Shilpa Shetty: ಮನೆ ಮುಟ್ಟುಗೋಲು ಬೆನ್ನಲ್ಲೇ ಕುಟುಂಬ ಸಮೇತ ದೈವದ ಮೊರೆ ಹೋದ ನಟಿ ಶಿಲ್ಪಾ ಶೆಟ್ಟಿ

ಇತ್ತೀಚೆಗೆ ಶೀಲ್ಪಾ ಶೆಟ್ಟಿ ಅವರ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಬೆನ್ನಲ್ಲೇ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ತಾಯಿ ಹಾಗೂ ಮಕ್ಕಳ ಜೊತೆ ಅವರು ದೈವ ಕೋಲ ವೀಕ್ಷಿಸಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Shilpa Shetty: ಮನೆ ಮುಟ್ಟುಗೋಲು ಬೆನ್ನಲ್ಲೇ ಕುಟುಂಬ ಸಮೇತ ದೈವದ ಮೊರೆ ಹೋದ ನಟಿ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Apr 29, 2024 | 12:17 PM

ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರು ಮೂಲದವರು. ಅವರು ಈಗ ಬಾಲಿವುಡ್​ನಲ್ಲಿ ಸೆಟಲ್ ಆಗಿರಬಹುದು, ಆದರೆ, ಅವರು ಎಂದಿಗೂ ತಮ್ಮ ಸಂಪ್ರದಾಯವನ್ನು ಮರೆತಿಲ್ಲ. ಅವರು ಶುದ್ಧವಾಗಿ ತುಳು ಮಾತನಾಡುತ್ತಾರೆ. ಅಲ್ಲಿನ ಸಂಸ್ಕೃತಿಗಳನ್ನು ಶಿಲ್ಪಾ ಫಾಲೋ ಮಾಡುತ್ತಾರೆ. ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅವರ ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಬೆನ್ನಲ್ಲೇ ಅವರು ದೈವದ ಮೊರೆ ಹೋಗಿದ್ದಾರೆ.

ಇತ್ತೀಚೆಗೆ ಶೀಲ್ಪಾ ಶೆಟ್ಟಿ ಮಂಗಳೂರಿಗೆ ಆಗಮಿಸಿದ್ದಾರೆ. ತಾಯಿ ಹಾಗೂ ಮಕ್ಕಳ ಜೊತೆ ಅವರು ದೈವ ಕೋಲ ವೀಕ್ಷಿಸಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಜೊತೆಗೆ ಆ ಸಂದರ್ಭದ ಅನುಭವ ಹೇಗಿತ್ತು ಎಂದು ಅವರು ವಿವರಿಸಿದ್ದಾರೆ.

‘ತುಳುನಾಡಿನ ಹೆಣ್ಣು. ನನ್ನ ಮೂಲಕ್ಕೆ ಮರಳಿದ್ದೇನೆ. ನನ್ನ ಮಕ್ಕಳಿಗೆ ನನ್ನ ಸಂಸ್ಕೃತಿಯನ್ನು ಪರಿಚಯಿಸುತ್ತಿದ್ದೇನೆ. ಮಂಗಳೂರಿನಲ್ಲಿ ನಾಗಮಂಡಲ ಹಾಗೂ ಕೊಡಮಣಿತ್ತಾಯ ದೈವ ಕೋಲವನ್ನು ವೀಕ್ಷಿಸಿದೆ. ಇದನ್ನು ನೋಡಿ ನನ್ನ ಮಕ್ಕಳು ವಿಸ್ಮಯಗೊಂಡರು. ಭಕ್ತಿಯಿಂದ ಅನುಸರಿಸುವ ಶಕ್ತಿ ಮತ್ತು ನಂಬಿಕೆಯನ್ನು ಯಾವಾಗಲೂ ನನ್ನನ್ನು ಆಕರ್ಷಿಸುತ್ತದೆ’ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.

ಶಿಲ್ಪಾ ಪೋಸ್ಟ್ ಮಾಡಿದ ವಿಡಿಯೋ

ದೈವ ಕೋಲ ಆಚರಣೆ ತುಳುನಾಡಿನ ಸಂಸ್ಕೃತಿಗಳಲ್ಲಿ ಒಂದು. ‘ಕಾಂತಾರ’ ಸಿನಿಮಾದಲ್ಲಿ ಈ ಬಗ್ಗೆ ಇತ್ತು. ಹೀಗಾಗಿ, ಶಿಲ್ಪಾ ಶೆಟ್ಟಿಯನ್ನು ಫಾಲೋ ಮಾಡುವ ಅನೇಕರಿಗೆ ‘ದೈವ ಕೋಲ’ದ ವಿಚಾರ ಅರ್ಥವಾಗಿದೆ. ಮಕ್ಕಳಿಗೂ ತಮ್ಮ ಸಂಸ್ಕೃತಿ ಬಗ್ಗೆ ಮಾಹಿತಿ ನೀಡುತ್ತಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ:  ಶಿಲ್ಪಾ ಶೆಟ್ಟಿ, ರಾಜ್​ ಕುಂದ್ರಾಗೆ ಜಾರಿ ನಿರ್ದೇಶನಾಲಯ ಶಾಕ್; 98 ಕೋಟಿ ರೂಪಾಯಿ ಆಸ್ತಿ ಸೀಜ್

ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾಗೆ ಇತ್ತೀಚೆಗೆ ಸಂಕಷ್ಟ ಎದುರಾಗಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು 90 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದರು. ಇದರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ ಮುಂಬೈ ಮನೆ ಕೂಡ ಇತ್ತು. ಇದಾದ ಬಳಿಕ ಅವರು ದೈವ ಕೋಲ ನೋಡಲು ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Mon, 29 April 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್