AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಕುರಿತು ಶಿಲ್ಪಾ ಶೆಟ್ಟಿ ನಕಲಿ ಹೇಳಿಕೆ ವೈರಲ್: ‘ಸಂಪೂರ್ಣ ಸುಳ್ಳು’ ಎಂದು ಖಂಡಿಸಿದ ನಟಿ

ಸಾಮಾಜಿಕ ಜಾಲತಾಣಗಳಲ್ಲಿ ಮೀಸಲಾತಿ ವ್ಯವಸ್ಥೆಯ ಪುನರ್‌ಪರಿಶೀಲನೆ ಅಥವಾ ರದ್ದತಿಯ ಕುರಿತು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲೇ ಶಿಲ್ಪಾ ಶೆಟ್ಟಿ ಅವರ ಹೆಸರಿನಲ್ಲಿ ನಕಲಿ ಸ್ಕ್ರೀನ್‌ಶಾಟ್ ವೈರಲ್ ಆಗಿತ್ತು. ಆದರೆ, ಇದು ಎಡಿಟ್ ಮಾಡಿದ ನಕಲಿ ಸ್ಕ್ರೀನ್‌ಶಾಟ್ ಎಂದು ಸ್ಪಷ್ಟಪಡಿಸುವುದರ ಮೂಲಕ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.

ಮೀಸಲಾತಿ ಕುರಿತು ಶಿಲ್ಪಾ ಶೆಟ್ಟಿ ನಕಲಿ ಹೇಳಿಕೆ ವೈರಲ್: ‘ಸಂಪೂರ್ಣ ಸುಳ್ಳು’ ಎಂದು ಖಂಡಿಸಿದ ನಟಿ
Shilpa Shetty
ಮದನ್​ ಕುಮಾರ್​
|

Updated on: Jul 28, 2026 | 3:21 PM

Share

ಮುಖ್ಯಾಂಶಗಳು

  • ಎಡಿಟ್ ಮಾಡಿದ ಇನ್‌ಸ್ಟಾಗ್ರಾಮ್ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
  • ವೈರಲ್ ಆಗುತ್ತಿರುವ ಮೀಸಲಾತಿ ಕುರಿತಾದ ಹೇಳಿಕೆ ಸಂಪೂರ್ಣ ಸುಳ್ಳು ಎಂದ ನಟಿ ಶಿಲ್ಪಾ ಶೆಟ್ಟಿ.
  • ‘ಇಂತಹ ಸುಳ್ಳು ಸುದ್ದಿಗಳನ್ನು ಯಾರೂ ನಂಬಬೇಡಿ’ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದ್ದಾರೆ.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದು ನಕಲಿ ಪೋಸ್ಟ್ ಹರಿದಾಡುತ್ತಿದೆ. ಅದನ್ನು ನೋಡಿದ ಅನೇಕರು ಶಿಲ್ಪಾ ಶೆಟ್ಟಿ ಅವರನ್ನು ಕಟುವಾಗಿ ಟೀಕಿಸಲು ಆರಂಭಿಸಿದ್ದಾರೆ. ವೈರಲ್ ಆಗಿರುವ ಪೋಸ್ಟ್​ನಲ್ಲಿ ಶಿಲ್ಪಾ ಶೆಟ್ಟಿ ಅವರು ಜಾತಿ ಆಧಾರಿತ ಮೀಸಲಾತಿ (Reservation) ಬಗ್ಗೆ ವಿರೋಧಿ ನಿಲುವು ಹೊಂದಿದ್ದಾರೆ ಎಂಬುದನ್ನು ಸೂಚಿಸಲಾಗಿದೆ. ಆದರೆ ಅದು ನಕಲಿ ಪೋಸ್ಟ್ ಆಗಿದ್ದು, ಅದರ ವಿರುದ್ಧ ಶಿಲ್ಪಾ ಶೆಟ್ಟಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಪಷ್ಟನೆ ನೀಡಿದ ಶಿಲ್ಪಾ ಶೆಟ್ಟಿ:

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹೆಸರನ್ನು ಬಳಸಿ ಹರಿಬಿಡಲಾಗಿರುವ ಮೀಸಲಾತಿ ಕುರಿತಾದ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಮತ್ತು ಕಲ್ಪಿತ ಎಂದು ಶಿಲ್ಪಾ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ನನ್ನ ಹೆಸರಿನಲ್ಲಿ ಮೀಸಲಾತಿ ಕುರಿತು ಹರಿದಾಡುತ್ತಿರುವ ನಕಲಿ ಹೇಳಿಕೆಗಳನ್ನು ನೋಡಿ ಆಘಾತವಾಗಿದೆ. ಇದು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್. ಇಂತಹ ಹುಸಿ ಸುದ್ದಿಗಳನ್ನು ಯಾರೂ ನಂಬಬೇಡಿ’ ಎಂದು ಮನವಿ ಮಾಡಿದ್ದಾರೆ.

ವೈರಲ್ ಪೋಸ್ಟ್‌ನಲ್ಲೇನಿತ್ತು?

ಕಳೆದ ಕೆಲವು ದಿನಗಳಿಂದ ಇನ್‌ಸ್ಟಾಗ್ರಾಮ್ ಸ್ಟೋರಿಯ ರೀತಿಯಲ್ಲಿದ್ದ ಸ್ಕ್ರೀನ್‌ಶಾಟ್‌ವೊಂದು ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿತ್ತು. ಅದರಲ್ಲಿ, ‘ಮೀಸಲಾತಿಯನ್ನು ಮುಟ್ಟಬೇಡಿ. ಸಾಮಾನ್ಯ ವರ್ಗದ ವೈದ್ಯರು ಸಾಮಾನ್ಯ ವರ್ಗದ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಿ. ಉಳಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಜಾತಿಯ ರೋಗಿಗಳಿಗೆ ಚಿಕಿತ್ಸೆ ನೀಡಲಿ. ಹೀಗೆ ಕೆಲವು ವರ್ಷ ಮಾಡಿದರೆ, ಜನರೇ ಮೀಸಲಾತಿಯನ್ನು ರದ್ದುಗೊಳಿಸಲು ಆಗ್ರಹಿಸುತ್ತಾರೆ. ಮೀಸಲಾತಿಯಿಂದ ಕೌಶಲ್ಯ ಗಳಿಸಲು ಸಾಧ್ಯವಿಲ್ಲ’ ಎಂದು ಬರೆಯಲಾಗಿತ್ತು.

ಇದನ್ನೂ ಓದಿ: 50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಶಿಲ್ಪಾ ಶೆಟ್ಟಿ ಸಿನಿಮಾ, ಕಿರುತೆರೆ ಶೋ:

ವೃತ್ತಿಜೀವನದ ವಿಚಾರಕ್ಕೆ ಬಂದರೆ, ಶಿಲ್ಪಾ ಶೆಟ್ಟಿ ಇತ್ತೀಚೆಗೆ ಜೋಗಿ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಸಿನಿಮಾದ ಮೂಲಕ ಅವರು ಹಲವು ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಮರಳಿದ್ದರು. ನಿರೀಕ್ಷಿತ ಮಟ್ಟದಲ್ಲಿ ‘ಕೆಡಿ’ ಹಿಟ್ ಆಗಲಿಲ್ಲ. ಸದ್ಯಕ್ಕೆ ಶಿಲ್ಪಾ ಶೆಟ್ಟಿ ಅವರು ‘ಮಾ ಹೈ ನಾ’ ರಿಯಾಲಿಟಿ ಕುಕಿಂಗ್ ಶೋನಲ್ಲಿ ನಿರೂಪಕಿಯಾಗಿ ಸಕ್ರಿಯರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ