AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ಪೂಜೆಯಲ್ಲಿ ರಶ್ಮಿಕಾ ಮಂದಣ್ಣ ಕಂಡರೂ ಕಾಣದಂತೆ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್​

ರಶ್ಮಿಕಾ ಮಂದಣ್ಣ ಅವರನ್ನು ನೋಡಿ ಶ್ರದ್ಧಾ ಕಪೂರ್​ ನಡೆದುಕೊಂಡ ರೀತಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ರಶ್ಮಿಕಾ ಮಂದಣ್ಣ ಎದುರಲ್ಲೇ ಇದ್ದರೂ ಕೂಡ ಶ್ರದ್ಧಾ ಕಪೂರ್​ ಅವರು ಮುಖ ತಿರುಗಿಸಿಕೊಂಡು ಹೋಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಇವರಿಬ್ಬರ ನಡುವೆ ಕಿರಿಕ್​ ಆಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಗಣಪತಿ ಪೂಜೆಯಲ್ಲಿ ರಶ್ಮಿಕಾ ಮಂದಣ್ಣ ಕಂಡರೂ ಕಾಣದಂತೆ ಮುಖ ತಿರುಗಿಸಿಕೊಂಡು ಹೋದ ಶ್ರದ್ಧಾ ಕಪೂರ್​
ಶ್ರದ್ದಾ ಕಪೂರ್​, ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Sep 20, 2023 | 10:40 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಫೇಮಸ್​ ಆಗಿದ್ದಾರೆ. ‘ಗುಡ್​ ಬೈ’, ‘ಮಿಷನ್​ ಮಜ್ನು’ ಚಿತ್ರಗಳಿಂದ ಅವರಿಗೆ ಜನಪ್ರಿಯತೆ ಸಿಕ್ಕಿದೆ. ಈಗ ರಣಬೀರ್​ ಕಪೂರ್​ ಜೊತೆ ಅವರು ನಟಿಸಿರುವ ‘ಅನಿಮಲ್​’ ಸಿನಿಮಾ ರಿಲೀಸ್​ಗೆ ಸಜ್ಜಾಗಿದೆ. ಚಿತ್ರರಂಗದಲ್ಲಿ ನಟಿಯರ ನಡುವೆ ಜಗಳ ನಡೆಯೋದು ಕಾಮನ್​. ಈಗ ರಶ್ಮಿಕಾ ಮಂದಣ್ಣ ಮತ್ತು ಶ್ರದ್ಧಾ ಕಪೂರ್​ (Shraddha Kapoor) ನಡುವೆ ಮನಸ್ತಾಪ ಉಂಟಾಗಿರಬಹುದು ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಒಂದು ವೈರಲ್​ ವಿಡಿಯೋ (Rashmika Mandanna Viral Video). ರಶ್ಮಿಕಾ ಮತ್ತು ಶ್ರದ್ಧಾ ಕಪೂರ್ ಅವರು ಮುಖಾಮುಖಿ ಆಗಿದ್ದರೂ ಕೂಡ ಒಬ್ಬರನ್ನೊಬ್ಬರು ಮಾತನಾಡಿಸಿಲ್ಲ. ಇದನ್ನು ನೋಡಿ ಅಭಿಮಾನಿಗಳಿಗೆ ಹಲವು ಪ್ರಶ್ನೆ ಮೂಡಿದೆ.

ಮುಂಬೈನಲ್ಲಿ ಅಂಬಾನಿ ಕುಟುಂಬದವರು ಗಣಪತಿ ಪೂಜೆ ಆಯೋಜನೆ ಮಾಡಿದ್ದರು. ಮಂಗಳವಾರ ನಡೆದ ಈ ಸಮಾರಂಭದಲ್ಲಿ ಶಾರುಖ್​ ಖಾನ್​, ಸಲ್ಮಾನ್​ ಖಾನ್​, ಗೌರಿ ಖಾನ್​, ಸುಹಾನಾ ಖಾನ್​, ಆಲಿಯಾ ಭಟ್​, ರಣವೀರ್​ ಸಿಂಗ್​, ದೀಪಿಕಾ ಪಡುಕೋಣೆ ಸೇರಿದಂತೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಅವರನ್ನು ನೋಡಿ ಶ್ರದ್ಧಾ ಕಪೂರ್​ ನಡೆದುಕೊಂಡ ರೀತಿ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ರಶ್ಮಿಕಾ ಮಂದಣ್ಣ ಎದುರಲ್ಲೇ ಇದ್ದರೂ ಕೂಡ ಶ್ರದ್ಧಾ ಕಪೂರ್​ ಅವರು ಮುಖ ತಿರುಗಿಸಿಕೊಂಡು ಹೋಗಿದ್ದಾರೆ. ಇಬ್ಬರೂ ಪರಸ್ಪರ ಹಾಯ್​ ಹೇಳಿಲ್ಲ, ಸ್ಮೈಲ್​ ಕೂಡ ಮಾಡಿಲ್ಲ. ಇವರಿಬ್ಬರ ನಡುವೆ ಕಿರಿಕ್​ ಆಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ಶ್ರದ್ಧಾ ಕಪೂರ್​ ಅವರು ಬಾಲಿವುಡ್​ನಲ್ಲಿ ಯಶಸ್ವಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಅವರಿಗೆ ಸಖತ್​ ಬೇಡಿಕೆ ಇದೆ. ರಶ್ಮಿಕಾ ಮಂದಣ್ಣ ಜೊತೆ ಶ್ರದ್ಧಾ ಕಪೂರ್​ ಕಿರಿಕ್​ ಮಾಡಿಕೊಳ್ಳುವಂಥದ್ದು ಏನಾಗಿದೆಯೋ ತಿಳಿದಿಲ್ಲ. ಬೇಕಂತಲೇ ಶ್ರದ್ಧಾ ಕಪೂರ್ ಅವರು ಮುಖ ತಿರುಗಿಸಿಕೊಂಡು ಹೋಗಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಈ ಬಗ್ಗೆ ರಶ್ಮಿಕಾ ಮಂದಣ್ಣ ಅಥವಾ ಶ್ರದ್ಧಾ ಕಪೂರ್​ ಅವರೇ ಸ್ಪಷನೆ ನೀಡಿದರೆ ಎಲ್ಲ ಅನುಮಾನಗಳು ಪರಿಹಾರ ಆಗುತ್ತವೆ.

ಇದನ್ನೂ ಓದಿ: ‘ಹೋದ ಜೀವ ಬಂತು’; ಕಷ್ಟದಲ್ಲೂ ಖುಷಿಪಡುತ್ತಿದ್ದಾರೆ ರಶ್ಮಿಕಾ ಮಂದಣ್ಣ

ಕೆಲವು ನೆಟ್ಟಿಗರು ಬೇರೆಯದೇ ವಾದ ಮುಂದಿಟ್ಟಿದ್ದಾರೆ. ‘ಈ ನಟಿಯರು ಫೇಮಸ್​ ಆಗಿದ್ದರೂ ಕೂಡ ವೈಯಕ್ತಿಕವಾಗಿ ಪರಸ್ಪರ ಪರಿಚಯ ಇಲ್ಲದೇ ಇರಬಹುದು. ಆ ಕಾರಣದಿಂದಲೇ ಅವರು ಎದುರುಬದರು ಸಿಕ್ಕರೂ ಮಾತನಾಡಿಕೊಂಡಿಲ್ಲ. ಅದನ್ನೆಲ್ಲ ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’ ಎಂದು ಒಂದು ವರ್ಗದ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ಒಂದಷ್ಟು ಪ್ರಶ್ನೆಗಳನ್ನಂತೂ ಹುಟ್ಟುಹಾಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ