ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?

ರಣವೀರ್​ ಸಿಂಗ್​ ಅವರ ಇನ್​ಸ್ಟಾಗ್ರಾಮ್​ ಖಾತೆಯನ್ನು ನೋಡಿದ ಅಭಿಮಾನಿಗಳಿಗೆ ಶಾಕ್​ ಆಗಿದೆ. ದೀಪಿಕಾ ಪಡುಕೋಣೆ ಜೊತೆಗಿನ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಡಿಲೀಟ್​ ಮಾಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಫ್ಯಾನ್ಸ್​ ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ದೀಪಿಕಾ-ರಣವೀರ್​ ನಡುವೆ ಜಗಳ ಆಗಿರಬಹುದು ಎಂದು ಕೆಲವರು ಕಮೆಂಟ್​ ಮಾಡುತ್ತಿದ್ದಾರೆ.

ಮದುವೆ ಫೋಟೋ ಡಿಲೀಟ್​ ಮಾಡಿದ ರಣವೀರ್​ ಸಿಂಗ್​; ದೀಪಿಕಾ ಜತೆ ಕಿರಿಕ್​?
ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ

Updated on: May 07, 2024 | 5:17 PM

ಬಾಲಿವುಡ್​ನ ಕ್ಯೂಟ್​ ಕಪಲ್​ ಎನಿಸಿಕೊಂಡಿರುವ ರಣವೀರ್​ ಸಿಂಗ್​ (Ranveer Singh) ಮತ್ತು ದೀಪಿಕಾ ಪಡುಕೋಣೆ ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈ ನಡುವೆ ಈ ದಂಪತಿ ನಡುವೆ ಕಿರಿಕ್ ಆಗಿರಬಹುದೇ ಎಂಬ ಅನುಮಾನ ಕಾದಿದೆ. ಅದಕ್ಕೆ ಕಾರಣ ಆಗಿರುವುದು ರಣವೀರ್​ ಸಿಂಗ್​ ಅವರ ನಡೆ. ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಇದ್ದ ಮದುವೆಯ ಫೋಟೋಗಳನ್ನು ರಣವೀರ್​ ಸಿಂಗ್​ ಅವರು ಡಿಲೀಟ್​ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ದೀಪಿಕಾ ಪಡುಕೋಣೆ (Deepika Padukone) ಅವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಪರಸ್ಪರ ಪ್ರೀತಿಸಿ ಮದುವೆ ಆದವರು ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್​. 2018ರ ನವೆಂಬರ್​ನಲ್ಲಿ ಇಟಲಿಯಲ್ಲಿ ಈ ಜೋಡಿಯ ಮದುವೆ ನಡೆದಿತ್ತು. ಬಾಲಿವುಡ್​ನಲ್ಲಿ ಇಬ್ಬರೂ ಬಹುಬೇಡಿಕೆಯ ಕಲಾವಿದರಾಗಿ ಮಿಂಚುತ್ತಿದ್ದಾರೆ. ಈಗ ಅವರು ಮಗು ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಆದರೆ ರಣವೀರ್​ ಸಿಂಗ್​ ಅವರು ಮದುವೆಯ ಫೋಟೋಗಳನ್ನು ಡಿಲೀಟ್​ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಇದನ್ನೂ ಓದಿ: ಮೋದಿ ಮತ್ತು ನಿರುದ್ಯೋಗದ ಬಗ್ಗೆ ರಣವೀರ್​ ಸಿಂಗ್​ ಮಾತಾಡಿದ್ದು ನಿಜವೇ? ಇಲ್ಲಿದೆ ಅಸಲಿ ಕಥೆ

ರಣವೀರ್​ ಸಿಂಗ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅವರ ಇನ್​ಸ್ಟಾಗ್ರಾಮ್​ ಖಾತೆಯ ಮೇಲೆ ಕಣ್ಣಾಡಿಸಿದ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. 2023ರ ಜನವರಿಗಿಂತಲೂ ಹಿಂದಿನ ಫೋಟೋಗಳು ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಾಣಿಸುತ್ತಿಲ್ಲ. ತಂದೆ ಆಗುತ್ತಿರುವ ಸಂದರ್ಭದಲ್ಲಿ ಅವರು ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.

ಇದನ್ನೂ ಓದಿ: ‘ರಾಕ್ಷಸ’ ಆಗ್ತಾರಾ ರಣವೀರ್​ ಸಿಂಗ್​? ‘ಹನುಮಾನ್​’ ನಿರ್ದೇಶಕನ ಜೊತೆ ಹೊಸ ಸಿನಿಮಾ

ಇನ್ನೊಂದು ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ರಣವೀರ್​ ಸಿಂಗ್ ಅವರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ದೀಪಿಕಾ ಜೊತೆಗಿನ ಬೇರೆ ಫೋಟೋಗಳು ಹಾಗೆಯೇ ಇವೆ. ಆದ್ದರಿಂದ ಅವರ ನಡುವೆ ಬಿರುಕು ಮೂಡಿದೆ ಎಂಬ ವಾದದಲ್ಲಿ ಅರ್ಥವಿಲ್ಲ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ತಾಂತ್ರಿಕ ಕಾರಣದಿಂದ ಹಳೇ ಫೋಟೋಗಳು ಕಾಣಿಸಿದೇ ಇರಬಹುದು ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಈ ಬಗ್ಗೆ ರಣವೀರ್​ ಸಿಂಗ್​ ಪ್ರತಿಕ್ರಿಯೆ ನೀಡಲಿ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us