AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಪ್ಪಾಳೆ ಬೇಡ’: ಕೊಲ್ಕತ್ತಾನಲ್ಲಿ ಶ್ರೆಯಾ ಘೋಷಲ್ ಗಾನ ಪ್ರತಿಭಟನೆ

Shreya Ghoshal: ಖ್ಯಾತ ಗಾಯಕಿ ಶ್ರೆಯಾ ಘೋಷಲ್ ಕೊಲ್ಕತ್ತದಲ್ಲಿ ಲೈವ್ ಕಾನ್ಸರ್ಟ್ ನಡೆಸಿದರು. ಈ ವೇಳೆ ತಮ್ಮ ಹಾಡಿಗೆ ಚಪ್ಪಾಳೆ ತಟ್ಟಬೇಡಿ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದರು. ಗಾಯನ ಪ್ರತಿಭಟನೆಯನ್ನು ಸಹ ಶ್ರೆಯಾ ಘೋಷಲ್ ಮಾಡಿದರು.

‘ಚಪ್ಪಾಳೆ ಬೇಡ’: ಕೊಲ್ಕತ್ತಾನಲ್ಲಿ ಶ್ರೆಯಾ ಘೋಷಲ್ ಗಾನ ಪ್ರತಿಭಟನೆ
ಮಂಜುನಾಥ ಸಿ.
|

Updated on:Oct 22, 2024 | 4:20 PM

Share

ಶ್ರೆಯಾ ಘೋಷಲ್ ಭಾರತದ ಟಾಪ್ ಗಾಯಕಿ. ಭಾರತದ ಬಹುತೇಕ ಎಲ್ಲ ಭಾಷೆಗಳಲ್ಲಿಯೂ ಶ್ರೆಯಾ ಘೋಷಲ್ ಹಾಡಿದ್ದಾರೆ. ಅವರ ಲೈವ್ ಕಾನ್ಸರ್ಟ್​ಗಳಿಗೆ ಸಾವಿರಾರು ಮಂದಿ ಶ್ರೋತ್ರುಗಳು ಆಗಮಿಸುತ್ತಾರೆ. ಹಾಡುತ್ತಾ, ಪ್ರೇಕ್ಷಕರನ್ನು ನಗಿಸುತ್ತಾ. ನಗುತ್ತಾ ಗಾಯನ ಗೋಷ್ಠಿಗಳನ್ನು ಶ್ರೆಯಾ ಘೋಷನ್ ನಡೆಸಿಕೊಡುತ್ತಾರೆ. ಆದರೆ ಇತ್ತೀಚೆಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾನಲ್ಲಿ ಶ್ರೆಯಾ ಘೋಷಲ್ ಲೈವ್ ಕಾನ್ಸರ್ಟ್ ಆಯೋಜನೆ ಆಗಿತ್ತು. ಆದರೆ ಶೋನಲ್ಲಿ ಶ್ರೆಯಾ ತುಸು ಭಾವುಕರಾದರು. ತಮ್ಮ ಹಾಡುಗಳಿಗೆ ಚಪ್ಪಾಳೆ ತಟ್ಟುವುದು ಬೇಡವೆಂದು ಜನರಲ್ಲಿ ಮನವಿ ಮಾಡಿದರು. ಗಾಯನದ ಮೂಲಕ ಪ್ರತಿಭಟನೆಯನ್ನೂ ಸಹ ಶ್ರೆಯಾ ಘೋಷಲ್ ಮಾಡಿದರು.

ಕೆಲ ತಿಂಗಳ ಹಿಂದೆ ನಡೆದ ಆರ್​ಕೆ ಮೆಡಿಕಲ್ ಕಾಲೇಜು ಅತ್ಯಾಚಾರ, ಕೊಲೆ ಪ್ರಕರಣ ದೇಶ, ವಿದೇಶಗಳಲ್ಲಿ ಸುದ್ದಿಯಾಗತ್ತು. ಪ್ರಕರಣ ಬೆಳಕಿಗೆ ಬಂದಾಗಿನಿಂದ ಇಂದಿನ ವರೆಗೂ ಪಶ್ಚಿಮ ಬಂಗಾಳದಲ್ಲಿ ವೈದ್ಯರುಗಳು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇದೀಗ ಈ ಪ್ರತಿಭಟನೆಗೆ ಗಾಯಕಿ ಶ್ರೆಯಾ ಘೋಷಲ್ ಸಹ ಬೆಂಬಲ ನೀಡಿದ್ದಾರೆ. ಕೊಲ್ಕತ್ತದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೆಯಾ ಘೋಷಲ್ ಅವರ ಲೈವ್ ಕಾನ್ಸರ್ಟ್​ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೆಯಾ ಘೋಷಲ್, ಮೃತ ವೈದ್ಯ ವಿದ್ಯಾರ್ಥಿನಿಗಾಗಿ ಭಾವುಕ ಹಾಡೊಂದನ್ನು ಹಾಡಿದ್ದಾರೆ.

ಇದನ್ನೂ ಓದಿ:ರಂಜಿತ್ ಮನೆಯಲ್ಲಿ ಪ್ಲೇ ಆಗ್ತಿದೆ ದುಃಖದ ಹಾಡು; ವಿವರಿಸಿದ ಸುದೀಪ್

‘ಈ ಜೀ ಸೋರಿಯರ್, ಚಿತ್ಕಾರ್’ ಎಂಬ ಬೆಂಗಾಲಿ ಹಾಡನ್ನು ಶ್ರೆಯಾ ಘೋಷಲ್, ಮೃತ ವಿದ್ಯಾರ್ಥಿನಿಗಾಗಿ ಹಾಡಿದರು. ಈ ಹಾಡಿನ ಅರ್ಥ ‘ಈ ದೇಹದ ಚೀತ್ಕಾರವನ್ನು ಇಂದು ನೀನು ಕೇಳುತ್ತೀಯ’ ಎಂದು. ಹಾಡು ಹಾಡುವ ಮುಂಚೆ ಪ್ರೇಕ್ಷಕರೊಟ್ಟಿಗೆ ಮಾತನಾಡಿದ ಶ್ರೆಯಾ ಘೋಷಲ್, ಈ ಹಾಡಿಗೆ ಯಾರೂ ಸಹ ಚಪ್ಪಾಳೆ ತಟ್ಟಬೇಡಿ, ಈ ಹಾಡನ್ನು ಅರ್ಥ ಮಾಡಿಕೊಳ್ಳಿ, ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿ ಎಂದು ಮನವಿ ಮಾಡಿದರು. ಅಂತೆಯೇ ಶ್ರೆಯಾ ಘೋಷಲ್​ರ ಕಾರ್ಯಕ್ರಮದಲ್ಲಿ ‘ವೀ ವಾಂಟ್ ಜಸ್ಟಿಸ್’ (ನಮಗೆ ನ್ಯಾಯ ಬೇಕು) ಎಂಬ ಘೋಷಣೆಗಳು ಸಹ ಸತತವಾಗಿ ಕೇಳಿ ಬಂದವು. ಶ್ರೆಯಾ ಸಹ ಘೋಷಣೆಗಳನ್ನು ಬೆಂಬಲಿಸಿದರು.

ಆರ್​ಕೆ ಅತ್ಯಾಚಾರ ಪ್ರಕರಣ ಆದ ಸಮಯದಲ್ಲಿ ಶ್ರೆಯಾ ಘೋಷಲ್ ತಮ್ಮ ಲೈವ್ ಕಾನ್ಸರ್ಟ್ ಅನ್ನು ರದ್ದು ಮಾಡಿದ್ದರು. ಆಗಲೂ ಸಹ ಪ್ರಕರಣದ ಬಗ್ಗೆ ತಮ್ಮ ವಿರೋಧ ಪ್ರಕಟಿಸಲೆಂದೇ ಕಾರ್ಯಕ್ರಮವನ್ನು ರದ್ದು ಮಾಡಿದ್ದರು. ಈಗ ಮತ್ತೆ ಶ್ರೆಯಾ ಘೋಷಲ್ ಕಾರ್ಯಕ್ರಮ ಮಾಡಿದ್ದಾರಾದರೂ ಸಹ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಶ್ರೆಯಾ ಘೋಷಾಲ್​ಗೆ ಮುಂಚೆ ಅರಿಜಿತ್ ಸಿಂಗ್ ಸಹ ಕೊಲ್ಕತ್ತದಲ್ಲಿ ಕಾರ್ಯಕ್ರಮ ಮಾಡಿದ್ದರು. ಅವರೂ ಸಹ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Tue, 22 October 24

Follow Us
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ