ರೆಸ್ಟೋರೆಂಟ್ ಕ್ಲೋಸ್ ಮಾಡುವುದರ ಹಿಂದಿನ ಕಾರಣ ಹೇಳಿದ ಶಿಲ್ಪಾ ಶೆಟ್ಟಿ; ಇದೆ ದಕ್ಷಿಣದ ಕನೆಕ್ಷನ್

ಶಿಲ್ಪಾ ಶೆಟ್ಟಿ ಅವರ ಬಾಂದ್ರಾದ ಬಾಸ್ಟಿಯನ್ ರೆಸ್ಟೋರೆಂಟ್ ಮುಚ್ಚುವಿಕೆಯ ಬಗ್ಗೆ ಹರಡುತ್ತಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕ ಸಮಸ್ಯೆಗಳಿಂದಲ್ಲ, ಬದಲಾಗಿ ಹೊಸ ದಕ್ಷಿಣ ಭಾರತೀಯ ರೆಸ್ಟೋರೆಂಟ್‌ 'ಅಮ್ಮಕೈ' ಅದೇ ಸ್ಥಳದಲ್ಲಿ ತೆರೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಜೊತೆಗೆ, ಜುಹುದಲ್ಲಿ ಮತ್ತೊಂದು ಬಾಸ್ಟಿಯನ್ ರೆಸ್ಟೋರೆಂಟ್ ತೆರೆಯುವ ಯೋಜನೆಯನ್ನೂ ಅವರು ಘೋಷಿಸಿದ್ದಾರೆ.

ರೆಸ್ಟೋರೆಂಟ್ ಕ್ಲೋಸ್ ಮಾಡುವುದರ ಹಿಂದಿನ ಕಾರಣ ಹೇಳಿದ ಶಿಲ್ಪಾ ಶೆಟ್ಟಿ; ಇದೆ ದಕ್ಷಿಣದ ಕನೆಕ್ಷನ್
ಶಿಲ್ಪಾ
Edited By:

Updated on: Sep 06, 2025 | 8:49 AM

ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ (Shilpa Shetty) ಆರ್ಥಿಕ ಸಮಸ್ಯೆಯಿಂದಾಗಿ ಬಾಂದ್ರಾದಲ್ಲಿರುವ ತಮ್ಮ ರೆಸ್ಟೋರೆಂಟ್ ಅನ್ನು ಮುಚ್ಚಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಆದರೆ ಇದರ ಹಿಂದಿನ ನಿಜವಾದ ಸತ್ಯವೇನು? ಶಿಲ್ಪಾ ಈ ಬಗ್ಗೆ ಮೌನ ಮುರಿದಿದ್ದಾರೆ. ಶಿಲ್ಪಾ ರೆಸ್ಟೋರೆಂಟ್ ಬಗ್ಗೆ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ನಟಿ ಪ್ರಸ್ತುತ ರೆಸ್ಟೋರೆಂಟ್ ಅನ್ನು ಮುಚ್ಚುವುದರ ಹಿಂದಿನ ಕಾರಣ ಹೇಳಿದ್ದಾರೆ. ಅದನ್ನು ನಡೆಸುವಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

‘ಹಳೆಯ ರೆಸ್ಟೋರೆಂಟ್ ಮುಚ್ಚಿದ ಜಾಗದಲ್ಲೇ, ಶೀಘ್ರದಲ್ಲೇ ಹೊಸ ದಕ್ಷಿಣ ಭಾರತೀಯ ರೆಸ್ಟೋರೆಂಟ್ ತೆರೆಯಲಾಗುವುದು. ಮತ್ತೊಂದೆಡೆ, ಜುಹುದಲ್ಲಿ ‘ಬಾಸ್ಟಿಯನ್’ ಹೆಸರಿನ ಮತ್ತೊಂದು ರೆಸ್ಟೋರೆಂಟ್ ತೆರೆಯಲಾಗುವುದು ಎಂದು ಶಿಲ್ಪಾ ತಿಳಿಸಿದ್ದಾರೆ.

‘ನೀವು ಕಷ್ಟಪಟ್ಟು ಕೆಲಸ ಮಾಡಿ ಖ್ಯಾತಿಯನ್ನು ಗಳಿಸಿದಾಗ, ಕೆಲವು ವದಂತಿಗಳು ನಿಮ್ಮ ಜೊತೆ ತಳುಕು ಹಾಕಿಕೊಳ್ಳುತ್ತವೆ. ನಮ್ಮ ನಿಜವಾದ ಆರಂಭವು ಬಾಂದ್ರಾದಿಂದ. ಈ ಅಧ್ಯಾಯವು ಮುಕ್ತಾಯಗೊಳ್ಳುತ್ತದೆ, ಇನ್ನೂ ಎರಡು ಅಧ್ಯಾಯಗಳು ಪ್ರಾರಂಭವಾಗಲಿವೆ. ಅವು ನಿಮಗಾಗಿ ಕಾಯುತ್ತಿವೆ. ನಮ್ಮ ಬ್ರ್ಯಾಂಡ್ ಹೊಸ ಪ್ರಯಾಣವನ್ನು ಪ್ರಾರಂಭಿಸಲಿದೆ… ಶೀಘ್ರದಲ್ಲೇ ಅದರ ಬಗ್ಗೆ ನಿಮಗೆ ತಿಳಿಸಲಾಗುವುದು’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ
ಸೂರ್ಯವಂಶಿ ನಟ ನಿಧನ; ವಾಯು ಪಡೆಯಲ್ಲಿ ಸೇವೆ ಸಲ್ಲಿಸಿ ಚಿತ್ರರಂಗಕ್ಕೆ ಎಂಟ್ರಿ
SIIMA 2025 Telugu: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣಗೆ ಅವಾರ್ಡ್
ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಸಂಪೂರ್ಣ ವಿನ್ನರ್ ಪಟ್ಟಿ
ಬಿಗ್ ಬಾಸ್​ಗೆ ನಿರ್ಮಾಣ ಆಗಿದೆ ಬೇರೆಯದೇ ಮನೆ; ಹೇಗಿದೆ ಈ ಬಾರಿಯ ಸೆಟ್?

ಬಾಸ್ಟಿಯನ್ ಬಾಂದ್ರಾ ಔಟ್ಲೆಟ್ ಅನ್ನು ಈಗ ‘ಅಮ್ಮಕೈ’ ಎಂಬ ದಕ್ಷಿಣ ಭಾರತೀಯ ರೆಸ್ಟೋರೆಂಟ್ ಆಗಿ ಪರಿವರ್ತಿಸಲಾಗುತ್ತಿದೆ ಎಂದು ಶಿಲ್ಪಾ ಶೆಟ್ಟಿ ಹೇಳಿದರು. ಬ್ರ್ಯಾಂಡ್ ಜುಹುಗೆ ಸ್ಥಳಾಂತರಗೊಳ್ಳುತ್ತಿದ್ದು, ಬಾಸ್ಟಿಯನ್ ಬೀಚ್ ಕ್ಲಬ್ ಮತ್ತೆ ತೆರೆಯಲಿದೆ ಎಂದು ನಟಿ ಹೇಳಿದರು.

ಇದನ್ನೂ ಓದಿ: 60 ಕೋಟಿ ವಂಚನೆ ಪ್ರಕರಣ: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾಗೆ ಲುಕ್​ಔಟ್ ನೊಟೀಸ್

ಶಿಲ್ಪಾ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ನಟಿ ಮೋಸ ಮಾಡಿದಂತಹ ಗಂಭೀರ ಆರೋಪಗಳನ್ನು ಹಲವರು ಮಾಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ನಟಿ ಬಡವರಾಗಿದ್ದಾರೆ. ಇದು ಅಭಿಮಾನಿಗಳಲ್ಲಿ ಚರ್ಚೆಗೂ ಆರಂಭವಾಗಿದೆ. ಆದರೆ ಅಂತಹದ್ದೇನೂ ಇಲ್ಲ, ಶಿಲ್ಪಾ ಶೀಘ್ರದಲ್ಲೇ ಎರಡು ರೆಸ್ಟೋರೆಂಟ್‌ಗಳನ್ನು ಪ್ರಾರಂಭಿಸಲಿದ್ದಾರೆ. ನಟಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಇದಲ್ಲದೆ, ಅನೇಕ ಜನರು ನಟಿಗೆ ಕರೆ ಮಾಡಿ ಕೇಳುತ್ತಿದ್ದಾರೆ. ಶಿಲ್ಪಾಗೆ ಲುಕ್​ಔಟ್ ನೋಟಿಸ್ ಕೂಡ ನೀಡಲಾಗಿದೆ. 60 ಕೋಟಿ ವಂಚನೆ ಪ್ರಕರಣದಲ್ಲಿ ಇವರು ಸಂಕಷ್ಟ ಎದುರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us