AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?
ಶ್ರದ್ಧಾ ಕಪೂರ್
ರಾಜೇಶ್ ದುಗ್ಗುಮನೆ
|

Updated on: Oct 25, 2023 | 12:53 PM

Share

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು 4 ಕೋಟಿ ರೂಪಾಯಿ ಬೆಲೆಯ ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಖರೀದಿಸಿದ್ದಾರೆ. ಈ ಕಾರಿನ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಜೊತೆಗೆ ನಟಿ ಶ್ರದ್ಧಾ ಅವರು ಈ ಕಾರನ್ನು ಡ್ರೈವ್ ಮಾಡಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಶ್ರದ್ಧಾ ಅವರು ಕಾರಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ. ಈ ಕಾರು ಖರೀದಿ ಮಾಡಿದ್ದರಿಂದ ನಟಿಯ ಖುಷಿ ಹೆಚ್ಚಾಗಿದೆ.

ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಕಾರು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಕಾರಿನ ಗರಿಷ್ಠ ವೇಗ 310 ಕಿಲೋಮೀಟರ್​ ಇದೆ. ಈ ಕಾರಿನಲ್ಲಿ ಇಬ್ಬರು ಮಾತ್ರ ಕುಳಿತುಕೊಳ್ಳಬಹುದು. 5204 ಸಿಸಿ ಇಂಜಿನ್​ನ ಇದು ಹೊಂದಿದೆ. ಈ ಕಾರು ಪ್ರತಿ ಲೀಟರ್ ಪೆಟ್ರೋಲ್​ಗೆ 7 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. 9.6 ಸೆಕೆಂಡ್​ನಲ್ಲಿ ಜೀರೋದಿಂದ 100 ಕಿಲೋಮೀಟರ್ ವೇಗ ತಲುಪಬಹುದು. ವಿ10 ಇಂಜಿನ್​ನ ಇದು ಹೊಂದಿದೆ.

ಇದನ್ನೂ ಓದಿ: ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್

ಶ್ರದ್ಧಾ ಕಪೂರ್ ಅವರು ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ. ‘ತು ಜೂಟಿ ಮೇ ಮಕ್ಕರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಈ ಚಿತ್ರ ಗೆದ್ದು ಬೀಗಿದೆ. ‘ಸ್ತ್ರೀ 2’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. 2018ರಲ್ಲಿ ರಿಲೀಸ್ ಆದ ‘ಸ್ತ್ರೀ’ ಸಿನಿಮಾದ ಸೀಕ್ವೆಲ್ ಇದಾಗಿದೆ. ಇದನ್ನು ಹೊರತುಪಡಿಸಿ ಅವರು ಮತ್ಯಾವುದೇ ಸಿನಿಮಾನ ಅವರು ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ