AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಮೋದಿ ಜೊತೆ ಶ್ರದ್ಧಾ ಕಪೂರ್​ ಬ್ರೇಕಪ್​? ನಟಿಯ ಲವ್​ ಸ್ಟೋರಿಗೆ ಪೂರ್ಣವಿರಾಮ

ಬಾಲಿವುಡ್​ನ ಜನಪ್ರಿಯ ನಟಿ ಶ್ರದ್ಧಾ ಕಪೂರ್​ ಅವರು ರಾಹುಲ್​ ಮೋದಿ ಜೊತೆ ಆಪ್ತವಾಗಿದ್ದರು. ಇಬ್ಬರ ಫೋಟೋಗಳು ವೈರಲ್​ ಆಗಿದ್ದವು. ಈಗ ಈ ಜೋಡಿಯ ನಡುವೆ ವೈಮನಸ್ಸು ಉಂಟಾದಂತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರೂ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ಈ ಬಗ್ಗೆ ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

ರಾಹುಲ್​ ಮೋದಿ ಜೊತೆ ಶ್ರದ್ಧಾ ಕಪೂರ್​ ಬ್ರೇಕಪ್​? ನಟಿಯ ಲವ್​ ಸ್ಟೋರಿಗೆ ಪೂರ್ಣವಿರಾಮ
ಶ್ರದ್ಧಾ ಕಪೂರ್​, ರಾಹುಲ್​ ಮೋದಿ
Follow us
ಮದನ್​ ಕುಮಾರ್​
|

Updated on: Aug 05, 2024 | 11:00 PM

ನಟಿ ಶ್ರದ್ಧಾ ಕಪೂರ್​ ಅವರು ‘ಸ್ತ್ರೀ 2’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ವಿಚಾರಗಳಿಂದಲೂ ಶ್ರದ್ಧಾ ಕಪೂರ್​ ಅವರು ಆಗಾಗ ಸುದ್ದಿ ಆಗುತ್ತಾರೆ. ಚಿತ್ರರಂಗದಲ್ಲಿ ಸಹ-ನಿರ್ದೇಶಕನಾಗಿ ಗುರುತಿಸಿಕೊಂಡ ರಾಹುಲ್​ ಮೋದಿ ಜೊತೆ ಶ್ರದ್ಧಾ ಕಪೂರ್​ ಡೇಟಿಂಗ್​ ಮಾಡುತ್ತಿದ್ದರು. ಆ ವಿಚಾರ ಗುಟ್ಟಾಗಿ ಉಳಿದಿರಲಿಲ್ಲ. ಆದರೆ ಈಗ ಶ್ರದ್ಧಾ ಕಪೂರ್​ ಮತ್ತು ರಾಹುಲ್​ ಮೋದಿ ನಡುವೆ ಬ್ರೇಕಪ್​ ಆಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅವರಿಬ್ಬರು ಬಹಿರಂಗವಾಗಿ ಮಾತನಾಡಿಲ್ಲವಾದರೂ ಸೋಶಿಯಲ್​ ಮೀಡಿಯಾದಲ್ಲಿ ಸಾಕ್ಷಿ ಸಿಕ್ಕಿದೆ.

2023ರಲ್ಲಿ ಶ್ರದ್ಧಾ ಕಪೂರ್​ ಹಾಗೂ ರಾಹುಲ್​ ಮೋದಿ ಅವರು ಬಹಳ ಆಪ್ತವಾಗಿದ್ದರು. ತಮ್ಮಿಬ್ಬರ ಸೆಲ್ಫಿಯನ್ನು ಶ್ರದ್ಧಾ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದನ್ನು ನೋಡಿದ ಅಭಿಮಾನಿಗಳಿಗೆ ಎಲ್ಲವೂ ಖಚಿತ ಆಗಿತ್ತು. ಕೆಲವು ಸಂದರ್ಭದಲ್ಲಿ ಶ್ರದ್ಧಾ ಕಪೂರ್​ ಅವರು ರಾಹುಲ್​ ಮೋದಿ ಜೊತೆ ಕಾಣಿಸಿಕೊಂಡಿದ್ದರು. ಆದರೆ ಈಗ ಅವರ ಸಂಬಂಧದಲ್ಲಿ ಬಿರುಕು ಮೂಡಿದಂತಿದೆ.

ಸೆಲೆಬ್ರಿಟಿಗಳ ಎಲ್ಲ ಚಲನವಲನಗಳನ್ನು ಅಭಿಮಾನಿಗಳು ಸೂಕ್ಷ್ಮವಾಗಿ ಗಮನಿಸುತ್ತಾರೆ. ಶ್ರದ್ಧಾ ಕಪೂರ್​ ಅವರು ಇನ್​ಸ್ಟಾಗ್ರಾಮ್​ನಲ್ಲಿ ರಾಹುಲ್​ ಮೋದಿಯವರನ್ನು ಫಾಲೋ ಮಾಡುತ್ತಿಲ್ಲ. ಅಲ್ಲದೇ, ರಾಹುಲ್ ಮೋದಿಯ ಪ್ರೊಡಕ್ಷನ್​ ಹೌಸ್​, ಆತ್ಮೀಯರು ಹಾಗೂ ಮುದ್ದಿನ ಶ್ವಾನದ ಪೇಜ್​ಗಳನ್ನೂ ಕೂಡ ಶ್ರದ್ಧಾ ಕಪೂರ್​ ಅನ್​​ಫಾಲೋ ಮಾಡಿದ್ದಾರೆ ಎನ್ನಲಾಗಿದೆ. ಬ್ರೇಕಪ್​ ಕಾರಣದಿಂದಲೇ ಅವರು ಈ ರೀತಿ ಮಾಡಿದ್ದಾರೆ ಎಂಬುದು ನೆಟ್ಟಿಗರ ವಾದ.

ಇದನ್ನೂ ಓದಿ: ಹೊಸ ಹಾಡಿನಲ್ಲಿ ತಮನ್ನಾ ಭರ್ಜರಿ ಡ್ಯಾನ್ಸ್; ‘ಸ್ತ್ರೀ 2’ ಚಿತ್ರದಲ್ಲಿ ಐಟಂ ಸಾಂಗ್

ಸಿನಿಮಾ ಬಗ್ಗೆ ಮಾತನಾಡುವುದಾದರೆ, ಶ್ರದ್ಧಾ ಕಫೂರ್​ ಅಭಿನಯದ ‘ಸ್ತ್ರೀ 2’ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಹಾರರ್​ ಕಹಾನಿ ಇದೆ. ರಾಜ್​ಕುಮಾರ್​ ರಾವ್​, ಪಂಕಜ್​ ತ್ರಿಪಾಠಿ, ಅಭಿಷೇಕ್​ ಬ್ಯಾನರ್ಜಿ, ತಮನ್ನಾ ಭಾಟಿಯಾ ಮುಂತಾದ ಜನಪ್ರಿಯ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಟ್ರೇಲರ್​ ಮತ್ತು ಹಾಡುಗಳು ಈಗಾಗಲೇ ಕ್ರೇಜ್​ ಸೃಷ್ಟಿ ಮಾಡಿವೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದರಿಂದ ಶ್ರದ್ಧಾ ಕಪೂರ್​ ಅವರ ವೃತ್ತಿಜೀವನಕ್ಕೆ ಹೊಸ ಮೆರುಗು ಸಿಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್