AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ

ಭಾರತೀಯ ಜಾನಪದ ರಂಗಭೂಮಿಗೆ ನೀಡಿದ ಅಪ್ರತಿಮ ಕೊಡುಗೆಗಾಗಿ 1957 ಮತ್ತು 1990ರಲ್ಲಿ ರಾಷ್ಟ್ರಪತಿಗಳಿಂದ ಗೌರವಿಸಲ್ಪಟ್ಟ ವಿಠಾಬಾಯಿ ಅವರ ಜೀವನದ ರೋಮಾಂಚಕ ಕಥೆ ಈ ಚಿತ್ರದಲ್ಲಿದೆ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಶ್ರದ್ಧಾ ಕಪೂರ್ ಗಮನ ಸೆಳೆದಿದ್ದಾರೆ. ಆದರೆ ಚಿತ್ರದ ಶೀರ್ಷಿಕೆ ಈಗ ವಿವಾದದ ಕೇಂದ್ರ ಬಿಂದು ಆಗಿದೆ.

ವಿವಾದದ ಸುಳಿಯಲ್ಲಿ ಶ್ರದ್ಧಾ ಕಪೂರ್ ನಟನೆಯ ‘ಈಠಾ’ ಸಿನಿಮಾ; ಶೀರ್ಷಿಕೆಗೆ ತೀವ್ರ ವಿರೋಧ
Shraddha Kapoor
ಮದನ್​ ಕುಮಾರ್​
|

Updated on: Jun 28, 2026 | 1:20 PM

Share

ಮುಖ್ಯಾಂಶಗಳು

  • ‘ಈಠಾ’ ಹೆಸರಿನ ವಿರುದ್ಧ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಆಕ್ರೋಶ ಹೊರಹಾಕಿದೆ.
  • ಶ್ರದ್ಧಾ ಕಪೂರ್ ನಟನೆಯ ಈ ಚಿತ್ರಕ್ಕೆ ಟೀಸರ್ ಬಿಡುಗಡೆ ಬಳಿಕ ವಿವಾದ ಶುರು.
  • ಲಾವಣಿ ನೃತ್ಯಗಾರ್ತಿವಿಠಾಬಾಯಿ ನಾರಾಯಣಗಾಂವ್ಕರ್ ಜೀವನಾಧಾರಿತ ಸಿನಿಮಾ.

ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ನಟನೆಯ ಬಹುನಿರೀಕ್ಷಿತ ‘ಈಠಾ’ ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಸಿನಿಮಾ ವಿವಾದದ ಸುಳಿಗೆ ಸಿಲುಕಿದೆ. ಮಹಾರಾಷ್ಟ್ರದ ಹೆಸರಾಂತ ಲಾವಣಿ ನೃತ್ಯಗಾರ್ತಿ ಮತ್ತು ತಮಾಷಾ ಕಲಾವಿದೆ ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಜೀವನಾಧಾರಿತ ಈ ಚಿತ್ರದ ಶೀರ್ಷಿಕೆಗೆ ಈಗ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಟೀಸರ್ ಮೂಲಕ ಭಾರಿ ಕೌತುಕ ಮೂಡಿಸಿರುವ ‘ಈಠಾ’ (Eetha) ಸಿನಿಮಾದ ಟೈಟಲ್ ಬದಲಾಯಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

‘ಟಿವಿ9 ಮರಾಠಿ’ ವರದಿಯ ಪ್ರಕಾರ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಸಿನಿಮಾ ಮತ್ತು ಸಾಂಸ್ಕೃತಿಕ ವಿಭಾಗವು ‘ಈಠಾ’ ಹೆಸರಿನ ವಿರುದ್ಧ ಆಕ್ರೋಶ ಹೊರಹಾಕಿದೆ. ಈ ಶೀರ್ಷಿಕೆಯು ವಿಠಾಬಾಯಿ ಅವರ ಪರಂಪರೆಗೆ ಮತ್ತು ಸಾಧನೆಗೆ ಮಾಡುವ ಅವಮಾನ ಎಂದು ಎನ್‌ಸಿಪಿ ವಾದಿಸಿದೆ. ಚಿತ್ರಕ್ಕೆ ‘ವಿಠಾ’ ಅಥವಾ ‘ವಿಠಾಬಾಯಿ’ ಎಂದು ಹೆಸರಿಡಬೇಕಿತ್ತು ಎಂದು ಆಗ್ರಹಿಸಿದೆ.

ವಿಠಾಬಾಯಿ ನಾರಾಯಣಗಾಂವ್ಕರ್ ಅವರ ಕುಟುಂಬಸ್ಥರು ಕೂಡ ಎನ್‌ಸಿಪಿಯ ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ವಿಠಾಬಾಯಿ ಅವರ ಪುತ್ರರಾದ ಕೈಲಾಶ್ ನಾರಾಯಣಗಾಂವ್ಕರ್, ರಾಜೇಶ್ ನಾರಾಯಣಗಾಂವ್ಕರ್ ಮತ್ತು ಮೊಮ್ಮಗ ಮೋಹಿತ್ ನಾರಾಯಣಗಾಂವ್ಕರ್ ಅವರು ಚಿತ್ರದ ಶೀರ್ಷಿಕೆಯನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.

ಎನ್‌ಸಿಪಿಯ ಸಾಂಸ್ಕೃತಿಕ ವಿಭಾಗದ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷ ಬಾಬಾಸಾಹೇಬ್ ಪಾಟೀಲ್ ಮಾತನಾಡಿ, ‘ವಿಠಾಬಾಯಿ ಅವರ ಜೀವನವನ್ನು ಅತ್ಯಂತ ಗೌರವಯುತವಾಗಿ ತೆರೆಯ ಮೇಲೆ ತರುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದಿದ್ದಾರೆ. ಆದರೆ ಈ ವಿವಾದದ ಕುರಿತು ಚಿತ್ರದ ನಿರ್ದೇಶಕ ಲಕ್ಷ್ಮಣ್ ಉಟೇಕರ್ ಆಗಲಿ ಅಥವಾ ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಾಗಲಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ‘ಈಠಾ’ ಟೀಸರ್ ರಿಲೀಸ್: ಲಾವಣಿ ಕಲಾವಿದೆಯಾಗಿ ಶ್ರದ್ಧಾ ಕಪೂರ್ ನಟನೆಗೆ ಫ್ಯಾನ್ಸ್ ಫಿದಾ

ದಿನೇಶ್ ವಿಜನ್ ನಿರ್ಮಿಸಿ, ಲಕ್ಷ್ಮಣ್ ಉಟೇಕರ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಶ್ರದ್ಧಾ ಕಪೂರ್ ಜೊತೆಗೆ ರಣದೀಪ್ ಹೂಡಾ ಮತ್ತು ಮೊಹಮ್ಮದ್ ಜೀಶನ್ ಅಯೂಬ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಸ್ತ್ರೀ’ ಸರಣಿಯ ಯಶಸ್ಸಿನ ಬಳಿಕ ಶ್ರದ್ಧಾ ಮತ್ತು ದಿನೇಶ್ ವಿಜನ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಆಗಸ್ಟ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ಕೋತಿಗಳದ್ದೇ ಕಾರುಬಾರು! ವಿಡಿಯೋ ವೈರಲ್
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
‘ಸಂಜಿತ್ ಹೆಗಡೆಗಾಗಿ ಕಾಯ್ತಾ ಇದ್ದೆ’; ಕೊನೆಗೂ ಈಡೇರಿತು ವಿನಯ್ ಆಸೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
12 ರಾಶಿಗಳ ದಿನ ಭವಿಷ್ಯ ವಿವರಣೆ ಇಲ್ಲಿದೆ
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
ಲಿಫ್ಟ್​ನಲ್ಲಿ ಸಿಲುಕಿಕೊಂಡ ತಾಯಿ-ಮಗು; ಪೊಲೀಸರು ರಕ್ಷಿಸಿದ್ದು ಹೇಗೆ?
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
‘ಕಂದಮ್ಮ’ ಹಾಡಿನ ವಿಚಾರದಲ್ಲಿ ಮಗಳ ಜತೆ ದುನಿಯಾ ವಿಜಯ್ ಪ್ರೀತಿಯ ಗಲಾಟೆ
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ಶಾಸ್ತ್ರದ ಪ್ರಕಾರ ಪತ್ನಿ ಚೆನ್ನಮ್ಮನನ್ನು ಕಳಿಸಿಕೊಟ್ಟ ದೇವೇಗೌಡ್ರು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮ ಅಂತಿಮ ಸಂಸ್ಕಾರದ ಬಳಿಕ ಕುಮಾರಸ್ವಾಮಿ ಭಾವುಕ ಮಾತು