ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?

ರಣವೀರ್​ ಸಿಂಗ್​ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್​ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಡಿಲೀಟ್​ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಫ್ಯಾನ್ಸ್​ ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ದೀಪಿಕಾ-ರಣವೀರ್​ ನಡುವೆ ಜಗಳ ಆಗಿರಬಹುದು ಎಂದು ಕೆಲವರು ಕಮೆಂಟ್​ ಮಾಡುತ್ತಿದ್ದಾರೆ.

ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
Follow us
|

Updated on: May 07, 2024 | 5:17 PM

ಬಾಲಿವುಡ್​ನ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ರಣವೀರ್​ ಸಿಂಗ್​ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈ ನಡುವೆ ಈ ದಂಪತಿ ನಡುವೆ ಕಿರಿಕ್ ಆಗಿರಬಹುದೇ ಎಂಬ ಅನುಮಾನ ಕಾದಿದೆ. ಅದಕ್ಕೆ ಕಾರಣ ಆಗಿರುವುದು ರಣವೀರ್​ ಸಿಂಗ್​ ಅವರ ನಡೆ. ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಇದ್ದ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಅವರು ಡಿಲೀಟ್​ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ದೀಪಿಕಾ ಪಡುಕೋಣೆ (Deepika Padukone) ಅವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಪರಸ್ಪರ ಪ್ರೀತಿಸಿ ಮದುವೆ ಆದವರು ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​. 2018ರ ನವೆಂಬರ್​ನಲ್ಲಿ ಇಟಲಿಯಲ್ಲಿ ಈ ಜೋಡಿಯ ಮದುವೆ ನಡೆದಿತ್ತು. ಬಾಲಿವುಡ್​ನಲ್ಲಿ ಇಬ್ಬರೂ ಬಹುಬೇಡಿಕೆಯ ಕಲಾವಿದರಾಗಿ ಮಿಂಚುತ್ತಿದ್ದಾರೆ. ಈಗ ಅವರು ಮಗು ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ರಣವೀರ್​ ಸಿಂಗ್​ ಅವರು ಮದುವೆಯ ಫೋಟೋಗಳನ್ನು ಡಿಲೀಟ್​ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ರಣವೀರ್​ ಸಿಂಗ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ಇನ್​ಸ್ಟಾಗ್ರಾಮ್​ ಖಾತೆಯ ಮೇಲೆ ಕಣ್ಣಾಡಿಸಿದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. 2023ರ ಜನವರಿಗಿಂತಲೂ ಹಿಂದಿನ ಫೋಟೋಗಳು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಾಣಿಸುತ್ತಿಲ್ಲ. ತಂದೆ ಆಗುತ್ತಿರುವ ಸಂದರ್ಭದಲ್ಲಿ ಅವರು ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.

ಇದನ್ನೂ ಓದಿ: ‘ರಾಕ್ಷಸ’ ಆಗ್ತಾರಾ ರಣವೀರ್​ ಸಿಂಗ್​? ‘ಹನುಮಾನ್​’ ನಿರ್ದೇಶಕನ ಜೊತೆ ಹೊಸ ಸಿನಿಮಾ

ಇನ್ನೊಂದು ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ರಣವೀರ್​ ಸಿಂಗ್ ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ದೀಪಿಕಾ ಜೊತೆಗಿನ ಬೇರೆ ಫೋಟೋಗಳು ಹಾಗೆಯೇ ಇವೆ. ಆದ್ದರಿಂದ ಅವರ ನಡುವೆ ಬಿರುಕು ಮೂಡಿದೆ ಎಂಬ ವಾದದಲ್ಲಿ ಅರ್ಥವಿಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ತಾಂತ್ರಿಕ ಕಾರಣದಿಂದ ಹಳೇ ಫೋಟೋಗಳು ಕಾಣಿಸಿದೇ ಇರಬಹುದು ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಈ ಬಗ್ಗೆ ರಣವೀರ್​ ಸಿಂಗ್​ ಪ್ರತಿಕ್ರಿಯೆ ನೀಡಲಿ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ