AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಆ್ಯಪ್​ ಬಗ್ಗೆ ನಂಗೆ ಗೊತ್ತಿಲ್ಲ, ಪತಿಯ ಉದ್ಯಮದಲ್ಲಿ ನಾನು ತಲೆ ಹಾಕಲ್ಲ; ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಬಂಧನ ನಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಸಾಕಷ್ಟು ಜನರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತಿದೆ. ಈ ಮಧ್ಯೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ಮಾಡಿದ್ದ ಮುಂಬೈ ಪೊಲೀಸ್​ ಅಪರಾಧ ವಿಭಾಗ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿತ್ತು

ಆ ಆ್ಯಪ್​ ಬಗ್ಗೆ ನಂಗೆ ಗೊತ್ತಿಲ್ಲ, ಪತಿಯ ಉದ್ಯಮದಲ್ಲಿ ನಾನು ತಲೆ ಹಾಕಲ್ಲ; ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 30, 2021 | 4:54 PM

Share

ಅಶ್ಲೀಲ ಸಿನಿಮಾ ದಂಧೆಯನ್ನು ರಾಜ್​ ಕುಂದ್ರಾ ಇಷ್ಟು ದಿನ ಸದ್ದಿಲ್ಲದೆ ನಡೆಸುತ್ತಿದ್ದರು. ಈ ದಂಧೆಯಲ್ಲಿ ಸಾಕಷ್ಟು ಮಾಡೆಲ್ ಹಾಗೂ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜ್​ ಕುಂದ್ರಾ ಹಣ ಮಾಡೋಕೆ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಅಚ್ಚರಿ ಎಂದರೆ, ಶಿಲ್ಪಾ ಶೆಟ್ಟಿ ಅವರಿಗೂ ಕೂಡ ಈ ಬಗ್ಗೆ ಅರಿವಿರಲಿಲ್ಲವಂತೆ.

ರಾಜ್​ ಕುಂದ್ರಾ ಬಂಧನ ನಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಸಾಕಷ್ಟು ಜನರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತಿದೆ. ಈ ಮಧ್ಯೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ಮಾಡಿದ್ದ ಮುಂಬೈ ಪೊಲೀಸ್​ ಅಪರಾಧ ವಿಭಾಗ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಕೆಲವು ಮಹತ್ವದ ಹೇಳಿಕೆಯನ್ನು ಶಿಲ್ಪಾ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್​ ಕುಂದ್ರಾ ಹಾಟ್​ ಶಾಟ್ಸ್​ ಹೆಸರಿನ ಆ್ಯಪ್​ ಮೂಲಕ ನೀಲಿಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ವರ್ಷ ಈ ಆ್ಯಪ್​ಅನ್ನು ಪ್ಲೇಸ್ಟೋರ್​ನಿಂದ ತೆಗೆದು ಹಾಕಲಾಗಿತ್ತು. ಈ ಆ್ಯಪ್​ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿತ್ತಾದರೂ ಅದರಲ್ಲಿ ಯಾವ ಕಂಟೆಂಟ್​ ಸಿಗುತ್ತದೆ ಎನ್ನುವುದು ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ.

‘ಹಾಟ್​ ಶಾಟ್ಸ್​ ಆ್ಯಪ್​ನಲ್ಲಿ ಯಾವ ವಿಚಾರ ಸಿಗುತ್ತದೆ, ಅದರಲ್ಲಿ ಏನು ಸಿಗುತ್ತದೆ ಎನ್ನುವ ಬಗ್ಗೆ ನನಗೆ ಸ್ವಲ್ಪವೂ ಮಾಹಿತಿ ಇಲ್ಲ. ನಾನು ಎಂದಿಗೂ ನನ್ನ ಪತಿ ಉದ್ಯಮದಲ್ಲಿ ತಲೆ ಹಾಕಿಲ್ಲ. ಹೀಗಾಗಿ, ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ’ ಎಂದು ಪೊಲೀಸರ ಎದುರು ಶಿಲ್ಪಾ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಕೋರ್ಟ್​ ಪ್ರಶ್ನೆ

ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆಗೆ ಒಳಪಟ್ಟಿದೆ. ‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್