AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ.

‘ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ’; ಇದು ಶಿಲ್ಪಾ ಶೆಟ್ಟಿಯ ಮಾತು
TV9 Web
| Edited By: |

Updated on:Sep 27, 2021 | 2:33 PM

Share

ಭಾನುವಾರ (ಸೆಪ್ಟೆಂಬರ್​ 26) ವಿಶ್ವ ಮಗಳ ದಿನಾಚರಣೆ. ಈ ದಿನದಂದು ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಎಲ್ಲರೂ ಮಗಳಿಗೆ ಶುಭಾಶಯ ಕೋರುವ ಕೆಲಸ ಮಾಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ಮಗಳು ಸಮಿಶಾ ಶೆಟ್ಟಿ ಕುಂದ್ರಾ ವಿಶೇಷ ವಿಡಿಯೋ ಪೋಸ್ಟ್​ ಮಾಡಿರುವ ಅವರು ಒಂದು ಪ್ರಾಮಿಸ್​ ಮಾಡಿದ್ದಾರೆ.

ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಎದುರಾಗಿದ್ದ ಸಂಕಷ್ಟ ತಾತ್ಕಾಲಿಕವಾಗಿ ದೂರವಾಗಿದೆ. ಪತಿ ರಾಜ್​ ಕುಂದ್ರಾ ಎರಡು ತಿಂಗಳು ಜೈಲು ವಾಸ ಮುಗಿಸಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಈ ಬಗ್ಗೆ ಶಿಲ್ಪಾ ಶೆಟ್ಟಿ ನೇರವಾಗಿ ಏನನ್ನೂ ಮಾತನಾಡಿಲ್ಲ. ರಾಜ್​ ಕುಂದ್ರಾ ಜೈಲಿಗೆ ತೆರಳಿದ ನಂತರವೂ ಶಿಲ್ಪಾ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿಯೇ ಇದ್ದರು. ಅಭಿಮಾನಿಗಳಿಂದ ಬರುತ್ತಿದ್ದ ಕೆಲ ನೆಗೆಟಿವ್​ ಕಮೆಂಟ್​ಗಳ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಮಗಳ ದಿನಾಚರಣೆಯಂದು ವಿಶೇಷ ಪೋಸ್ಟ್​ ಒಂದನ್ನು ಮಾಡಿದ್ದಾರೆ.

‘ಸಮಿಶಾ ನನ್ನನ್ನು ನೀನು ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ. ನಮ್ಮಿಬ್ಬರ ನಡುವೆ ಇರುವುದು ಅಮ್ಮ-ಮಗಳ ಸಂಬಂಧ. ಆದರೆ, ಹೃದಯದಿಂದ ನಾವು ಯಾವಾಗಲೂ ಉತ್ತಮ ಗೆಳೆಯರಾಗಿರುತ್ತೇವೆ. ಇದು ನನ್ನ ಪ್ರಾಮಿಸ್. ಲವ್​ ಯು ಮೈ ಬೇಬಿ’ ಎಂದು ಶಿಲ್ಪಾ ಶೆಟ್ಟಿ ಕ್ಯಾಪ್ಶನ್​ ನೀಡಿದ್ದಾರೆ.

ಪತಿ ರಾಜ್​ ಕುಂದ್ರಾ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಶಿಲ್ಪಾ ಶೆಟ್ಟಿ ಅವರು ಪ್ರಸ್ತುತ ಸನ್ನಿವೇಶಕ್ಕೆ ಸೂಕ್ತ ಆಗುವಂತಹ ಕೆಲವು ಸಾಲುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ‘ನಿಮ್ಮನ್ನು ಕೆಳಗೆ ಬೀಳಿಸುವಂತಹ ಪರಿಸ್ಥಿತಿ ಸದಾ ಎದುರಾಗುತ್ತದೆ. ಇಂಥ ಸಂದರ್ಭದಲ್ಲಿ 7 ಸಲ ಬಿದ್ದರೂ ಕೂಡ, 8ನೇ ಸಲ ಎದ್ದು ನಿಲ್ಲುವಷ್ಟು ಶಕ್ತಿಯನ್ನು ತಂದುಕೊಳ್ಳಿ. ಕಷ್ಟದ ಪರಿಸ್ಥಿತಿಯಲ್ಲಿ ಎದ್ದು ನಿಲ್ಲಲು ಹೆಚ್ಚು ಬಲ, ಇಚ್ಛಾಶಕ್ತಿ ಮತ್ತು ಧೈರ್ಯ ಬೇಕು’ ಎಂದು ಶಿಲ್ಪಾ ಶೆಟ್ಟಿ ಇತ್ತೀಚೆಗೆ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: ‘ಅಶ್ಲೀಲ ಸಿನಿಮಾ ಜಗತ್ತಿನಿಂದ ಹೊರಬನ್ನಿ, ನಿಮಗೆ ಜನ ನಮಸ್ಕಾರ ಮಾಡ್ತಾರೆ’; ಶಿಲ್ಪಾ ಶೆಟ್ಟಿಗೆ ಕುಟುಕಿದ ಶೆರ್ಲಿನ್​ ಚೋಪ್ರಾ

ಒಂದೇ ಒಂದು ಫೋಟೋದಿಂದ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಪ್ರೇಮ್​​ ಕಹಾನಿ ಬಯಲು; ಇಬ್ಬರ ಕಥೆ ಮುಂದೇನು?

Published On - 1:59 pm, Mon, 27 September 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ