AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?
ಶ್ರದ್ಧಾ ಕಪೂರ್
ರಾಜೇಶ್ ದುಗ್ಗುಮನೆ
|

Updated on: Oct 25, 2023 | 12:53 PM

Share

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು 4 ಕೋಟಿ ರೂಪಾಯಿ ಬೆಲೆಯ ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಖರೀದಿಸಿದ್ದಾರೆ. ಈ ಕಾರಿನ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಜೊತೆಗೆ ನಟಿ ಶ್ರದ್ಧಾ ಅವರು ಈ ಕಾರನ್ನು ಡ್ರೈವ್ ಮಾಡಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಶ್ರದ್ಧಾ ಅವರು ಕಾರಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ. ಈ ಕಾರು ಖರೀದಿ ಮಾಡಿದ್ದರಿಂದ ನಟಿಯ ಖುಷಿ ಹೆಚ್ಚಾಗಿದೆ.

ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಕಾರು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಕಾರಿನ ಗರಿಷ್ಠ ವೇಗ 310 ಕಿಲೋಮೀಟರ್​ ಇದೆ. ಈ ಕಾರಿನಲ್ಲಿ ಇಬ್ಬರು ಮಾತ್ರ ಕುಳಿತುಕೊಳ್ಳಬಹುದು. 5204 ಸಿಸಿ ಇಂಜಿನ್​ನ ಇದು ಹೊಂದಿದೆ. ಈ ಕಾರು ಪ್ರತಿ ಲೀಟರ್ ಪೆಟ್ರೋಲ್​ಗೆ 7 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. 9.6 ಸೆಕೆಂಡ್​ನಲ್ಲಿ ಜೀರೋದಿಂದ 100 ಕಿಲೋಮೀಟರ್ ವೇಗ ತಲುಪಬಹುದು. ವಿ10 ಇಂಜಿನ್​ನ ಇದು ಹೊಂದಿದೆ.

ಇದನ್ನೂ ಓದಿ: ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್

ಶ್ರದ್ಧಾ ಕಪೂರ್ ಅವರು ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ. ‘ತು ಜೂಟಿ ಮೇ ಮಕ್ಕರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಈ ಚಿತ್ರ ಗೆದ್ದು ಬೀಗಿದೆ. ‘ಸ್ತ್ರೀ 2’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. 2018ರಲ್ಲಿ ರಿಲೀಸ್ ಆದ ‘ಸ್ತ್ರೀ’ ಸಿನಿಮಾದ ಸೀಕ್ವೆಲ್ ಇದಾಗಿದೆ. ಇದನ್ನು ಹೊರತುಪಡಿಸಿ ಅವರು ಮತ್ಯಾವುದೇ ಸಿನಿಮಾನ ಅವರು ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?