗತಿಸುವ ವೇಳೆಯೂ ಅವರು ಮುಖ ಮುಚ್ಚಿಕೊಂಡಿದ್ದರು!

ಇದನ್ನೂ ಓದಿ
Image
‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ
Image
‘ರಾಜ್​ ಕುಂದ್ರಾ ದಾರಿ ತಪ್ಪಲು ಕಾರಣವಾದ ಈಕೆಗೆ ಬಟ್ಟೆ ಬಿಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ’: ಗೆಹನಾ ಆರೋಪ
Image
Shilpa Shetty: ರಾಜ್​ ಕುಂದ್ರಾ ಪೋರ್ನ್​ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ತಪ್ಪು ಒಪ್ಪಿಕೊಳ್ಳಲಿ ಎಂದು ಹಠ ಹಿಡಿದ ಶೆರ್ಲಿನ್​ ಚೋಪ್ರಾ
Image
Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

ಇನ್ನು, ಶಿಲ್ಪಾ ಶೆಟ್ಟಿ ಅವರು ಇತ್ತೀಚೆಗೆ ಶೂಟಿಂಗ್​ ಸಂದರ್ಭದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಹಾಗಾಗಿ ಅವರಿಗೆ ನಡೆಯಲು ಕಷ್ಟ ಆಗುತ್ತಿದೆ. ವಾಕರ್​ ಸಹಾಯದಿಂದ ಕುಂಟುತ್ತಾ ಬಂದು ಅವರು ಗಣೇಶನ ವಿಗ್ರಹವನ್ನು ಸ್ವೀಕರಿಸಿದ್ದಾರೆ. ಪಾಪರಾಜಿ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಅಶ್ಲೀಲ ವಿಡಿಯೋ ನಿರ್ಮಾಣದ ಕೇಸ್​ನಲ್ಲಿ ಸಿಕ್ಕಿ ಹಾಕಿಕೊಂಡ ಬಳಿಕ ರಾಜ್​ ಕುಂದ್ರಾ ಅವರು ಬಹುತೇಕ ತೆರೆಮರೆಗೆ ಸರಿದರು. ಮೊದಲೆಲ್ಲ ಪತ್ನಿ ಶಿಲ್ಪಾ ಶೆಟ್ಟಿ ಜೊತೆ ಖುಷಿ ಖುಷಿಯಿಂದ ಪೋಸ್​ ನೀಡುತ್ತಿದ್ದ ಅವರು ಈಗ ಸಂಪೂರ್ಣ ಮುಖ ಮುಚ್ಚಿಕೊಂಡು ಓಡಾಡುವಂತಾಗಿದೆ. ನಟಿಯರನ್ನು ಮತ್ತು ಮಾಡೆಲ್​ಗಳನ್ನು ಯಾಮಾರಿಸಿ ಅಶ್ಲೀಲ ಸಿನಿಮಾ ಚಿತ್ರೀಕರಣ ಮಾಡಿದ ಆರೋಪ ರಾಜ್​ ಕುಂದ್ರಾ ಅವರ ಮೇಲಿದೆ. ಈ ಪ್ರಕರಣದಲ್ಲಿ ಕಳೆದ ವರ್ಷ ಅವರನ್ನು ಬಂಧಿಸಲಾಗಿತ್ತು. ಹಲವು ದಿನಗಳ ಕಾಲ ಜೈಲಿನಲ್ಲಿ ಕಂಬಿ ಎಣಿಸಿದ ನಂತರ ಅವರು ಜಾಮೀನಿನ ಮೇಲೆ ಹೊರಬಂದರು. ಆ ಘಟನೆ ನಡೆದು ಒಂದು ವರ್ಷವೇ ಕಳೆದಿದ್ದರೂ ಕೂಡ ರಾಜ್​ ಕುಂದ್ರಾ ಅವರು ಸಾರ್ವಜನಿಕವಾಗಿ ಮುಖ ತೋರಿಸಲು ಹಿಂಜರಿಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 30 August 22

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್