AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ ಮುಚ್ಚಿಕೊಂಡು ಓಡಾಡುತ್ತಿರುವ ಪತಿ ರಾಜ್ ​ಕುಂದ್ರಾ ಬಗ್ಗೆ ಶಿಲ್ಪಾ ಶೆಟ್ಟಿಗೆ ಇರುವ ಅಭಿಪ್ರಾಯವೇ ಬೇರೆ

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ ನಂತರದಲ್ಲಿ ರಾಜ್​ ಕುಂದ್ರಾಗೆ ಧೈರ್ಯದಿಂದ ಮುಖ ಎತ್ತಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮುಖಕ್ಕೆ ಬಟ್ಟೆ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ.

ಮುಖ ಮುಚ್ಚಿಕೊಂಡು ಓಡಾಡುತ್ತಿರುವ ಪತಿ ರಾಜ್ ​ಕುಂದ್ರಾ ಬಗ್ಗೆ ಶಿಲ್ಪಾ ಶೆಟ್ಟಿಗೆ ಇರುವ ಅಭಿಪ್ರಾಯವೇ ಬೇರೆ
ರಾಜ್​ ಕುಂದ್ರಾ-ಶಿಲ್ಪಾ
TV9 Web
| Edited By: |

Updated on: Sep 09, 2022 | 3:32 PM

Share

ಶಿಲ್ಪಾ ಶೆಟ್ಟಿ (Shilpa Shetty) ಪತಿ ರಾಜ್​ ಕುಂದ್ರಾ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಹಲವು ವಾರಗಳ ಕಾಲ ಅವರು ಜೈಲಿನಲ್ಲೇ ಇರಬೇಕಾಯಿತು. ಆ ದಿನಗಳು ಶಿಲ್ಪಾ ಶೆಟ್ಟಿಗೆ ಸಾಕಷ್ಟು ಚಾಲೆಂಜಿಂಗ್ ಆಗಿತ್ತು. ಸಾರ್ವಜನಿಕ ಬದುಕಿನಲ್ಲಿದ್ದಾಗ ಈ ರೀತಿ ಆದರೆ ಧೈರ್ಯದಿಂದ ಮುಖ ಎತ್ತಿಕೊಂಡು ಓಡಾಡುವುದು ಕಷ್ಟ. ಆದರೆ, ಶಿಲ್ಪಾ ಶೆಟ್ಟಿ ಇವೆಲ್ಲವನ್ನೂ ಎದುರಿಸಿ ಮುಂದೆ ಬಂದಿದ್ದಾರೆ. ಆದರೆ, ರಾಜ್​ ಕುಂದ್ರಾ (Raj Kundra) ಅವರು ಈಗಲೂ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಪತಿ ಬಗ್ಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಶಿಲ್ಪಾ ರಿವೀಲ್ ಮಾಡಿದ್ದಾರೆ.

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ ನಂತರದಲ್ಲಿ ರಾಜ್​ ಕುಂದ್ರಾಗೆ ಧೈರ್ಯದಿಂದ ಮುಖ ಎತ್ತಿಕೊಂಡು ಓಡಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಮುಖಕ್ಕೆ ಬಟ್ಟೆ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ. ಅವರಿಗೆ ಜನರನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಶಿಲ್ಪಾ ಶೆಟ್ಟಿ ಆ ರೀತಿ ಅಲ್ಲ. ಪತಿಯ ತಪ್ಪನ್ನು ಮನ್ನಿಸಿ ಅವರ ಜತೆ ಜೀವನ ನಡೆಸುತ್ತಿದ್ದಾರೆ. ರಾಜ್​ ಕುಂದ್ರಾ ಬರ್ತ್​​ಡೇ ಅಂಗವಾಗಿ ಅವರು ಭಾವನಾತ್ಮಕ ಪತ್ರ ಬರೆದಿದ್ದಾರೆ.

ಪತಿ ಹಾಗೂ ಮಕ್ಕಳ ಜತೆ ಇರುವ ಫೋಟೋವನ್ನು ಶಿಲ್ಪಾ ಪೋಸ್ಟ್ ಮಾಡಿದ್ದಾರೆ. ‘ನೀವು ನನ್ನ ಬೆಸ್ಟ್ ಫ್ರೆಂಡ್​ ಆಗಿದ್ದಕ್ಕೆ, ನನ್ನ ಮಕ್ಕಳಿಗೆ ತಂದೆ ಆಗಿದ್ದಕ್ಕೆ, ನನ್ನ ಪ್ರೀತಿ ಆಗಿದ್ದಕ್ಕೆ, ನನ್ನ ಶಕ್ತಿ ಆಗಿರುವುದಕ್ಕೆ ಧನ್ಯವಾದಗಳು. ಹ್ಯಾಪಿ ಬರ್ತ್​​ಡೇ. ನಿಮಗೆ ದೇವರು ಮತ್ತಷ್ಟು ಶಕ್ತಿ, ಆರೋಗ್ಯ, ರಕ್ಷಣೆ ನೀಡಲಿ’ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
‘ನಾನು ಅಶ್ಲೀಲ ಸಿನಿಮಾ ಮಾಡಿಲ್ಲ, ಮುಖ ಮುಚ್ಕೊಂಡು ಓಡಾಡಲ್ಲ’; ಮೌನ ಮುರಿದ ರಾಜ್​ ಕುಂದ್ರಾ
Image
‘ರಾಜ್​ ಕುಂದ್ರಾ ದಾರಿ ತಪ್ಪಲು ಕಾರಣವಾದ ಈಕೆಗೆ ಬಟ್ಟೆ ಬಿಚ್ಚೋದು ಬಿಟ್ಟು ಬೇರೇನೂ ಗೊತ್ತಿಲ್ಲ’: ಗೆಹನಾ ಆರೋಪ
Image
Shilpa Shetty: ರಾಜ್​ ಕುಂದ್ರಾ ಪೋರ್ನ್​ ದಂಧೆಯಲ್ಲಿ ಶಿಲ್ಪಾ ಶೆಟ್ಟಿ ತಪ್ಪು ಒಪ್ಪಿಕೊಳ್ಳಲಿ ಎಂದು ಹಠ ಹಿಡಿದ ಶೆರ್ಲಿನ್​ ಚೋಪ್ರಾ
Image
Shilpa Shetty: ರಾಜ್​ ಕುಂದ್ರಾ ಜೈಲಿನಲ್ಲಿರುವಾಗಲೇ ಗುಡ್​ ನ್ಯೂಸ್​ ನೀಡಿದ ಶಿಲ್ಪಾ ಶೆಟ್ಟಿ

ಇದನ್ನೂ ಓದಿ: Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಅವರು ಜೈಲಿನಿಂದ ಹೊರ ಬಂದ ನಂತರದಲ್ಲಿ ಶಿಲ್ಪಾ ವಿಚ್ಛೇದನ ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸುದ್ದಿ ಸುಳ್ಳಾಗಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇತ್ತೀಚೆಗೆ ಶೂಟಿಂಗ್ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿ ಕಾಲಿಗೆ ಪೆಟ್ಟಾಗಿದೆ. ಹೀಗಾಗಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!