AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚಿಸಲು ಸುಳ್ಳು ಲೆಕ್ಕ ನೀಡಿದ ಸೋನಂ ಕಪೂರ್​ ಪತಿ ಆನಂದ್​ ಅಹುಜಾ; ಬಹಿರಂಗವಾಗಿ ಮಾನ ಹರಾಜು

ಇತ್ತೀಚೆಗೆ ಸೋನಂ ಕಪೂರ್​ ಅವರು ಹಿಜಾಬ್​ ಕುರಿತಾಗಿ ವಿವಾದ ಮಾಡಿಕೊಂಡಿದ್ದರು. ಈಗ ಅವರ ಪತಿ ಆನಂದ್​ ಅಹುಜಾ ತೆರಿಗೆ ವಂಚನೆ ಆರೋಪ ಎದುರಿಸುವಂತಾಗಿದೆ.

ತೆರಿಗೆ ವಂಚಿಸಲು ಸುಳ್ಳು ಲೆಕ್ಕ ನೀಡಿದ ಸೋನಂ ಕಪೂರ್​ ಪತಿ ಆನಂದ್​ ಅಹುಜಾ; ಬಹಿರಂಗವಾಗಿ ಮಾನ ಹರಾಜು
ಸೋನಮ್​ ಕಪೂರ್​, ಆನಂದ್​ ಅಹುಜಾ
TV9 Web
| Edited By: |

Updated on: Feb 13, 2022 | 3:34 PM

Share

ಸೆಲೆಬ್ರಿಟಿಗಳು ಒಂದಿಲ್ಲೊಂದು ವಿವಾದದಲ್ಲಿ ಸಿಕ್ಕಿಹಾಕಿಕೊಳ್ಳುತ್ತಲೇ ಇರುತ್ತಾರೆ. ನಟಿ ಸೋನಂ ಕಪೂರ್ (Sonam Kapoor) ಅವರು ಇತ್ತೀಚೆಗೆ ಹಿಜಾಬ್​ ವಿಚಾರದಲ್ಲಿ ತಲೆ ಹಾಕುವ ಮೂಲಕ ಅನೇಕರ ಆಕ್ರೋಶಕ್ಕೆ ಕಾರಣ ಆಗಿದ್ದರು. ಈಗ ಅವರ ಪತಿ ಆನಂದ್​ ಅಹುಜಾ ಅವರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಉದ್ಯಮಿ ಆಗಿರುವ ಆನಂದ್​ ಅಹುಜಾ (Anand Ahuja) ಅವರು ಖಾಸಗಿ ಕಂಪನಿಯೊಂದನ್ನು ಎದುರುಹಾಕಿಕೊಂಡಿದ್ದಾರೆ. ಆ ಕಂಪನಿಯ ಸೇವೆಯಲ್ಲಿ ಕೊಂಚ ವ್ಯತ್ಯಯ ಆಗಿತ್ತು. ಅದನ್ನೇ ನೆಪವಾಗಿ ಇಟ್ಟುಕೊಂಡು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಎಗರಾಡಿದ್ದರು. ಈ ವಿಚಾರದಲ್ಲಿ ಸೋನಂ ಕಪೂರ್​ ಕೂಡ ಎಂಟ್ರಿ ನೀಡಿ, ಆ ಕಂಪನಿಯನ್ನು ಮನಬಂದಂತೆ ಟೀಕಿಸಿದ್ದರು. ಆದರೆ ಈ ಘಟನೆಯ ಕ್ಲೈಮ್ಯಾಕ್ಸ್​ನಲ್ಲಿ ಎಲ್ಲವೂ ಉಲ್ಟಾಪಲ್ಟಾ ಆಗಿಬಿಟ್ಟಿದೆ. ಆನಂದ್​ ಅಹುಜಾ ಅವರ ತಪ್ಪನ್ನು ಕಂಡು ಹಿಡಿಯುವ ಮೂಲಕ ಸಾರ್ವಜನಿಕವಾಗಿ ಅವರ ಮಾನವನ್ನು ಹರಾಜು ಹಾಕಲಾಗಿದೆ. ತೆರಿಗೆ ವಂಚಿಸಲು (Tax Evasion) ಆನಂದ್​ ಅಹುಜಾ ಮಾಡಿದ ಹುನ್ನಾರ ಏನು ಎಂಬುದನ್ನು ಆ ಕಂಪನಿ ಬಹಿರಂಗಪಡಿಸಿದೆ. ಇದು ಸೋನಂ ಕಪೂರ್​ಗೆ ಮುಜುಗರ ತರುವಂತಹ ಸಂಗತಿ ಆಗಿದೆ. ಈ ಕುರಿತಂತೆ ಅಭಿಮಾನಿಗಳ ವಲಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಆನಂದ್​ ಅವರು ವಿದೇಶದಿಂದ ಕೆಲವು ವಸ್ತುಗಳನ್ನು ತರಿಸಬೇಕಿತ್ತು. ಅದು ಸೂಕ್ತ ಸಮಯದಲ್ಲಿ ತಲುಪಿಲ್ಲ. ಆ ಕಾರಣಕ್ಕಾಗಿ ಅವರು ಖಾಸಗಿ ಶಿಪ್ಪಿಂಗ್​ ಕಂಪನಿಯನ್ನು ತರಾಟೆಗೆ ತೆಗೆದುಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಆ ಕಂಪನಿ ಕುರಿತು ಖಾರದ ಮಾತುಗಳಲ್ಲಿ ಪೋಸ್ಟ್​ ಮಾಡಿದ್ದರು. ದಯವಿಟ್ಟು ಇಮೇಲ್​ ಅಥವಾ ಕಸ್ಟಮರ್​ ಕೇರ್​ ನಂಬರ್​ ಮೂಲಕ ಸಂಪರ್ಕಿಸಿ ಎಂದು ಕಂಪನಿಯವರು ಮನವಿ ಮಾಡಿಕೊಂಡರು. ಹಾಗಿದ್ದರೂ ಕೂಡ ಸೋನಂ ಮತ್ತು ಆನಂದ್​ ಅಹುಜಾ ಉದ್ಧಟತನ ಮುಂದುವರಿಸಿದರು. ಆ ಕುರಿತಂತೆ ಕೆಲವು ಪತ್ರಿಕೆಗಳಲ್ಲಿ ವರದಿ ಕೂಡ ಪ್ರಕಟ ಆಯಿತು.

ಪರಿಸ್ಥಿತಿ ಇಷ್ಟೆಲ್ಲ ಕೈ ಮೀರಿದ ಮೇಲೆ ಆ ಶಿಪ್ಪಿಂಗ್ ಕಂಪನಿಯವರು ಸೂಕ್ತವಾಗಿ ಪರಿಶೀಲನೆ ನಡೆಸಿದ್ದಾರೆ. ಅಂತಿಮವಾಗಿ ಆನಂದ್​ ಅಹುಜಾ ಅವರ ಸರಕುಗಳನ್ನು ಸರಿಯಾದ ಸಮಯಕ್ಕೆ ಯಾಕೆ ತಲುಪಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ತೆರಿಗೆ ವಂಚಿಸುವ ಸಲುವಾಗಿ ಆನಂದ್​ ಅಹುಜಾ ಅವರು ತಪ್ಪು ಲೆಕ್ಕ ನೀಡಿದ್ದಾರೆ. ಅದೇ ಕಾರಣದಿಂದ ಇಷ್ಟೆಲ್ಲ ವಿಳಂಬ ಆಗಿದೆ ಎಂಬುದನ್ನು ಆ ಕಂಪನಿಯವರು ಜಗಜ್ಜಾಹೀರು ಮಾಡಿದ್ದಾರೆ. ಒಟ್ಟಾರೆ ಈ ಪ್ರಕರಣದಿಂದ ಸೋನಂ ಕಪೂರ್​ ಮತ್ತು ಆನಂದ್​ ಅಹುಜಾ ಅವರಿಗೆ ಮುಖಭಂಗ ಆದಂತಾಗಿದೆ.

ಇತ್ತೀಚೆಗೆ ಸೋನಂ ಕಪೂರ್​ ಅವರು ಹಿಜಾಬ್​ ಕುರಿತಾಗಿ ವಿವಾದ ಮಾಡಿಕೊಂಡಿದ್ದರು. ಸಿಖ್​ ಧರ್ಮದವರು ಪೇಟ ಧರಿಸುವುದು ಸಂಪ್ರದಾಯ. ‘ಇದಕ್ಕೆ ಅವಕಾಶ ಇದೆ ಎಂದಾದರೆ, ಹಿಜಾಬ್​ ಧರಿಸಲು ಯಾಕೆ ಅವಕಾಶ ಇಲ್ಲ’ ಎಂಬ ಅರ್ಥದಲ್ಲಿ ಸೋನಮ್​ ಕಪೂರ್​ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಿಖ್​ ಧರ್ಮದವರಿಂದ ಕಟು ಟೀಕೆ ಕೇಳಿಬಂದಿದೆ. ಈ ಎರಡರ ನಡುವೆ ಹೋಲಿಕೆ ಸರಿಯಲ್ಲ ಎಂದು ಅನೇಕರು ಗುಡುಗಿದ್ದಾರೆ.

ಇದನ್ನೂ ಓದಿ:

‘ನನಗೆ ಈ ಟಾಯ್ಲೆಟ್​ನ ಗೀಳು ಹತ್ತಿದೆ ಎಂದ ಸೋನಮ್​ ಕಪೂರ್’​; ವಿಡಿಯೋ ವೈರಲ್

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ