Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ

ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

Big Breaking: ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ರಾಜ್​ ಕುಂದ್ರಾ ಪೋಲಿಸ್ ಕಸ್ಟಡಿ ಅವಧಿ ವಿಸ್ತರಣೆ
ರಾಜ್​ ಕುಂದ್ರಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 23, 2021 | 2:23 PM

ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ (ಜುಲೈ 19) ಬಂಧಿಸಿದ್ದರು. ನಂತರ ಅವರನ್ನು ಜುಲೈ 23 ವರೆಗೆ ಪೊಲೀಸ್​ ಕಸ್ಟಡಿಗೆ ನೀಡಲಾಗಿತ್ತು. ಈಗ ಈ ಅವಧಿಯನ್ನು ನ್ಯಾಯಾಲಯ ಜುಲೈ 27ವರೆಗೆ ವಿಸ್ತರಣೆ ಮಾಡಿದೆ.  

ರಾಜ್​ ಕುಂದ್ರಾ ಅವರನ್ನು ಹೆಚ್ಚುವರಿಯಾಗಿ 7 ದಿನ ಪೊಲೀಸ್​ ಕಸ್ಟಡಿಗೆ ನೀಡುವಂತೆ ಮುಂಬೈ ಪೊಲೀಸರು ಮುಂಬೈನ ಮ್ಯಾಜಿಸ್ಟ್ರೇಟ್​ ಕೋರ್ಟ್​ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕುಂದ್ರಾ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ.

ರಾಜ್​ ಕುಂದ್ರಾ ತನಿಖೆಗೆ ಸೂಕ್ತ ಸಹಕಾರ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ, ಪೊಲೀಸರಿಗೆ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಈ ಕಾರಣಕ್ಕೆ ಹೆಚ್ಚುವರಿಯಾಗಿ 7 ದಿನಗಳ ಕಾಲ ರಾಜ್​ ಕುಂದ್ರಾ ವಶಕ್ಕೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಪೊಲೀಸರು ಅನುಮತಿ ಕೇಳಿದ್ದರು. ಅಂತಿಮವಾಗಿ ನ್ಯಾಯಾಲಯ ರಾಜ್​ ಕುಂದ್ರಾ ಅವರನ್ನು ನಾಲ್ಕು ದಿನ ಮಾತ್ರ ಪೊಲೀಸ್​ ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ನೀಡಿದೆ.

ಪತಿಯ ಬಂಧನದ ಬಳಿಕ ಸಂಪೂರ್ಣ ಮೌನ ವಹಿಸಿದ್ದ ಶಿಲ್ಪಾ ಶೆಟ್ಟಿ ಈ ಬಗ್ಗೆ ಮೌನ ಮುರಿದಿದ್ದರು. ‘ಬದುಕಿರುವುದಕ್ಕಾಗಿ ನಾನು ಅದೃಷ್ಟವಂತೆ ಎಂದು ತಿಳಿದುಕೊಂಡು ದೀರ್ಘ ಉಸಿರು ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಮುಂದೆಯೂ ಅನೇಕ ಸವಾಲುಗಳನ್ನು ಎದುರಿಸಲಿದ್ದೇನೆ. ಇಂದಿನ ನನ್ನ ಬದುಕನ್ನು ಯಾವುದೂ ಕೂಡ ಕೆಡಿಸಬೇಕಿಲ್ಲ’ ಎಂದು ಶಿಲ್ಪಾ ಶೆಟ್ಟಿ ಮಾರ್ಮಿಕವಾಗಿ ಪೋಸ್ಟ್​ ಮಾಡಿದ್ದರು.

‘ಈ ಹಿಂದೆ ನಮ್ಮನ್ನು ನೋಯಿಸಿದವರ ಬಗ್ಗೆ, ಅನುಭವಿಸಿದ ಹತಾಶೆಯ ಬಗ್ಗೆ, ಕೈಕೊಟ್ಟ ಅದೃಷ್ಟದ ಬಗ್ಗೆ ನಾವು ಕೋಪ ಮಾಡಿಕೊಳ್ಳುತ್ತೇವೆ. ಮುಂದೆ ಬರಬಹುದಾದ ಸಾವು-ನೋವು, ಕಷ್ಟ-ನಷ್ಟಗಳ ಬಗ್ಗೆ ಭಯ ಇಟ್ಟುಕೊಳ್ಳುತ್ತೇವೆ. ಹಿಂದೆ ಏನಾಗಿತ್ತು, ಮುಂದೆ ಏನಾಗಬಹುದು ಎಂಬುದರ ಚಿಂತೆ ಬಿಟ್ಟು, ಈ ಕ್ಷಣಕ್ಕಾಗಿ ನಾವು ಬದುಕಬೇಕು’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದರು.

ಇದನ್ನೂ ಓದಿ: ‘ಬದುಕಿರುವುದಕ್ಕೆ ನಾನು ಅದೃಷ್ಟವಂತೆ’; ಗಂಡನ ನೀಲಿ ಚಿತ್ರ ಹಗರಣ ಬಯಲಾದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಮಾತು

Published On - 2:09 pm, Fri, 23 July 21