AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ 60 ಕೋಟಿ ರೂಪಾಯಿ ವಂಚನೆ ಆರೋಪ

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ವಿರುದ್ಧ 60 ಕೋಟಿ ರೂಪಾಯಿಗಳ ವಂಚನೆ ಆರೋಪ ಕೇಳಿ ಬಂದಿದೆ. ದೀಪಕ್ ಕೊಠಾರಿ ಎಂಬ ಉದ್ಯಮಿ ದೂರು ದಾಖಲಿಸಿದ್ದು, ಲೋಟಸ್ ಕ್ಯಾಪಿಟಲ್‌ನಿಂದ ಪಡೆದ ಸಾಲವನ್ನು ಹಿಂದಿರುಗಿಸದಿರುವ ಬಗ್ಗೆ ದೂರಿದ್ದಾರೆ. ಈ ಪ್ರಕರಣ ಆರ್ಥಿಕ ಅಪರಾಧಗಳ ವಿಭಾಗದ ತನಿಖೆಯಲ್ಲಿದೆ.

ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ವಿರುದ್ಧ 60 ಕೋಟಿ ರೂಪಾಯಿ ವಂಚನೆ ಆರೋಪ
ರಾಜ್-ಶಿಲ್ಪಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Aug 14, 2025 | 8:57 AM

Share

ಕಳೆದ ಕೆಲವು ವರ್ಷಗಳಿಂದ ನಟಿ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾ ಹಲವು ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈಗ ಶಿಲ್ಪಾ ಮತ್ತು ರಾಜ್ ಅವರ ಸಮಸ್ಯೆಗಳು ಮತ್ತೆ ಹೆಚ್ಚಿವೆ. ಈ ದಂಪತಿ ವಂಚನೆ ಮಾಡಿದ್ದಾರೆ ಎಂದು ಮುಂಬೈ ಮೂಲದ ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ಈ ವಂಚನೆ ಮೊತ್ತ 60 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಶಿಲ್ಪಾ ಮತ್ತು ರಾಜ್ ವಿರುದ್ಧ ಆರ್ಥಿಕ ಅಪರಾಧಗಳ ವಿಭಾಗ (EOW) ಜುಹು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ವಂಚನೆ ಮೊತ್ತ 10 ಕೋಟಿ ರೂ.ಗಳಿಗಿಂತ ಹೆಚ್ಚಿರುವುದರಿಂದ ಪೊಲೀಸರು ಪ್ರಕರಣವನ್ನು ಆರ್ಥಿಕ ಅಪರಾಧಗಳ ವಿಭಾಗಕ್ಕೆ (EOW) ವರ್ಗಾಯಿಸಿದ್ದಾರೆ. ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ 60 ವರ್ಷದ ದೀಪಕ್ ಕೊಠಾರಿ 60 ಕೋಟಿ ರೂ. ವಂಚನೆ ಪ್ರಕರಣ ದಾಖಲಿಸಿದ್ದಾರೆ. ದೀಪಕ್ ಕೊಠಾರಿ ಲೋಟಸ್ ಕ್ಯಾಪಿಟಲ್ ಫೈನಾನ್ಷಿಯಲ್ ಸರ್ವೀಸಸ್‌ನ ನಿರ್ದೇಶಕರಾಗಿದ್ದಾರೆ.

ದೀಪಕ್ ಕೊಠಾರಿ ಸಲ್ಲಿಸಿದ ದೂರಿನ ಪ್ರಕಾರ, ಶಿಲ್ಪಾ ಮತ್ತು ರಾಜ್ ಕುಂದ್ರಾ ಅವರನ್ನು ಮೀಡಿಯೇಟರ್ ರಾಜೇಶ್ ಆರ್ಯ ಎಂಬುವವರು ಪರಿಚಯಿಸಿದ್ದರು. ಈ ದಂಪತಿ ಆ ಸಮಯದಲ್ಲಿ ‘ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌’ನ ನಿರ್ದೇಶಕರಾಗಿದ್ದರು. ಆರೋಪಿ ಶಿಲ್ಪಾ ಮತ್ತು ರಾಜ್ 2015ರಲ್ಲಿ ದೀಪಕ್ ಬಳಿ 75 ಕೋಟಿ ರೂ. ಸಾಲಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದಕ್ಕೆ ಅವರು ಶೇಕಡಾ 12 ರಷ್ಟು ಬಡ್ಡಿಯನ್ನು ಪಾವತಿಸಬೇಕಾಯಿತು. ಈ ಬಡ್ಡಿಯನ್ನು ತಪ್ಪಿಸಲು, ಸೆಲೆಬ್ರಿಟಿ ದಂಪತಿಗಳು ಮೊತ್ತವನ್ನು ಸಾಲದ ಬದಲು ಕಂಪನಿಯಲ್ಲಿ ಹೂಡಿಕೆ ಎಂದು ತೋರಿಸಿದರು. ಈ ದಂಪತಿಗೆ ದೀಪಕ್ ಮೊದಲ ಕಂತಲ್ಲಿ 31.95 ಕೋಟಿ ರೂಪಾಯಿ ಹಾಗೂ ಎರಡನೇ ಕಂತಲ್ಲಿ 28.54 ಕೋಟಿ ರೂಪಾಯಿ ನೀಡಿದ್ದರು. ಈ ಮೂಲಕ ಒಟ್ಟೂ 60.48 ಕೋಟಿ ಸಾಲವನ್ನು ಈ ದಂಪತಿಗೆ ನೀಡಲಾಯಿತು. ರಾಜ್ ಮತ್ತು ಶಿಲ್ಪಾ ಪ್ರತಿ ತಿಂಗಳು ಮೊತ್ತವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅದು ಈಡೇರಲಿಲ್ಲ.

ಇದನ್ನೂ ಓದಿ
Image
ಗೌತಮ್ ಕೈಯಲ್ಲಿ ತಾಯಿಯ ಹಿಸ್ಟರಿ; ದುರ್ಗಾಗೆ ಬಂತು ಅಕ್ಕನ ನೆನಪು
Image
20 ದಿನಕ್ಕೆ ‘ಕಾಟೇರ’ ಕಲೆಕ್ಷನ್ ದಾಖಲೆ ಮುರಿದ ‘ಸು ಫ್ರಮ್ ಸೋ’
Image
‘ಸತ್ಯ ಎಲ್ಲಕ್ಕಿಂತ ದೊಡ್ಡದು, ನ್ಯಾಯ ಸಿಗುತ್ತದೆ’; ಪವಿತ್ರಾ ಗೌಡ
Image
ಶ್ವಾನಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ರಾಜ್ ಹೇಳೋದೇನು?

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ಮಲಯಾಳಂ ಸಿನಿಮಾನಲ್ಲಿ ನಟಿಸಲು ಭಯವಂತೆ, ಏಕೆ?

ಎಫ್‌ಐಆರ್ ಪ್ರಕಾರ, ಶಿಲ್ಪಾ ಶೆಟ್ಟಿ ಈ ವಹಿವಾಟಿಗೆ ಸಾಕ್ಷಿಯಾಗಿದ್ದರು. ಆದರೆ ಅವರು ಸೆಪ್ಟೆಂಬರ್ 2016ರಲ್ಲಿ ಕಂಪನಿಯ ನಿರ್ದೇಶಕಿ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ದೀಪಕ್ ಕೊಠಾರಿ ಅವರಿಗೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಹಿಂದಿನ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡರು. ಈಗ ಶಿಲ್ಪಾ ಮತ್ತು ರಾಜ್ ಈ ಹಣ ಹಿಂದಿರುಗಿಸಿಲ್ಲ ಎನ್ನಲಾಗಿದೆ. ಇದಕ್ಕಾಗಿ ದೂರು ದಾಖಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:57 am, Thu, 14 August 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ