AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 27, 2021 | 2:33 PM

Share

ಭಾನುವಾರ (ಸೆಪ್ಟೆಂಬರ್​ 26) ವಿಶ್ವ ಮಗಳ ದಿನಾಚರಣೆ. ಈ ದಿನದಂದು ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಮಗಳಿಗೆ ಶುಭಾಶಯ ಕೋರುವ ಕೆಲಸ ಮಾಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ಮಗಳು ಸಮಿಶಾ ಶೆಟ್ಟಿ ಕುಂದ್ರಾ ವಿಶೇಷ ವಿಡಿಯೋ ಪೋಸ್ಟ್​ ಮಾಡಿರುವ ಅವರು ಒಂದು ಪ್ರಾಮಿಸ್​ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ. ರಾಜ್​ ಕುಂದ್ರಾ ಜೈಲಿಗೆ ತೆರಳಿದ ನಂತರವೂ ಶಿಲ್ಪಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿಯೇ ಇದ್ದರು. ಅಭಿಮಾನಿಗಳಿಂದ ಬರುತ್ತಿದ್ದ ಕೆಲ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಮಗಳ ದಿನಾಚರಣೆಯಂದು ವಿಶೇಷ ಪೋಸ್ಟ್​ ಒಂದನ್ನು ಮಾಡಿದ್ದಾರೆ.

‘ಸಮಿಶಾ ನನ್ನನ್ನು ನೀನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ. ನಮ್ಮಿಬ್ಬರ ನಡುವೆ ಇರುವುದು ಅಮ್ಮ-ಮಗಳ ಸಂಬಂಧ. ಆದರೆ, ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ. ಇದು ನನ್ನ ಪ್ರಾಮಿಸ್. ಲವ್​ ಯು ಮೈ ಬೇಬಿ’ ಎಂದು ಶಿಲ್ಪಾ ಶೆಟ್ಟಿ ಕ್ಯಾಪ್ಶನ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಶಿಲ್ಪಾ ಶೆಟ್ಟಿ ಅವರು ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತ ಆಗುವಂತಹ ಕೆಲವು ಸಾಲುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ನಿಮ್ಮನ್ನು ಕೆಳಗೆ ಬೀಳಿಸುವಂತಹ ಪರಿಸ್ಥಿತಿ ಸದಾ ಎದುರಾಗುತ್ತದೆ. ಇಂಥ ಸಂದರ್ಭದಲ್ಲಿ 7 ಸಲ ಬಿದ್ದರೂ ಕೂಡ, 8ನೇ ಸಲ ಎದ್ದು ನಿಲ್ಲುವಷ್ಟು ಶಕ್ತಿಯನ್ನು ತಂದುಕೊಳ್ಳಿ. ಕಷ್ಟದ ಪರಿಸ್ಥಿತಿಯಲ್ಲಿ ಎದ್ದು ನಿಲ್ಲಲು ಹೆಚ್ಚು ಬಲ, ಇಚ್ಛಾಶಕ್ತಿ ಮತ್ತು ಧೈರ್ಯ ಬೇಕು’ ಎಂದು ಶಿಲ್ಪಾ ಶೆಟ್ಟಿ ಇತ್ತೀಚೆಗೆ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾ ಜಗತ್ತಿನಿಂದ ಹೊರಬನ್ನಿ, ನಿಮಗೆ ಜನ ನಮಸ್ಕಾರ ಮಾಡ್ತಾರೆ’; ಶಿಲ್ಪಾ ಶೆಟ್ಟಿಗೆ ಕುಟುಕಿದ ಶೆರ್ಲಿನ್​ ಚೋಪ್ರಾ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

Published On - 1:59 pm, Mon, 27 September 21

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್