AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ

ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ  ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದರು.

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ
ಶಿಲ್ಪಾ ಶೆಟ್ಟಿ-ರಾಜ್​​ ಕುಂದ್ರಾ
TV9 Web
| Edited By: |

Updated on:Jul 30, 2021 | 4:07 PM

Share

ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್​ ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಕೆಲ ಮಹತ್ವದ ಪ್ರಶ್ನೆಗಳನ್ನು ಕೇಳಿದೆ.

ಮಾಧ್ಯಮಗಳು ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ  ತಪ್ಪಾದ, ಅವಹೇಳನಕಾರಿ, ಸುಳ್ಳು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸುತ್ತಿವೆ. ಈ ಮೂಲಕ ಖಾಸಗಿತನಕ್ಕೆ ಚ್ಯುತಿ ತರುತ್ತಿವೆ ಎಂದು ಕೋರ್ಟ್​ಗೆ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿಲ್ಪಾ ಶೆಟ್ಟಿ ಉಲ್ಲೇಖ ಮಾಡಿದ್ದರು. ಅಲ್ಲದೆ, ತಮಗೆ 25 ಕೋಟಿ ರೂ. ಮತ್ತು ಅದರೊಂದಿಗೆ ವರ್ಷಕ್ಕೆ ಶೇ 18 ಬಡ್ಡಿಯೊಂದಿಗೆ ಹಣ ಪಾವತಿಸಬೇಕು ಎಂದು ಕೋರಿದ್ದರು.

ಈ ಪ್ರಕರಣ ಇಂದು ವಿಚಾರಣೆಗೆ ಬಂದಿದೆ. ನ್ಯಾಯಮೂರ್ತಿ ಜಿಎಸ್​ ಪಟೇಲ್​ ಅವರು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡರು. ‘ಓದುಗರನ್ನು ಸೆಳೆಯಲು ತಪ್ಪಾದ ಸುದ್ದಿ ಪ್ರಕಟ ಮಾಡಲಾಗಿದೆ’ ಎಂದು ಶಿಲ್ಪಾ ಶೆಟ್ಟಿ ಪರ ವಕೀಲರು ವಾದ ಮಂಡಿಸಿದರು.

‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

 ರಾಜ್ ಕುಂದ್ರಾ ಪ್ರಕರಣ: ಆಕ್ಷೇಪಾರ್ಹ ವಿಷಯ ಪ್ರಕಟಿಸಿದ ಮಾಧ್ಯಮಗಳ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಮಾನಹಾನಿ ಮೊಕದ್ದಮೆ ದಾಖಲಿಸಿದ ಶಿಲ್ಪಾ ಶೆಟ್ಟಿ

Published On - 4:04 pm, Fri, 30 July 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!