ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್

ಪ್ರಮುಖವಾಗಿ 17 ಬಾಲಿವುಡ್ ಸೆಲೆಬ್ರಿಟಿಗಳ ಹೆಸರು ಈ ಪ್ರಕರಣದಲ್ಲಿ ಸೇರಿಕೊಂಡಿದೆ ಎನ್ನಲಾಗಿದೆ. ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಕೆಲಸವನ್ನು ಜಾರಿ ನಿರ್ದೇಶನಾಲಯ (ಇಡಿ) ಮಾಡುತ್ತಿದೆ.  ಮುಂದಿನ ದಿನಗಳಲ್ಲಿ ಯಾರಿಗೆಲ್ಲ ನೋಟಿಸ್ ಹೋಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆನ್​ಲೈನ್ ಬೆಟ್ಟಿಂಗ್ ಕೇಸ್; ಕಪಿಲ್ ಶರ್ಮಾ, ಶ್ರದ್ಧಾ ಕಪೂರ್ ಸೇರಿ ಹಲವರಿಗೆ ನೋಟಿಸ್
ಕಪಿಲ್ ಶರ್ಮಾ-ಶ್ರದ್ಧಾ ಕಪೂರ್

Updated on: Oct 06, 2023 | 7:53 AM

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಬಾಲಿವುಡ್​ನ ಹಲವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ರಣಬೀರ್ ಕಪೂರ್ (Ranbir Kapoor) ಅವರಿಗೆ ಇತ್ತೀಚೆಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಬಾಲಿವುಡ್ ಕಾಮಿಡಿಯನ್ ಕಪಿಲ್ ಶರ್ಮಾ, ನಟಿ ಶ್ರದ್ಧಾ ಕಪೂರ್ (Shraddha Kapoor), ಹುಮಾ ಖುರೇಷಿ ಹಾಗೂ ಹೀನಾ ಖಾನ್​ಗೆ ನೋಟಿಸ್ ಜಾರಿ ಮಾಡಲಾಗಿದೆ. ಇಂದು (ಅಕ್ಟೋಬರ್ 6) ಇವರು ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ.

ಪ್ರಮುಖವಾಗಿ 17 ಬಾಲಿವುಡ್ ಸೆಲೆಬ್ರಿಟಿಗಳ ಹೆಸರು ಪ್ರಮುಖವಾಗಿ ಸೇರಿಕೊಂಡಿದೆ ಎನ್ನಲಾಗಿದೆ. ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಕೆಲಸವನ್ನು ಜಾರಿ ನಿರ್ದೇಶನಾಲಯ (ಇಡಿ) ಮಾಡುತ್ತಿದೆ.  ಮುಂದಿನ ದಿನಗಳಲ್ಲಿ ಯಾರಿಗೆಲ್ಲ ನೋಟಿಸ್ ಹೋಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮಹದೇವ್ ಆ್ಯಪ್​ನ ಪ್ರಮೋಟರ್ಸ್​ನಲ್ಲಿ ಸೌರಭ್ ಚಂದ್ರಕರ್ ಹಾಗೂ ರವಿ ಉಪ್ಪಾಲ್ ಪ್ರಮುಖರು. ಇವರು ಬೆಟ್ಟಿಂಗ್​ನಿಂದ ಬಂದ ಹಣದಲ್ಲಿ ಸೆಲೆಬ್ರಿಟಿಗಳಿಗೆ ಸಂಭಾವನೆ ನೀಡಿದ್ದಾರೆ. ಈ ಆ್ಯಪ್​ನ ಪ್ರಮೋಷನ್ ಮಾಡಲು ರಣಬೀರ್ ಕಪೂರ್ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹದೇವ್ ಬೆಟ್ಟಿಂಗ್ ಪ್ರಕರಣ: ₹417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ಯಾರಿಗೆಲ್ಲ ನೋಟಿಸ್?

ಈ ಆ್ಯಪ್​ನ 100ಕ್ಕೂ ಅಧಿಕ ಮಂದಿ ಪ್ರಮೋಷನ್ ಮಾಡಿದ್ದಾರೆ. ಇವರೆಲ್ಲರಿಗೂ ಶೀಘ್ರವೇ ನೋಟಿಸ್ ಹೋಗಲಿದೆ. ಸೌರಭ್ ಮದುವೆ ದುಬೈನಲ್ಲಿ ನಡೆದಿತ್ತು. ಇದರಲ್ಲಿ 14 ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಅವರಿಗೂ ನೋಟಿಸ್ ಹೋಗಲಿದೆ.

ಅದ್ದೂರಿ ಮದುವೆ

ಸೌರಭ್ ಮದುವೆ ದುಬೈನಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿತ್ತು. ಇದಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿತ್ತು. ಮುಂಬೈ ಮೂಲದ ಇವೆಂಟ್ ಮ್ಯಾನೇಜ್​ಮೆಂಟ್​ಗೆ ಹವಾಲ ಮೂಲಕ 140 ಕೋಟಿ ರೂಪಾಯಿ ಹಣ ತಲುಪಿಸಲಾಗಿತ್ತು. ಈ ಮದುವೆಯಲ್ಲಿ ಭಾಗಿಯಾದ ಸೆಲೆಬ್ರಿಟಿಗಳಿಗೆ ಈ ಇವೆಂಟ್ ಮ್ಯಾನೇಜ್​ಮೆಂಟ್​ನವರು ಸಂಭಾವನೆ ನೀಡಿದ್ದರು. ಸೆಲೆಬ್ರಿಟಿಗಳಿಗಾಗಿ ಹಲವು ಪ್ರೈವೇಟ್ ಜೆಟ್​ಗಳನ್ನು ಕೂಡ ಆಯೋಜನೆ ಮಾಡಲಾಗಿತ್ತು. ಈ ಮದುವೆಗೆ ಸುಮಾರು 200 ಕೋಟಿ ರೂಪಾಯಿ ಖರ್ಚಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:37 am, Fri, 6 October 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us