AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ ಮಾನಹಾನಿ ಪ್ರಕರಣ: ಹೈಕೋರ್ಟ್​ನಿಂದ ಮಹತ್ವದ ಆದೇಶ

ಸೋಶಿಯಲ್​ ಮೀಡಿಯಾಗಳಾದ ಫೇಸ್​ಬುಕ್​, ಇನ್​ಸ್ಟಾಗ್ರಾಮ್​ ಹಾಗೂ ಸುದ್ದಿ ಮಾಧ್ಯಮ ಸೇರಿ ಒಟ್ಟು 29 ಪ್ಲಾಟ್​ಫಾರ್ಮ್​ಗಳ ಹೆಸರನ್ನು ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು.

ಶಿಲ್ಪಾ ಶೆಟ್ಟಿ ಮಾನಹಾನಿ ಪ್ರಕರಣ: ಹೈಕೋರ್ಟ್​ನಿಂದ ಮಹತ್ವದ ಆದೇಶ
ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾ ದಂಪತಿ
TV9 Web
| Edited By: |

Updated on:Jul 30, 2021 | 6:17 PM

Share

ಶಿಲ್ಪಾ ಶೆಟ್ಟಿಗೆ ಸಂಬಂಧಿಸಿದ ಮಾನಹಾನಿ ಎನಿಸುವ ಕೆಲವು ವಿಡಿಯೋಗಳನ್ನು ಸೋಶಿಯಲ್​ ಮೀಡಿಯಾ ಹಾಗೂ ಮಾಧ್ಯಮಗಳಿಂದ ತೆಗೆದು ಹಾಕುವಂತೆ ಬಾಂಬೆ ಹೈಕೋರ್ಟ್​ ಆದೇಶ ಹೊರಡಿಸಿದೆ. ಶಿಲ್ಪಾ ಶೆಟ್ಟಿ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಂತರದಲ್ಲಿ ಕೋರ್ಟ್​ ಈ ಆದೇಶ ಹೊರಡಿಸಿದೆ.

ಸೋಶಿಯಲ್​ ಮೀಡಿಯಾಗಳಾದ ಫೇಸ್​ಬುಕ್​, ಇನ್​ಸ್ಟಾಗ್ರಾಮ್​ ಹಾಗೂ ಸುದ್ದಿ ಮಾಧ್ಯಮ ಸೇರಿ ಒಟ್ಟು 29 ಪ್ಲಾಟ್​ಫಾರ್ಮ್​ಗಳ ಹೆಸರನ್ನು ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಇವುಗಳಿಂದ ಮಾನ ಹಾನಿ ಉಂಟಾಗುತ್ತಿದೆ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದರು.

‘ಪತ್ರಿಕಾ ಸ್ವಾತಂತ್ರ್ಯ ಮತ್ತು ಖಾಸಗಿತನದ ಹಕ್ಕಿನ ನಡುವೆ ಸಮತೋಲನ ಇರಬೇಕು. ಈ ಹಂತದಲ್ಲಿ ಬರುವ ಎಲ್ಲಾ ಹೇಳಿಕೆಗಳು ಮಾನ ಹಾನಿ ಎಂದು ಹೇಳಲು ಸಾಧ್ಯವಿಲ್ಲ. ಅವುಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲನೆ ಮಾಡಬೇಕಾಗುತ್ತದೆ.  ಪ್ರಾಥಮಿಕ ಹಂತದಲ್ಲಿ ಮಾನಹಾನಿ ಎನಿಸುವ ವಿಡಿಯೋಗಳನ್ನು ತೆಗೆಯಿರಿ’ ಎಂದು ಕೋರ್ಟ್​ ಆದೇಶಿಸಿದೆ.

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಆರಂಭದಲ್ಲಿ ಪ್ರಶ್ನೆ ಮಾಡಿದ್ದರು.

ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ  ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ. ಈ ಮೂಲಕ ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕೋರ್ಟ್​ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ವರ್ಷಕ್ಕೆ ಶೇ 18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ:  ಆ ಆ್ಯಪ್​ ಬಗ್ಗೆ ನಂಗೆ ಗೊತ್ತಿಲ್ಲ, ಪತಿಯ ಉದ್ಯಮದಲ್ಲಿ ನಾನು ತಲೆ ಹಾಕಲ್ಲ; ಶಿಲ್ಪಾ ಶೆಟ್ಟಿ

Published On - 6:00 pm, Fri, 30 July 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ