AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೆ ಇತ್ತು ಮಾಹಿತಿ? ಪೊಲೀಸರಿಂದ ವಿಚಾರಣೆ

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ.

ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಶಿಲ್ಪಾ ಶೆಟ್ಟಿಗೆ ಇತ್ತು ಮಾಹಿತಿ? ಪೊಲೀಸರಿಂದ ವಿಚಾರಣೆ
ವಿಯಾನ್​ ಜತೆ ಶಿಲ್ಪಾ ಶೆಟ್ಟಿ
TV9 Web
| Edited By: |

Updated on:Jul 23, 2021 | 10:19 PM

Share

ಅಶ್ಲೀಲ ಸಿನಿಮಾ ಚಿತ್ರೀಕರಣ ಪ್ರಕರಣದಲ್ಲಿ ಮುಂಬೈ ಪೊಲೀಸ್​ ಅಪರಾಧ ವಿಭಾಗವು ಶಿಲ್ಪಾ ಶೆಟ್ಟಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅವರನ್ನು ಬಂಧಿಸಿ ನಾಲ್ಕು ದಿನ ಕಳೆದಿದೆ. ಈಗ ಮುಂಬೈನ ಜುಹುದಲ್ಲಿರುವ ಶಿಲ್ಪಾ ಶೆಟ್ಟಿ (Shilpa Shetty) ಮನೆ ಮೇಲೆ ಕ್ರೈಮ್​ ಬ್ರ್ಯಾಂಚ್​ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಅವರ ನಿವಾಸದಲ್ಲೇ ವಿಚಾರಣೆ ಆರಂಭಿಸಿದ್ದಾರೆ. 

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ರಾಜ್​ ಕುಂದ್ರಾ ಅವರನ್ನು ಬಂಧಿಸಿದ್ದರು. ಈಗ ಅವರನ್ನು ಜುಲೈ 27ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಅಪರಾಧ ವಿಭಾಗದ ಒಂದು ತಂಡ ಜುಹುದಲ್ಲಿರುವ ರಾಜ್​ ಕುಂದ್ರಾ ಅವರ ಒಡೆತನದ ಬಂಗಲೆ ಮೇಲೆ ದಾಳಿ ನಡೆಸಿದೆ. ಪರಿಶೀಲನೆ ನಂತರದಲ್ಲಿ ಶಿಲ್ಪಾ ಶೆಟ್ಟಿ ವಿಚಾರಣೆ ನಡೆದಿದೆ. ಈ ದಾಳಿ ತನಿಖೆ ದೃಷ್ಟಿಯಲ್ಲಿ ಬಹಳ ಮಹತ್ವ ಪಡೆದುಕೊಂಡಿದೆ.

ಪತಿ ರಾಜ್​ ಕುಂದ್ರಾ ನಡೆಸುತ್ತಿದ್ದ ದಂಧೆ ಬಗ್ಗೆ ಮೊದಲೆ ಮಾಹಿತಿ ಇತ್ತೇ? ಅವರ ಉದ್ಯಮದ ಬಗ್ಗೆ ನಿಮಗೆ ಏನೆಲ್ಲ ತಿಳಿದಿದೆ? ಎಂಬಿತ್ಯಾದಿ ಪ್ರಶ್ನೆಗಳನ್ನು ಶಿಲ್ಪಾ ಶೆಟ್ಟಿಗೆ ಕೇಳಲಾಗಿದೆ.  ಶಿಲ್ಪಾ ಶೆಟ್ಟಿಗೆ ಈ ಬಗ್ಗೆ ಮೊದಲೇ ತಿಳಿದಿತ್ತೇ? ತಿಳಿದಿದ್ದರೆ ಅವರು ಸುಮ್ಮನಿದ್ದಿದ್ದು ಏಕೆ ಅನ್ನೋದು ಸದ್ಯದ ಕುತೂಹಲ. ಇನ್ನು, ಈ ಅಧಿಕಾರಿಗಳು ಶೀಘ್ರವೇ ಶಿಲ್ಪಾ ಶೆಟ್ಟಿಗೆ ಸಂಬಂಧಿಸಿದ ಬ್ಯಾಂಕ್​ ಖಾತೆಗಳನ್ನು ಪರಿಶೀಲನೆ ಮಾಡಲಿದ್ದಾರೆ ಎನ್ನಲಾಗಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ರಾಜ್​ ಕು0ದ್ರಾ ಅವರನ್ನು ವಶಕ್ಕೆ ಪಡೆದಿರೋದು ಅಕ್ರಮ ಎಂದು ಅವರ ಪರ ವಕೀಲರು ಹೇಳಿದ್ದಾರೆ. ‘ರಾಜ್​ ಕುಂದ್ರಾ ಅವರ ಕಂಪನಿ ಅಡಿಯಲ್ಲಿ ಸಿದ್ಧವಾದವು ನೀಲಿಚಿತ್ರ ಎಂದು ಹೇಳೋಕೆ ಪುರಾವೆ ಇಲ್ಲ. ಹೀಗಿರುವಾಗ ಅವರ ಬಂಧನ ಮಾಡಿದ್ದು ಏಕೆ? ಇದು ಸರಿಯಲ್ಲ. ಇದನ್ನು ನಾವು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡುತ್ತೇವೆ’ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

Published On - 7:21 pm, Fri, 23 July 21

Follow Us
Web contact
Web contact

TV9 Kannada

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್