AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

Super Dancer 4: ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಇದು ವೀಕ್ಷಕರಿಗೂ ಇಷ್ಟವಾಗುತ್ತಿತ್ತು.

Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 18, 2021 | 3:54 PM

Share

ನಟಿ ಶಿಲ್ಪಾ ಶೆಟ್ಟಿ ಅವರಿಗೆ ಕಷ್ಟ ಕಾಲ ಶುರುವಾಗಿ ತಿಂಗಳಾಗಿದೆ. ಪೋರ್ನ್​ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಪತಿ ರಾಜ್​ ಕುಂದ್ರಾ ಅವರು ಸಿಕ್ಕಿ ಬಿದ್ದ ನಂತರದಲ್ಲಿ ಶಿಲ್ಪಾಗೆ ತೀವ್ರ ಮುಜುಗರ ಎದುರಿಸುತ್ತಿದ್ದಾರೆ. ಕೋರ್ಟು, ಕಚೇರಿ ಅಲೆಯಬೇಕಾಗಿದ್ದರಿಂದ ಅವರ ದಿನಚರಿ ಸಂಪೂರ್ಣ ತಲೆಕೆಳಾಗಾಗಿದೆ. ಸಾಕಷ್ಟು ಕಾರ್ಯಕ್ರಮಗಳಿಗೆ ಶಿಲ್ಪಾ ಶೆಟ್ಟಿ ತೆರಳಬೇಕಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ರಾಜ್​ ಕುಂದ್ರಾ ಬಂಧನ ನಡೆದು ಒಂದು ತಿಂಗಳಾಗಿದೆ. ಈ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಮತ್ತೆ ತಮ್ಮ ಕೆಲಸಕ್ಕೆ ಮರಳಿದ್ದಾರೆ. ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.  

ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಇದು ವೀಕ್ಷಕರಿಗೂ ಇಷ್ಟವಾಗುತ್ತಿತ್ತು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ನಂತರದಿಂದ ಶಿಲ್ಪಾ ಶೆಟ್ಟಿ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿರಲಿಲ್ಲ. ಈಗ ಅವರು  ಮತ್ತೆ ಸೆಟ್​ಗೆ ಮರಳಿದ್ದಾರೆ.

ಮಂಗಳವಾರ (ಆಗಸ್ಟ್​ 17) ನಡೆದ ಶೂಟಿಂಗ್​ನಲ್ಲಿ ಶಿಲ್ಪಾ ಶೆಟ್ಟಿ ಪಾಲ್ಗೊಂಡಿದ್ದರು. ಈ ವೀಕೆಂಡ್​ನಲ್ಲಿ ಈ ಶೋ ಪ್ರಸಾರವಾಗಲಿದೆ. ಶಿಲ್ಪಾ ಶೆಟ್ಟಿ ಕಮ್​ಬ್ಯಾಕ್​ ಮಾಡಿದ್ದು ಇಡೀ ತಂಡಕ್ಕೆ ಸಾಕಷ್ಟು ಖುಷಿ ನೀಡಿದೆ. ಅಲ್ಲದೆ, ಇಡೀ ತಂಡ ಶಿಲ್ಪಾಗೆ ಅದ್ದೂರಿ ಸ್ವಾಗತ ನೀಡಿದೆ.

ರಾಜ್​ ಕುಂದ್ರಾ ಕೇಸ್​ ದಿನದಿಂದ ದಿನಕ್ಕೆ ಜಟಿಲ ಆಗುತ್ತಿದೆ. ಶಿಲ್ಪಾ ಶೆಟ್ಟಿ ಕೂಡ ಹಲವು ಬಾರಿ ಪೊಲೀಸರ ತನಿಖೆಗೆ ಒಳಪಡಬೇಕಾಗುತ್ತಿದೆ. ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ಎಲ್ಲ ಘಟನೆಗಳಿಂದಾಗಿ ಶಿಲ್ಪಾ ಶೆಟ್ಟಿ ಮನೆ ಬಿಟ್ಟು ಹೊರಬರುತ್ತಿಲ್ಲ. ‘ಸೂಪರ್​ ಡ್ಯಾನ್ಸರ್​ 4’ ಕಾರ್ಯಕ್ರಮದ ಆಯೋಜಕರು ಹಲವು ಬಾರಿ ಸಂಪರ್ಕಿಸುವ ಪ್ರಯತ್ನ ಮಾಡಿದರೂ ಕೂಡ ಶಿಲ್ಪಾ ಶೆಟ್ಟಿ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನುವ ವರದಿ ಈ ಮೊದಲು ಬಿತ್ತರವಾಗಿತ್ತು.

ಇದನ್ನೂ ಒದಿ:Shamita Shetty: ಶಮಿತಾ ಶೆಟ್ಟಿಗೆ ಆಂಟಿ ಎಂದ ನಟಿ; ಜಗಳಕ್ಕೆ ಇಳಿದ ಶಿಲ್ಪಾ ಶೆಟ್ಟಿ ತಂಗಿ 

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

Published On - 1:18 pm, Wed, 18 August 21

Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ