AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ.

4 ಕೋಟಿ ರೂಪಾಯಿಯ ಲ್ಯಾಂಬೊರ್ಗೀನಿ ಖರೀದಿಸಿದ ಶ್ರದ್ಧಾ ಕಪೂರ್; ಇದರ ವಿಶೇಷತೆಗಳೇನು?
ಶ್ರದ್ಧಾ ಕಪೂರ್
ರಾಜೇಶ್ ದುಗ್ಗುಮನೆ
|

Updated on: Oct 25, 2023 | 12:53 PM

Share

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ಅವರು ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ. ಅವರು 4 ಕೋಟಿ ರೂಪಾಯಿ ಬೆಲೆಯ ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಖರೀದಿಸಿದ್ದಾರೆ. ಈ ಕಾರಿನ ಫೋಟೋ ಹಾಗೂ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರ ಜೊತೆಗೆ ನಟಿ ಶ್ರದ್ಧಾ ಅವರು ಈ ಕಾರನ್ನು ಡ್ರೈವ್ ಮಾಡಿದ್ದಾರೆ. ನಟಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಶ್ರದ್ಧಾ ಅವರು ಕಾರಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ.

ಶ್ರದ್ಧಾ ಕಪೂರ್ ಗೆಳತಿ ಪೂಜಾ ಚೌಧರಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಲ್ಯಾಂಬೊರ್ಗೀನಿ ಕಾರಿನ ಎದುರು ಇವರು ಪೋಸ್ ನೀಡಿದ್ದಾರೆ. ಕಾರು ಖರೀದಿಸಿದ ಬಳಿಕ ಅವರು ಮುಂಬೈ ರಸ್ತೆಗಳಲ್ಲಿ ಸುತ್ತಾಡಿದ್ದಾರೆ. ಈ ಕಾರು ಖರೀದಿ ಮಾಡಿದ್ದರಿಂದ ನಟಿಯ ಖುಷಿ ಹೆಚ್ಚಾಗಿದೆ.

ಲ್ಯಾಂಬೊರ್ಗೀನಿ ಹುರಾಕಾನ್ ಕಾರು ಕಾರು ಸಾಕಷ್ಟು ವಿಶೇಷತೆಗಳನ್ನು ಹೊಂದಿದೆ. ಈ ಕಾರಿನ ಗರಿಷ್ಠ ವೇಗ 310 ಕಿಲೋಮೀಟರ್​ ಇದೆ. ಈ ಕಾರಿನಲ್ಲಿ ಇಬ್ಬರು ಮಾತ್ರ ಕುಳಿತುಕೊಳ್ಳಬಹುದು. 5204 ಸಿಸಿ ಇಂಜಿನ್​ನ ಇದು ಹೊಂದಿದೆ. ಈ ಕಾರು ಪ್ರತಿ ಲೀಟರ್ ಪೆಟ್ರೋಲ್​ಗೆ 7 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. 9.6 ಸೆಕೆಂಡ್​ನಲ್ಲಿ ಜೀರೋದಿಂದ 100 ಕಿಲೋಮೀಟರ್ ವೇಗ ತಲುಪಬಹುದು. ವಿ10 ಇಂಜಿನ್​ನ ಇದು ಹೊಂದಿದೆ.

ಇದನ್ನೂ ಓದಿ: ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್

ಶ್ರದ್ಧಾ ಕಪೂರ್ ಅವರು ಚಿತ್ರರಂಗದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ. ‘ತು ಜೂಟಿ ಮೇ ಮಕ್ಕರ್’ ಸಿನಿಮಾದಲ್ಲಿ ಅವರು ನಟಿಸಿದ್ದರು. ಈ ಚಿತ್ರ ಗೆದ್ದು ಬೀಗಿದೆ. ‘ಸ್ತ್ರೀ 2’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. 2018ರಲ್ಲಿ ರಿಲೀಸ್ ಆದ ‘ಸ್ತ್ರೀ’ ಸಿನಿಮಾದ ಸೀಕ್ವೆಲ್ ಇದಾಗಿದೆ. ಇದನ್ನು ಹೊರತುಪಡಿಸಿ ಅವರು ಮತ್ಯಾವುದೇ ಸಿನಿಮಾನ ಅವರು ಘೋಷಣೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ