AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಹೊಸ ವಾರ್ಮ್​​ಅಪ್​ ಹೇಳಿಕೊಟ್ಟ ಶಿಲ್ಪಾ ಶೆಟ್ಟಿ; ವಿಡಿಯೋ ವೈರಲ್

ಶಿಲ್ಪಾ ಮತ್ತೆ ತಮ್ಮ ಬಣ್ಣದ ಲೋಕದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ಯೋಗ ಮತ್ತು ವರ್ಕೌಟ್​ಗಳನ್ನು ಕೂಡ ಮಾಡುತ್ತಿದ್ದಾರೆ.

ಅಭಿಮಾನಿಗಳಿಗೆ ಹೊಸ ವಾರ್ಮ್​​ಅಪ್​ ಹೇಳಿಕೊಟ್ಟ ಶಿಲ್ಪಾ ಶೆಟ್ಟಿ; ವಿಡಿಯೋ ವೈರಲ್
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Oct 18, 2021 | 8:36 PM

Share

ಪತಿ ರಾಜ್​ಕುಂದ್ರಾ ಬಂಧನದ ನಂತರ ಸೈಲೆಂಟ್​ ಆಗಿದ್ದ ಶಿಲ್ಪಾ ಶೆಟ್ಟಿ ಈಗ ಸೋಶಿಯಲ್​ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿಯನ್ನು ಅವರು ಪೋಸ್ಟ್​ ಮಾಡುತ್ತಾ, ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಪ್ರಯತ್ನಿಸುತ್ತಿದ್ದಾರೆ. ಈಗ ಅವರು ವಾರ್ಮ್​ಅಪ್​​ ವಿಡಿಯೋ ಪೋಸ್ಟ್​ ಮಾಡಿದ್ದಾರೆ. ಅಲ್ಲದೆ, ಇದರಿಂದ ಆಗುವ ಲಾಭಗಳೇನು ಎಂದು ಅವರು ಅಭಿಮಾನಿಗಳಿಗೆ ವಿವರಿಸಿದ್ದಾರೆ.

ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್​ ಕುಂದ್ರಾ ಬಂಧನದ ನಂತರ ಶಿಲ್ಪಾ ಶೆಟ್ಟಿ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಒಂದು ತಿಂಗಳವರೆಗೆ ಅವರು ರಿಯಾಲಿಟಿ ಶೋಗಳಿಗೂ ತೆರಳಿರಲಿಲ್ಲ. ಈಗ ಅವರು ಮತ್ತೆ ತಮ್ಮ ಬಣ್ಣದ ಲೋಕದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ಯೋಗ ಮತ್ತು ವರ್ಕೌಟ್​ಗಳನ್ನು ಕೂಡ ಮಾಡುತ್ತಿದ್ದಾರೆ.

ಶಿಲ್ಪಾ ಶೆಟ್ಟಿ ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ನಿತ್ಯವೂ ಯೋಗಾಭ್ಯಾಸ ಮಾಡುತ್ತಾರೆ. ಇದರ ಜತೆಗೆ ಬಾಡಿನ ಫಿಟ್​ ಆಗಿಟ್ಟುಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಾರೆ. ಈಗ ಅವರು ಜಿಮ್​ನಲ್ಲಿ ವಾರ್ಮ್​​ಅಪ್​ ಮಾಡಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅವರು ಕೆಲ ಸಾಲುಗಳನ್ನು ಕೂಡ ಬರೆದುಕೊಂಡಿದ್ದಾರೆ.

‘ನೀವು ರಿಸ್ಕ್​ ತೆಗೆದುಕೊಳ್ಳದೆ ಮತ್ತು ನಿಮ್ಮ ಆರಾಮ ಜೋನ್​ನಿಂದ ಹೊರಬರದೆ ಬದುಕಲು ಸಾಧ್ಯವಿಲ್ಲ. ಇದಕ್ಕೆ ಹೆಚ್ಚು ದಿಟ್ಟತನ ಬೇಕು. ನಾನು ಹೊಸ ಏರೋಬಿಕ್ ತಾಲೀಮು ನಡೆಸುತ್ತಿದ್ದೇನೆ. ಇದಕ್ಕೆ ಬುಡಕಟ್ಟು ಸ್ಕ್ವಾಟ್ಸ್ ಎನ್ನುತ್ತೇವೆ. ಇದು ದೇಹದ ಕೆಳಭಾಗದ ಎಲ್ಲಾ ಸ್ನಾಯುಗಳು, ಭುಜಗಳು, ತೋಳು ಮತ್ತು ಕಾಲುಗಳ ಸ್ನಾಯುಗಳಿಗೆ ಸಹಕಾರಿ. ಪ್ರತಿನಿತ್ಯ ಒಂದು ನಿಮಿಷದಂತೆ 4 ಸೆಟ್‌ಗಳನ್ನು ಮಾಡಬೇಕು. ಪ್ರತಿ ಸೆಟ್​ನ ನಡುವೆ ಕೇವಲ 30 ಸೆಕೆಂಡುಗಳ ವಿರಾಮವನ್ನು ನೀಡಬೇಕು. ವ್ಯತ್ಯಾಸವನ್ನು ನೋಡಲು ಸತತವಾಗಿ ಪ್ರಯತ್ನ ಮಾಡಿ. ಧೈರ್ಯವಿಲ್ಲದೆ ಏನೂ ಬರುವುದಿಲ್ಲ’ ಎಂದಿದ್ದಾರೆ ಅವರು.

ರಾಜ್​ ಕುಂದ್ರಾ ಬಂಧನಕ್ಕೆ ಒಳಗಾದ ದಿನದಿಂದಲೂ ಅವರ ವಿರುದ್ಧ ಶೆರ್ಲಿನ್​ ಚೋಪ್ರಾ ಹಲವು ಆರೋಪಗಳನ್ನು ಮಾಡುತ್ತಲೇ ಬಂದಿದ್ದಾರೆ. ಅಶ್ಲೀಲ ಸಿನಿಮಾಗಳಲ್ಲಿ ನಟಿಸುವಂತೆ ತಮ್ಮ ಮೇಲೆ ಒತ್ತಡ ಹೇರಿದ್ದೇ ರಾಜ್​ ಕುಂದ್ರಾ ಎಂದು ಅವರು ಹೇಳಿದ್ದರು. ಬೆತ್ತಲಾಗಿ ನಟಿಸುವಂತೆ ಬ್ಲ್ಯಾಕ್​ ಮೇಲ್​ ಮಾಡಲಾಯಿತು. ಅದಕ್ಕೆ ಒಪ್ಪದಿದ್ದಾಗ ಮಾನಸಿಕವಾಗಿ ಕಿರುಕುಳ ನೀಡಿದರು ಎಂದು ಶೆರ್ಲಿನ್​ ಆರೋಪಿಸಿದ್ದರು. ಈಗ ರಾಜ್​ ಕುಂದ್ರಾ ವಿರುದ್ಧ ಅವರು ದೂರು ನೀಡಿದ್ದು, ಲೈಂಗಿಕ ಕಿರುಕುಳದ ಆರೋಪವನ್ನು ಹೊರಿಸಿದ್ದಾರೆ. ಇದರ ಜತೆಗೆ ಶಿಲ್ಪಾ ಮೇಲೂ ದೂರು ಹೊರಿಸಿದ್ದಾರೆ.

ಇದನ್ನೂ ಓದಿ: Shilpa Shetty: ಮತ್ಸ್ಯಕನ್ಯೆಯ ಅವತಾರದಲ್ಲಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ; ಅಭಿಮಾನಿಗಳು ಹೇಳಿದ್ದೇನು?

ರಾಜ್​ ಕುಂದ್ರಾ ವಿರುದ್ಧ ಲೈಂಗಿಕ ಕಿರುಕುಳದ ದೂರು; ಈ ಬಾರಿ ಶಿಲ್ಪಾ ಶೆಟ್ಟಿಗೂ ಕಾದಿಗೆ ಸಂಕಷ್ಟ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?