AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು
TV9 Web
| Edited By: |

Updated on:Sep 27, 2021 | 2:33 PM

Share

ಭಾನುವಾರ (ಸೆಪ್ಟೆಂಬರ್​ 26) ವಿಶ್ವ ಮಗಳ ದಿನಾಚರಣೆ. ಈ ದಿನದಂದು ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಮಗಳಿಗೆ ಶುಭಾಶಯ ಕೋರುವ ಕೆಲಸ ಮಾಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ಮಗಳು ಸಮಿಶಾ ಶೆಟ್ಟಿ ಕುಂದ್ರಾ ವಿಶೇಷ ವಿಡಿಯೋ ಪೋಸ್ಟ್​ ಮಾಡಿರುವ ಅವರು ಒಂದು ಪ್ರಾಮಿಸ್​ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ. ರಾಜ್​ ಕುಂದ್ರಾ ಜೈಲಿಗೆ ತೆರಳಿದ ನಂತರವೂ ಶಿಲ್ಪಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿಯೇ ಇದ್ದರು. ಅಭಿಮಾನಿಗಳಿಂದ ಬರುತ್ತಿದ್ದ ಕೆಲ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಮಗಳ ದಿನಾಚರಣೆಯಂದು ವಿಶೇಷ ಪೋಸ್ಟ್​ ಒಂದನ್ನು ಮಾಡಿದ್ದಾರೆ.

‘ಸಮಿಶಾ ನನ್ನನ್ನು ನೀನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ. ನಮ್ಮಿಬ್ಬರ ನಡುವೆ ಇರುವುದು ಅಮ್ಮ-ಮಗಳ ಸಂಬಂಧ. ಆದರೆ, ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ. ಇದು ನನ್ನ ಪ್ರಾಮಿಸ್. ಲವ್​ ಯು ಮೈ ಬೇಬಿ’ ಎಂದು ಶಿಲ್ಪಾ ಶೆಟ್ಟಿ ಕ್ಯಾಪ್ಶನ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಶಿಲ್ಪಾ ಶೆಟ್ಟಿ ಅವರು ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತ ಆಗುವಂತಹ ಕೆಲವು ಸಾಲುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ನಿಮ್ಮನ್ನು ಕೆಳಗೆ ಬೀಳಿಸುವಂತಹ ಪರಿಸ್ಥಿತಿ ಸದಾ ಎದುರಾಗುತ್ತದೆ. ಇಂಥ ಸಂದರ್ಭದಲ್ಲಿ 7 ಸಲ ಬಿದ್ದರೂ ಕೂಡ, 8ನೇ ಸಲ ಎದ್ದು ನಿಲ್ಲುವಷ್ಟು ಶಕ್ತಿಯನ್ನು ತಂದುಕೊಳ್ಳಿ. ಕಷ್ಟದ ಪರಿಸ್ಥಿತಿಯಲ್ಲಿ ಎದ್ದು ನಿಲ್ಲಲು ಹೆಚ್ಚು ಬಲ, ಇಚ್ಛಾಶಕ್ತಿ ಮತ್ತು ಧೈರ್ಯ ಬೇಕು’ ಎಂದು ಶಿಲ್ಪಾ ಶೆಟ್ಟಿ ಇತ್ತೀಚೆಗೆ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾ ಜಗತ್ತಿನಿಂದ ಹೊರಬನ್ನಿ, ನಿಮಗೆ ಜನ ನಮಸ್ಕಾರ ಮಾಡ್ತಾರೆ’; ಶಿಲ್ಪಾ ಶೆಟ್ಟಿಗೆ ಕುಟುಕಿದ ಶೆರ್ಲಿನ್​ ಚೋಪ್ರಾ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

Published On - 1:59 pm, Mon, 27 September 21

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು