AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ
ರಾಜ್​ ಕುಂದ್ರಾ
TV9 Web
| Edited By: |

Updated on:Jul 23, 2021 | 2:23 PM

Share

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

ರಾಜ್​ ಕುಂದ್ರಾ ಅವರನ್ನು ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ಪತಿಯ ಬಂಧನದ ಬಳಿಕ ಸಂಪೂರ್ಣ ಮೌನ ವಹಿಸಿದ್ದ ಶಿಲ್ಪಾ ಶೆಟ್ಟಿ ಈ ಬಗ್ಗೆ ಮೌನ ಮುರಿದಿದ್ದರು. ‘ಬದುಕಿರುವುದಕ್ಕಾಗಿ ನಾನು ಅದೃಷ್ಟವಂತೆ ಎಂದು ತಿಳಿದುಕೊಂಡು ದೀರ್ಘ ಉಸಿರು ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ. ಇಂದಿನ ನನ್ನ ಬದುಕನ್ನು ಯಾವುದೂ ಕೂಡ ಕೆಡಿಸಬೇಕಿಲ್ಲ’ ಎಂದು ಶಿಲ್ಪಾ ಶೆಟ್ಟಿ ಮಾರ್ಮಿಕವಾಗಿ ಪೋಸ್ಟ್​ ಮಾಡಿದ್ದರು.

‘ಈ ಹಿಂದೆ ನಮ್ಮನ್ನು ನೋಯಿಸಿದವರ ಬಗ್ಗೆ, ಅನುಭವಿಸಿದ ಹತಾಶೆಯ ಬಗ್ಗೆ, ಕೈಕೊಟ್ಟ ಅದೃಷ್ಟದ ಬಗ್ಗೆ ನಾವು ಕೋಪ ಮಾಡಿಕೊಳ್ಳುತ್ತೇವೆ. ಮುಂದೆ ಬರಬಹುದಾದ ಸಾವು-ನೋವು, ಕಷ್ಟ-ನಷ್ಟಗಳ ಬಗ್ಗೆ ಭಯ ಇಟ್ಟುಕೊಳ್ಳುತ್ತೇವೆ. ಹಿಂದೆ ಏನಾಗಿತ್ತು, ಮುಂದೆ ಏನಾಗಬಹುದು ಎಂಬುದರ ಚಿಂತೆ ಬಿಟ್ಟು, ಈ ಕ್ಷಣಕ್ಕಾಗಿ ನಾವು ಬದುಕಬೇಕು’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

Published On - 2:09 pm, Fri, 23 July 21

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ