AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚಿಸಲು ಸುಳ್ಳು ಲೆಕ್ಕ ನೀಡಿದ ಸೋನಂ ಕಪೂರ್​ ಪತಿ ಆನಂದ್​ ಅಹುಜಾ; ಬಹಿರಂಗವಾಗಿ ಮಾನ ಹರಾಜು

ಇತ್ತೀಚೆಗೆ ಸೋನಂ ಕಪೂರ್​ ಅವರು ಹಿಜಾಬ್​ ಕುರಿತಾಗಿ ವಿವಾದ ಮಾಡಿಕೊಂಡಿದ್ದರು. ಈಗ ಅವರ ಪತಿ ಆನಂದ್​ ಅಹುಜಾ ತೆರಿಗೆ ವಂಚನೆ ಆರೋಪ ಎದುರಿಸುವಂತಾಗಿದೆ.

ತೆರಿಗೆ ವಂಚಿಸಲು ಸುಳ್ಳು ಲೆಕ್ಕ ನೀಡಿದ ಸೋನಂ ಕಪೂರ್​ ಪತಿ ಆನಂದ್​ ಅಹುಜಾ; ಬಹಿರಂಗವಾಗಿ ಮಾನ ಹರಾಜು
ಸೋನಮ್​ ಕಪೂರ್​, ಆನಂದ್​ ಅಹುಜಾ
Follow us
TV9 Web
| Updated By: ಮದನ್​ ಕುಮಾರ್​

Updated on: Feb 13, 2022 | 3:34 PM

ಸೆಲೆಬ್ರಿಟಿಗಳು ಒಂದಿಲ್ಲೊಂದು ವಿವಾದದಲ್ಲಿ ಸಿಕ್ಕಿಹಾಕಿಕೊಳ್ಳುತ್ತಲೇ ಇರುತ್ತಾರೆ. ನಟಿ ಸೋನಂ ಕಪೂರ್ (Sonam Kapoor) ಅವರು ಇತ್ತೀಚೆಗೆ ಹಿಜಾಬ್​ ವಿಚಾರದಲ್ಲಿ ತಲೆ ಹಾಕುವ ಮೂಲಕ ಅನೇಕರ ಆಕ್ರೋಶಕ್ಕೆ ಕಾರಣ ಆಗಿದ್ದರು. ಈಗ ಅವರ ಪತಿ ಆನಂದ್​ ಅಹುಜಾ ಅವರು ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಉದ್ಯಮಿ ಆಗಿರುವ ಆನಂದ್​ ಅಹುಜಾ (Anand Ahuja) ಅವರು ಖಾಸಗಿ ಕಂಪನಿಯೊಂದನ್ನು ಎದುರುಹಾಕಿಕೊಂಡಿದ್ದಾರೆ. ಆ ಕಂಪನಿಯ ಸೇವೆಯಲ್ಲಿ ಕೊಂಚ ವ್ಯತ್ಯಯ ಆಗಿತ್ತು. ಅದನ್ನೇ ನೆಪವಾಗಿ ಇಟ್ಟುಕೊಂಡು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಎಗರಾಡಿದ್ದರು. ಈ ವಿಚಾರದಲ್ಲಿ ಸೋನಂ ಕಪೂರ್​ ಕೂಡ ಎಂಟ್ರಿ ನೀಡಿ, ಆ ಕಂಪನಿಯನ್ನು ಮನಬಂದಂತೆ ಟೀಕಿಸಿದ್ದರು. ಆದರೆ ಈ ಘಟನೆಯ ಕ್ಲೈಮ್ಯಾಕ್ಸ್​ನಲ್ಲಿ ಎಲ್ಲವೂ ಉಲ್ಟಾಪಲ್ಟಾ ಆಗಿಬಿಟ್ಟಿದೆ. ಆನಂದ್​ ಅಹುಜಾ ಅವರ ತಪ್ಪನ್ನು ಕಂಡು ಹಿಡಿಯುವ ಮೂಲಕ ಸಾರ್ವಜನಿಕವಾಗಿ ಅವರ ಮಾನವನ್ನು ಹರಾಜು ಹಾಕಲಾಗಿದೆ. ತೆರಿಗೆ ವಂಚಿಸಲು (Tax Evasion) ಆನಂದ್​ ಅಹುಜಾ ಮಾಡಿದ ಹುನ್ನಾರ ಏನು ಎಂಬುದನ್ನು ಆ ಕಂಪನಿ ಬಹಿರಂಗಪಡಿಸಿದೆ. ಇದು ಸೋನಂ ಕಪೂರ್​ಗೆ ಮುಜುಗರ ತರುವಂತಹ ಸಂಗತಿ ಆಗಿದೆ. ಈ ಕುರಿತಂತೆ ಅಭಿಮಾನಿಗಳ ವಲಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.

ಆನಂದ್​ ಅವರು ವಿದೇಶದಿಂದ ಕೆಲವು ವಸ್ತುಗಳನ್ನು ತರಿಸಬೇಕಿತ್ತು. ಅದು ಸೂಕ್ತ ಸಮಯದಲ್ಲಿ ತಲುಪಿಲ್ಲ. ಆ ಕಾರಣಕ್ಕಾಗಿ ಅವರು ಖಾಸಗಿ ಶಿಪ್ಪಿಂಗ್​ ಕಂಪನಿಯನ್ನು ತರಾಟೆಗೆ ತೆಗೆದುಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಆ ಕಂಪನಿ ಕುರಿತು ಖಾರದ ಮಾತುಗಳಲ್ಲಿ ಪೋಸ್ಟ್​ ಮಾಡಿದ್ದರು. ದಯವಿಟ್ಟು ಇಮೇಲ್​ ಅಥವಾ ಕಸ್ಟಮರ್​ ಕೇರ್​ ನಂಬರ್​ ಮೂಲಕ ಸಂಪರ್ಕಿಸಿ ಎಂದು ಕಂಪನಿಯವರು ಮನವಿ ಮಾಡಿಕೊಂಡರು. ಹಾಗಿದ್ದರೂ ಕೂಡ ಸೋನಂ ಮತ್ತು ಆನಂದ್​ ಅಹುಜಾ ಉದ್ಧಟತನ ಮುಂದುವರಿಸಿದರು. ಆ ಕುರಿತಂತೆ ಕೆಲವು ಪತ್ರಿಕೆಗಳಲ್ಲಿ ವರದಿ ಕೂಡ ಪ್ರಕಟ ಆಯಿತು.

ಪರಿಸ್ಥಿತಿ ಇಷ್ಟೆಲ್ಲ ಕೈ ಮೀರಿದ ಮೇಲೆ ಆ ಶಿಪ್ಪಿಂಗ್ ಕಂಪನಿಯವರು ಸೂಕ್ತವಾಗಿ ಪರಿಶೀಲನೆ ನಡೆಸಿದ್ದಾರೆ. ಅಂತಿಮವಾಗಿ ಆನಂದ್​ ಅಹುಜಾ ಅವರ ಸರಕುಗಳನ್ನು ಸರಿಯಾದ ಸಮಯಕ್ಕೆ ಯಾಕೆ ತಲುಪಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ತೆರಿಗೆ ವಂಚಿಸುವ ಸಲುವಾಗಿ ಆನಂದ್​ ಅಹುಜಾ ಅವರು ತಪ್ಪು ಲೆಕ್ಕ ನೀಡಿದ್ದಾರೆ. ಅದೇ ಕಾರಣದಿಂದ ಇಷ್ಟೆಲ್ಲ ವಿಳಂಬ ಆಗಿದೆ ಎಂಬುದನ್ನು ಆ ಕಂಪನಿಯವರು ಜಗಜ್ಜಾಹೀರು ಮಾಡಿದ್ದಾರೆ. ಒಟ್ಟಾರೆ ಈ ಪ್ರಕರಣದಿಂದ ಸೋನಂ ಕಪೂರ್​ ಮತ್ತು ಆನಂದ್​ ಅಹುಜಾ ಅವರಿಗೆ ಮುಖಭಂಗ ಆದಂತಾಗಿದೆ.

ಇತ್ತೀಚೆಗೆ ಸೋನಂ ಕಪೂರ್​ ಅವರು ಹಿಜಾಬ್​ ಕುರಿತಾಗಿ ವಿವಾದ ಮಾಡಿಕೊಂಡಿದ್ದರು. ಸಿಖ್​ ಧರ್ಮದವರು ಪೇಟ ಧರಿಸುವುದು ಸಂಪ್ರದಾಯ. ‘ಇದಕ್ಕೆ ಅವಕಾಶ ಇದೆ ಎಂದಾದರೆ, ಹಿಜಾಬ್​ ಧರಿಸಲು ಯಾಕೆ ಅವಕಾಶ ಇಲ್ಲ’ ಎಂಬ ಅರ್ಥದಲ್ಲಿ ಸೋನಮ್​ ಕಪೂರ್​ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಿಖ್​ ಧರ್ಮದವರಿಂದ ಕಟು ಟೀಕೆ ಕೇಳಿಬಂದಿದೆ. ಈ ಎರಡರ ನಡುವೆ ಹೋಲಿಕೆ ಸರಿಯಲ್ಲ ಎಂದು ಅನೇಕರು ಗುಡುಗಿದ್ದಾರೆ.

ಇದನ್ನೂ ಓದಿ:

‘ನನಗೆ ಈ ಟಾಯ್ಲೆಟ್​ನ ಗೀಳು ಹತ್ತಿದೆ ಎಂದ ಸೋನಮ್​ ಕಪೂರ್’​; ವಿಡಿಯೋ ವೈರಲ್

ಹೊಸ ಸಿನಿಮಾ ಕೆಲಸ ಆರಂಭಿಸಿದ ಕಾಜೋಲ್​; ನಿರ್ದೇಶಕಿ ರೇವತಿ ಜೊತೆ ಕೈ ಜೋಡಿಸಿದ ನಟಿ

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್