AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?

ರಣವೀರ್​ ಸಿಂಗ್​ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್​ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಡಿಲೀಟ್​ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಫ್ಯಾನ್ಸ್​ ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ದೀಪಿಕಾ-ರಣವೀರ್​ ನಡುವೆ ಜಗಳ ಆಗಿರಬಹುದು ಎಂದು ಕೆಲವರು ಕಮೆಂಟ್​ ಮಾಡುತ್ತಿದ್ದಾರೆ.

ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ
ಮದನ್​ ಕುಮಾರ್​
|

Updated on: May 07, 2024 | 5:17 PM

Share

ಬಾಲಿವುಡ್​ನ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ರಣವೀರ್​ ಸಿಂಗ್​ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈ ನಡುವೆ ಈ ದಂಪತಿ ನಡುವೆ ಕಿರಿಕ್ ಆಗಿರಬಹುದೇ ಎಂಬ ಅನುಮಾನ ಕಾದಿದೆ. ಅದಕ್ಕೆ ಕಾರಣ ಆಗಿರುವುದು ರಣವೀರ್​ ಸಿಂಗ್​ ಅವರ ನಡೆ. ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಇದ್ದ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಅವರು ಡಿಲೀಟ್​ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ದೀಪಿಕಾ ಪಡುಕೋಣೆ (Deepika Padukone) ಅವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಪರಸ್ಪರ ಪ್ರೀತಿಸಿ ಮದುವೆ ಆದವರು ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​. 2018ರ ನವೆಂಬರ್​ನಲ್ಲಿ ಇಟಲಿಯಲ್ಲಿ ಈ ಜೋಡಿಯ ಮದುವೆ ನಡೆದಿತ್ತು. ಬಾಲಿವುಡ್​ನಲ್ಲಿ ಇಬ್ಬರೂ ಬಹುಬೇಡಿಕೆಯ ಕಲಾವಿದರಾಗಿ ಮಿಂಚುತ್ತಿದ್ದಾರೆ. ಈಗ ಅವರು ಮಗು ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ರಣವೀರ್​ ಸಿಂಗ್​ ಅವರು ಮದುವೆಯ ಫೋಟೋಗಳನ್ನು ಡಿಲೀಟ್​ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ರಣವೀರ್​ ಸಿಂಗ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ಇನ್​ಸ್ಟಾಗ್ರಾಮ್​ ಖಾತೆಯ ಮೇಲೆ ಕಣ್ಣಾಡಿಸಿದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. 2023ರ ಜನವರಿಗಿಂತಲೂ ಹಿಂದಿನ ಫೋಟೋಗಳು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಾಣಿಸುತ್ತಿಲ್ಲ. ತಂದೆ ಆಗುತ್ತಿರುವ ಸಂದರ್ಭದಲ್ಲಿ ಅವರು ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.

ಇದನ್ನೂ ಓದಿ: ‘ರಾಕ್ಷಸ’ ಆಗ್ತಾರಾ ರಣವೀರ್​ ಸಿಂಗ್​? ‘ಹನುಮಾನ್​’ ನಿರ್ದೇಶಕನ ಜೊತೆ ಹೊಸ ಸಿನಿಮಾ

ಇನ್ನೊಂದು ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ರಣವೀರ್​ ಸಿಂಗ್ ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ದೀಪಿಕಾ ಜೊತೆಗಿನ ಬೇರೆ ಫೋಟೋಗಳು ಹಾಗೆಯೇ ಇವೆ. ಆದ್ದರಿಂದ ಅವರ ನಡುವೆ ಬಿರುಕು ಮೂಡಿದೆ ಎಂಬ ವಾದದಲ್ಲಿ ಅರ್ಥವಿಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ತಾಂತ್ರಿಕ ಕಾರಣದಿಂದ ಹಳೇ ಫೋಟೋಗಳು ಕಾಣಿಸಿದೇ ಇರಬಹುದು ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಈ ಬಗ್ಗೆ ರಣವೀರ್​ ಸಿಂಗ್​ ಪ್ರತಿಕ್ರಿಯೆ ನೀಡಲಿ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ