AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು
TV9 Web
| Edited By: |

Updated on:Sep 27, 2021 | 2:33 PM

Share

ಭಾನುವಾರ (ಸೆಪ್ಟೆಂಬರ್​ 26) ವಿಶ್ವ ಮಗಳ ದಿನಾಚರಣೆ. ಈ ದಿನದಂದು ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಮಗಳಿಗೆ ಶುಭಾಶಯ ಕೋರುವ ಕೆಲಸ ಮಾಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ಮಗಳು ಸಮಿಶಾ ಶೆಟ್ಟಿ ಕುಂದ್ರಾ ವಿಶೇಷ ವಿಡಿಯೋ ಪೋಸ್ಟ್​ ಮಾಡಿರುವ ಅವರು ಒಂದು ಪ್ರಾಮಿಸ್​ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ. ರಾಜ್​ ಕುಂದ್ರಾ ಜೈಲಿಗೆ ತೆರಳಿದ ನಂತರವೂ ಶಿಲ್ಪಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿಯೇ ಇದ್ದರು. ಅಭಿಮಾನಿಗಳಿಂದ ಬರುತ್ತಿದ್ದ ಕೆಲ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಮಗಳ ದಿನಾಚರಣೆಯಂದು ವಿಶೇಷ ಪೋಸ್ಟ್​ ಒಂದನ್ನು ಮಾಡಿದ್ದಾರೆ.

‘ಸಮಿಶಾ ನನ್ನನ್ನು ನೀನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ. ನಮ್ಮಿಬ್ಬರ ನಡುವೆ ಇರುವುದು ಅಮ್ಮ-ಮಗಳ ಸಂಬಂಧ. ಆದರೆ, ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ. ಇದು ನನ್ನ ಪ್ರಾಮಿಸ್. ಲವ್​ ಯು ಮೈ ಬೇಬಿ’ ಎಂದು ಶಿಲ್ಪಾ ಶೆಟ್ಟಿ ಕ್ಯಾಪ್ಶನ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಶಿಲ್ಪಾ ಶೆಟ್ಟಿ ಅವರು ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತ ಆಗುವಂತಹ ಕೆಲವು ಸಾಲುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ನಿಮ್ಮನ್ನು ಕೆಳಗೆ ಬೀಳಿಸುವಂತಹ ಪರಿಸ್ಥಿತಿ ಸದಾ ಎದುರಾಗುತ್ತದೆ. ಇಂಥ ಸಂದರ್ಭದಲ್ಲಿ 7 ಸಲ ಬಿದ್ದರೂ ಕೂಡ, 8ನೇ ಸಲ ಎದ್ದು ನಿಲ್ಲುವಷ್ಟು ಶಕ್ತಿಯನ್ನು ತಂದುಕೊಳ್ಳಿ. ಕಷ್ಟದ ಪರಿಸ್ಥಿತಿಯಲ್ಲಿ ಎದ್ದು ನಿಲ್ಲಲು ಹೆಚ್ಚು ಬಲ, ಇಚ್ಛಾಶಕ್ತಿ ಮತ್ತು ಧೈರ್ಯ ಬೇಕು’ ಎಂದು ಶಿಲ್ಪಾ ಶೆಟ್ಟಿ ಇತ್ತೀಚೆಗೆ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾ ಜಗತ್ತಿನಿಂದ ಹೊರಬನ್ನಿ, ನಿಮಗೆ ಜನ ನಮಸ್ಕಾರ ಮಾಡ್ತಾರೆ’; ಶಿಲ್ಪಾ ಶೆಟ್ಟಿಗೆ ಕುಟುಕಿದ ಶೆರ್ಲಿನ್​ ಚೋಪ್ರಾ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

Published On - 1:59 pm, Mon, 27 September 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು