AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ‘ನಿಮ್ಮ ಮನೆಗೆ ಬರಬೇಕಾ’; ನಟ ಅಕ್ಷಯ್ ಕುಮಾರ್ ನೇರ ಪ್ರಶ್ನೆ

‘ಬಚ್ಚನ್ ಪಾಂಡೆ’, ‘ಸಾಮ್ರಾಟ್ ಪೃಥ್ವಿರಾಜ್, ‘ರಾಮ್ ಸೇತು’, ‘ರಕ್ಷಾ ಬಂಧನ್’, ‘ಸೆಲ್ಫಿ’, ‘ಮಿಷನ್ ರಾಣಿಗಂಜ್’, ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸೇರಿ ಅನೇಕ ಸಿನಿಮಾಗಳು ಸೋತಿವೆ. ಆದಾಗ್ಯೂ ಅಕ್ಷಯ್ ಸಿನಿಮಾ ಮಾಡೋದನ್ನು ನಿಲ್ಲಿಸಿಲ್ಲ. ಈ ಬಗ್ಗೆ ಟೀಕಿಸಿದವರಿಗೆ ಅಕ್ಷಯ್ ತಿರುಗೇಟು ಕೊಟ್ಟಿದ್ದಾರೆ.

Akshay Kumar: ‘ನಿಮ್ಮ ಮನೆಗೆ ಬರಬೇಕಾ’; ನಟ ಅಕ್ಷಯ್ ಕುಮಾರ್ ನೇರ ಪ್ರಶ್ನೆ
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on: Jul 26, 2024 | 7:31 AM

Share

ಅಕ್ಷಯ್ ಕುಮಾರ್ ಅವರ ಕೈಯಲ್ಲಿ ಈ ವರ್ಷ ಬರೋಬ್ಬರಿ 12 ಸಿನಿಮಾಗಳು ಇವೆ. ಈ ಪೈಕಿ 2 ಸಿನಿಮಾಗಳು ಈಗಾಗಲೇ ರಿಲೀಸ್ ಆಗಿವೆ. ಉಳಿದ 10 ಸಿನಿಮಾಗಳ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರು ನಿತ್ಯ 8 ಗಂಟೆ ಮಾತ್ರ ಕೆಲಸ ಮಾಡೋದು. ಉಳಿದ ಸಮಯವನ್ನು ಅವರು ಕುಟುಂಬಕ್ಕೆ ಹಾಗೂ ವೈಯಕ್ತಿಕವಾಗಿ ನೀಡಲು ಬಯಸುತ್ತಾರೆ. ಅಕ್ಷಯ್ ಕುಮಾರ್ ಅವರು ಈ ರೀತಿ ಸಾಲು ಸಾಲು ಸಿನಿಮಾ ಒಪ್ಪಿಕೊಳ್ಳುತ್ತಿರುವುದೇ ಸೋಲಿಗೆ ಕಾರಣ ಎಂದು ಅನೇಕರು ಹೇಳಿದ್ದಾರೆ. ಅದಕ್ಕೆಲ್ಲ ಅಕ್ಷಯ್ ಕುಮಾರ್ ಉತ್ತರ ನೀಡಿದ್ದಾರೆ.

ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ‘ಸಾಮ್ರಾಟ್ ಪೃಥ್ವಿರಾಜ್, ‘ರಕ್ಷಾ ಬಂಧನ್’, ‘ರಾಮ್ ಸೇತು’, ‘ಸೆಲ್ಫಿ’, ‘ಮಿಷನ್ ರಾಣಿಗಂಜ್’, ‘ಬಡೇ ಮಿಯಾ ಚೋಟೆ ಮಿಯಾ’, ‘ಸರ್ಫಿರಾ’ ಸೇರಿ ಅನೇಕ ಸಿನಿಮಾಗಳು ಸೋತಿವೆ. ಆದಾಗ್ಯೂ ಅಕ್ಷಯ್ ಸಿನಿಮಾ ಮಾಡೋದನ್ನು ನಿಲ್ಲಿಸಿಲ್ಲ. ಈ ಬಗ್ಗೆ ಟೀಕಿಸಿದವರಿಗೆ ಅಕ್ಷಯ್ ತಿರುಗೇಟು ಕೊಟ್ಟಿದ್ದಾರೆ.

‘ಅಕ್ಷಯ್ ವರ್ಷಕ್ಕೆ ನಾಲ್ಕು ಸಿನಿಮಾಗಳನ್ನು ಏಕೆ ಮಾಡುತ್ತಾರೆ, ವರ್ಷಕ್ಕೆ ಒಂದೇ ಸಿನಿಮಾ ಮಾಡಬೇಕು ಎಂದು ಕೆಲವರು ಹೇಳುತ್ತಾರೆ. ಆಯಿತು ವರ್ಷಕ್ಕೆ ಒಂದೇ ಸಿನಿಮಾ ಮಾಡುತ್ತೇನೆ, ಉಳಿದ ಸಮಯದಲ್ಲಿ ನಾನೇನು ಮಾಡಬೇಕು? ನಿಮ್ಮ ಮನೆಗೆ ಬರಬೇಕಾ? ಯಾರಿಗೆ ಕೆಲಸ ಸಿಗುತ್ತದೆಯೋ ಅವರೇ ಅದೃಷ್ಟವಂತರು. ಎಲ್ಲರೂ ನಿರುದ್ಯೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಹಾಗಾಗುತ್ತಿದೆ, ಹೀಗಾಗುತ್ತಿದೆ ಎನ್ನುತ್ತಾರೆ. ಯಾರಿಗೋ ಕೆಲಸ ಸಿಗುತ್ತಿದೆ ಎಂದರೆ ಮಾಡಲಿ ಬಿಡಿ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ವಿಧಿ ಬದಲಿಸಲು ಸಾಧ್ಯವಿಲ್ಲ’; ಸಿನಿಮಾ ಸೋಲಿನ ಬಗ್ಗೆ ಅಕ್ಷಯ್ ಕುಮಾರ್ ಬೇಸರದ ಮಾತು

ಅಕ್ಷಯ್ ಕುಮಾರ್ ಅವರು ಪ್ರತಿ ಚಿತ್ರಕ್ಕೆ ಕನಿಷ್ಠ 50 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಸೋಲುತ್ತದೆ ಎನ್ನುವ ಭಯ ಇದ್ದರೂ ನಿರ್ಮಾಪಕರು ಇಷ್ಟು ಮೊತ್ತದ ಹಣ ಕೊಡಲು ರೆಡಿ ಆಗಿರುತ್ತಾರೆ. ಉಳಿದ ಖರ್ಚುಗಳನ್ನು ಸೇರಿಸಿದರೆ ಸಿನಿಮಾದ ಖರ್ಚು 100 ಕೋಟಿ ರೂಪಾಯಿ ಆಗುತ್ತದೆ. ಆದರೆ, ಅಕ್ಷಯ್ ಸಿನಿಮಾಗಳು ಇತ್ತೀಚೆಗೆ ಗಳಿಕೆ ಮಾಡುತ್ತಿರುವುದು ಕೇವಲ 20-50 ಕೋಟಿ ರೂಪಾಯಿ ಮಾತ್ರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್