AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಆ್ಯಪ್​ ಬಗ್ಗೆ ನಂಗೆ ಗೊತ್ತಿಲ್ಲ, ಪತಿಯ ಉದ್ಯಮದಲ್ಲಿ ನಾನು ತಲೆ ಹಾಕಲ್ಲ; ಶಿಲ್ಪಾ ಶೆಟ್ಟಿ

ರಾಜ್​ ಕುಂದ್ರಾ ಬಂಧನ ನಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಸಾಕಷ್ಟು ಜನರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತಿದೆ. ಈ ಮಧ್ಯೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ಮಾಡಿದ್ದ ಮುಂಬೈ ಪೊಲೀಸ್​ ಅಪರಾಧ ವಿಭಾಗ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿತ್ತು

ಆ ಆ್ಯಪ್​ ಬಗ್ಗೆ ನಂಗೆ ಗೊತ್ತಿಲ್ಲ, ಪತಿಯ ಉದ್ಯಮದಲ್ಲಿ ನಾನು ತಲೆ ಹಾಕಲ್ಲ; ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 30, 2021 | 4:54 PM

Share

ಅಶ್ಲೀಲ ಸಿನಿಮಾ ದಂಧೆಯನ್ನು ರಾಜ್​ ಕುಂದ್ರಾ ಇಷ್ಟು ದಿನ ಸದ್ದಿಲ್ಲದೆ ನಡೆಸುತ್ತಿದ್ದರು. ಈ ದಂಧೆಯಲ್ಲಿ ಸಾಕಷ್ಟು ಮಾಡೆಲ್ ಹಾಗೂ ಹೀರೋಯಿನ್​ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜ್​ ಕುಂದ್ರಾ ಹಣ ಮಾಡೋಕೆ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಅಚ್ಚರಿ ಎಂದರೆ, ಶಿಲ್ಪಾ ಶೆಟ್ಟಿ ಅವರಿಗೂ ಕೂಡ ಈ ಬಗ್ಗೆ ಅರಿವಿರಲಿಲ್ಲವಂತೆ.

ರಾಜ್​ ಕುಂದ್ರಾ ಬಂಧನ ನಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಸಾಕಷ್ಟು ಜನರ ಹೆಸರು ಈ ಪ್ರಕರಣದಲ್ಲಿ ಕೇಳಿ ಬರುತ್ತಿದೆ. ಈ ಮಧ್ಯೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ಮಾಡಿದ್ದ ಮುಂಬೈ ಪೊಲೀಸ್​ ಅಪರಾಧ ವಿಭಾಗ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಕೆಲವು ಮಹತ್ವದ ಹೇಳಿಕೆಯನ್ನು ಶಿಲ್ಪಾ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್​ ಕುಂದ್ರಾ ಹಾಟ್​ ಶಾಟ್ಸ್​ ಹೆಸರಿನ ಆ್ಯಪ್​ ಮೂಲಕ ನೀಲಿಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ವರ್ಷ ಈ ಆ್ಯಪ್​ಅನ್ನು ಪ್ಲೇಸ್ಟೋರ್​ನಿಂದ ತೆಗೆದು ಹಾಕಲಾಗಿತ್ತು. ಈ ಆ್ಯಪ್​ ಬಗ್ಗೆ ಶಿಲ್ಪಾ ಶೆಟ್ಟಿಗೆ ತಿಳಿದಿತ್ತಾದರೂ ಅದರಲ್ಲಿ ಯಾವ ಕಂಟೆಂಟ್​ ಸಿಗುತ್ತದೆ ಎನ್ನುವುದು ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ.

‘ಹಾಟ್​ ಶಾಟ್ಸ್​ ಆ್ಯಪ್​ನಲ್ಲಿ ಯಾವ ವಿಚಾರ ಸಿಗುತ್ತದೆ, ಅದರಲ್ಲಿ ಏನು ಸಿಗುತ್ತದೆ ಎನ್ನುವ ಬಗ್ಗೆ ನನಗೆ ಸ್ವಲ್ಪವೂ ಮಾಹಿತಿ ಇಲ್ಲ. ನಾನು ಎಂದಿಗೂ ನನ್ನ ಪತಿ ಉದ್ಯಮದಲ್ಲಿ ತಲೆ ಹಾಕಿಲ್ಲ. ಹೀಗಾಗಿ, ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ’ ಎಂದು ಪೊಲೀಸರ ಎದುರು ಶಿಲ್ಪಾ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಕೋರ್ಟ್​ ಪ್ರಶ್ನೆ

ರಾಜ್​ ಕುಂದ್ರಾ ಅವರ ಅಶ್ಲೀಲ ಸಿನಿಮಾ ದಂಧೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಹೆಸರು ಮುನ್ನೆಲೆಗೆ ಬಂದಿತ್ತು. ಇವರ ಬಗ್ಗೆ ನಾನಾ ಸುದ್ದಿಗಳು ಪ್ರಸಾರಗೊಂಡವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿಲ್ಪಾ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದು, ಮಾನನಷ್ಟ ಮೊಕದ್ದಮೆ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆಗೆ ಒಳಪಟ್ಟಿದೆ. ‘ಶಿಲ್ಪಾ ಶೆಟ್ಟಿಗೆ ಮಾನನಷ್ಟವಾಗಲು ಕಾರಣವೇನು? ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಯ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದು ಅವರ ಜೀವನದ ಒಂದು ಭಾಗ. ಈ ಹಿಂದೆ ಕೂಡ ಈ ವಿಚಾರಕ್ಕೆ ಸಂಬಂಧಿಸಿ ಹಲವು ತೀರ್ಪು ನೀಡಲಾಗಿತ್ತು. ಎಷ್ಟು ಬಾರಿ ಇದನ್ನೇ ಹೇಳಬೇಕು? ಪೊಲೀಸ್​ ಮೂಲಗಳು ಹೇಳಿವೆ ಎಂದು ವರದಿಯಾದರೆ ಅದು ಎಂದಿಗೂ ಮಾನಹಾನಿಯಾಗುವುದಿಲ್ಲ. ಶಿಲ್ಪಾ ಶೆಟ್ಟಿ ಅತ್ತಿದ್ದಾರೆ ಎಂದು ವರದಿ ಪ್ರಕಟ ಮಾಡಿದರೆ ಅದು ಮಾನ ಹಾನಿ ಹೇಗಾಗುತ್ತದೆ?’ ಎಂದು ನ್ಯಾಯಮೂರ್ತಿ ಜಿಎಸ್​ ಪಟೇಲ್ ಅವರು ಶಿಲ್ಪಾ ಶೆಟ್ಟಿ ಪರ ವಕೀಲರಿಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್​ ಕುಂದ್ರಾ ಕಾಮಕ್ಕೆ ಹೆದರಿ ಶೌಚಾಲಯದಲ್ಲಿ ಅಡಗಿಕೊಂಡಿದ್ದ ನಟಿ; ಪೊಲೀಸ್​ ದೂರಿನಲ್ಲಿ ರಹಸ್ಯ ಬಹಿರಂಗ

‘ಅಳುವುದರ ಬಗ್ಗೆ ಸುದ್ದಿ ಪ್ರಕಟಿಸಿದರೆ ಮಾನನಷ್ಟ ಹೇಗಾಗುತ್ತೆ?’ ಶಿಲ್ಪಾ ಶೆಟ್ಟಿಗೆ ಕೋರ್ಟ್ ತರಾಟೆ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!