AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ
ರಾಜ್​ ಕುಂದ್ರಾ
TV9 Web
| Edited By: |

Updated on:Jul 23, 2021 | 2:23 PM

Share

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

ರಾಜ್​ ಕುಂದ್ರಾ ಅವರನ್ನು ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ಪತಿಯ ಬಂಧನದ ಬಳಿಕ ಸಂಪೂರ್ಣ ಮೌನ ವಹಿಸಿದ್ದ ಶಿಲ್ಪಾ ಶೆಟ್ಟಿ ಈ ಬಗ್ಗೆ ಮೌನ ಮುರಿದಿದ್ದರು. ‘ಬದುಕಿರುವುದಕ್ಕಾಗಿ ನಾನು ಅದೃಷ್ಟವಂತೆ ಎಂದು ತಿಳಿದುಕೊಂಡು ದೀರ್ಘ ಉಸಿರು ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ. ಇಂದಿನ ನನ್ನ ಬದುಕನ್ನು ಯಾವುದೂ ಕೂಡ ಕೆಡಿಸಬೇಕಿಲ್ಲ’ ಎಂದು ಶಿಲ್ಪಾ ಶೆಟ್ಟಿ ಮಾರ್ಮಿಕವಾಗಿ ಪೋಸ್ಟ್​ ಮಾಡಿದ್ದರು.

‘ಈ ಹಿಂದೆ ನಮ್ಮನ್ನು ನೋಯಿಸಿದವರ ಬಗ್ಗೆ, ಅನುಭವಿಸಿದ ಹತಾಶೆಯ ಬಗ್ಗೆ, ಕೈಕೊಟ್ಟ ಅದೃಷ್ಟದ ಬಗ್ಗೆ ನಾವು ಕೋಪ ಮಾಡಿಕೊಳ್ಳುತ್ತೇವೆ. ಮುಂದೆ ಬರಬಹುದಾದ ಸಾವು-ನೋವು, ಕಷ್ಟ-ನಷ್ಟಗಳ ಬಗ್ಗೆ ಭಯ ಇಟ್ಟುಕೊಳ್ಳುತ್ತೇವೆ. ಹಿಂದೆ ಏನಾಗಿತ್ತು, ಮುಂದೆ ಏನಾಗಬಹುದು ಎಂಬುದರ ಚಿಂತೆ ಬಿಟ್ಟು, ಈ ಕ್ಷಣಕ್ಕಾಗಿ ನಾವು ಬದುಕಬೇಕು’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

Published On - 2:09 pm, Fri, 23 July 21

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ