AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್

ಗಾಯಕಿ ಶ್ರೇಯಾ ಘೋಷಾಲ್ ಅವರು ‘ಚಿಕ್ನಿ ಚಮೇಲಿ’ ಹಾಡಿನ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ತಮ್ಮನ್ನು ಟ್ರೋಲ್‌ ಮಾಡಿದವರಿಗೆ ಶ್ರೇಯಾ ಘೋಷಾಲ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಶ್ಲೀಲ ಸಾಹಿತ್ಯ ಇರುವ ಹಾಡುಗಳಿಗೆ 'ನೋ' ಎಂದು ಶ್ರೇಯಾ ಘೋಷಾಲ್ ಅವರು ಹೇಳಿದ್ದಾರೆ.

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್
Katrina Kaif, Shreya Ghoshal
ಮದನ್​ ಕುಮಾರ್​
|

Updated on: Mar 04, 2026 | 4:02 PM

Share

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ‘ಚಿಕ್ನಿ ಚಮೇಲಿ’ (Chikni Chameli) ರೀತಿಯ ಹಾಡುಗಳ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ನಾನು ಇನ್ಮುಂದೆ ಇಂತಹ ಹಾಡುಗಳನ್ನು ಹಾಡುವುದಿಲ್ಲ’ ಎಂದು ಅವರು ಹೇಳಿದ್ದನ್ನು ಕೆಲವರು ಟ್ರೋಲ್ ಮಾಡಿದ್ದರು. ಈಗ ಈ ಎಲ್ಲಾ ಟ್ರೋಲ್‌ಗಳಿಗೆ ಶ್ರೇಯಾ ಖಡಕ್ ಆಗಿಯೇ ಉತ್ತರ ನೀಡಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಾಜ್ ಶಾಮನಿ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶ್ರೇಯಾ ಘೋಷಾಲ್ (Shreya Ghoshal), ಚಿತ್ರರಂಗದಲ್ಲಿ ಮಹಿಳೆಯರನ್ನು ಅತಿ ಹೆಚ್ಚು ಲೈಂಗಿಕವಾಗಿ ಬಿಂಬಿಸುವ ಸಾಹಿತ್ಯದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

ಶ್ರೇಯಾ ಘೋಷಾಲ್ ಅವರು ತಮ್ಮ ವೃತ್ತಿಜೀವನದಲ್ಲಿ ಎದುರಾದ ಕೆಲವು ಮುಜುಗರದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ‘ಚಿಕ್ನಿ ಚಮೇಲಿ ಹಿಟ್ ಆದ ನಂತರ, ನನಗೆ ಅಂತಹದ್ದೇ ಅನೇಕ ಹಾಡುಗಳ ಆಫರ್ ಬಂದವು. ಒಮ್ಮೆ ನನ್ನ ಆಪ್ತ ಸಂಗೀತ ಸಂಯೋಜಕರೊಬ್ಬರು ‘ನನ್ನನ್ನು ಚಿಕನ್ ಮಾಡಿ ತಿನ್ನು’ ಎಂಬಂತಹ ಅತ್ಯಂತ ಅಶ್ಲೀಲ ಸಾಹಿತ್ಯವಿದ್ದ ಹಾಡನ್ನು ಹಾಡಲು ಕೇಳಿದ್ದರು. ಆ ಸಾಹಿತ್ಯ ಕೇಳಿಯೇ ನನಗೆ ನಾಚಿಕೆಯಾಯಿತು, ತಕ್ಷಣವೇ ಅದನ್ನು ನಿರಾಕರಿಸಿದೆ’ ಎಂದು ಶ್ರೇಯಾ ಘೋಷಾಲ್ ಅವರು ತಿಳಿಸಿದ್ದಾರೆ.

2012ರ ‘ಅಗ್ನಿಪಥ್’ ಸಿನಿಮಾದ ‘ಚಿಕ್ನಿ ಚಮೇಲಿ’ ಸೂಪರ್ ಹಿಟ್ ಹಾಡಿನ ಬಗ್ಗೆ ಮಾತನಾಡುತ್ತಾ, ‘ಆ ಸಮಯದಲ್ಲಿ ನನಗೆ ಅಷ್ಟು ಪ್ರಭುದ್ಧತೆ ಇರಲಿಲ್ಲ. ನಾನು ಏನು ಹಾಡುತ್ತಿದ್ದೇನೆ ಎಂಬುದು ಪೂರ್ಣವಾಗಿ ಅರ್ಥವಾಗುತ್ತಿರಲಿಲ್ಲ. ಆ ಹಾಡಿನ ಮೂಲ ಸಾಹಿತ್ಯ ಇನ್ನೂ ಗಾಢವಾಗಿತ್ತು, ನಂತರ ಅದನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಾಗಿತ್ತು’ ಎಂದು ಶ್ರೇಯಾ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಜನರು ‘ನೀವು ಈಗಲೂ ಸಂಗೀತ ಕಾರ್ಯಕ್ರಮಗಳಲ್ಲಿ ಅದೇ ಹಾಡನ್ನು ಹಾಡುತ್ತೀರಲ್ಲವೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಶ್ರೇಯಾ ಅವರ ಉತ್ತರ ಹೀಗಿದೆ. ‘ಹಾಡಿನ ಬಗ್ಗೆ ಹೆಮ್ಮೆ ಇದೆ. ನನಗೆ ಆ ಹಾಡಿನ ಬಗ್ಗೆ ಯಾವುದೇ ಮುಜುಗರವಿಲ್ಲ. ನಾನು ಅದನ್ನು ಇಷ್ಟಪಡುತ್ತೇನೆ ಮತ್ತು ಅದು ನನ್ನದೇ ಹಾಡು. ಅದನ್ನು ನಾನು ಎಂದಿಗೂ ಅಲ್ಲಗಳೆಯುವುದಿಲ್ಲ. ಆದರೆ ಈಗ ನಾನು ಬದಲಾಗಿದ್ದೇನೆ. ಇನ್ನು ಮುಂದೆ ಅಂತಹ ಸಾಹಿತ್ಯವಿರುವ ಹಾಡುಗಳನ್ನು ನಾನು ರೆಕಾರ್ಡ್ ಮಾಡುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ರಾಶಿಕಾ ಸಿನಿಮಾ ಬಗ್ಗೆ ಶ್ರೇಯಾ ಘೋಷಾಲ್ ಮಾತು

‘ಒಂದು ಹಾಡು ಹಿಟ್ ಆದ ಮೇಲೆ ಅದನ್ನು ಎಲ್ಲೆಡೆ ಹಾಡಬೇಕಾಗುತ್ತದೆ. ಸಾವಿರಾರು ಮಕ್ಕಳ ಮುಂದೆ ಅಂತಹ ಹಾಡುಗಳನ್ನು ಹಾಡುವಾಗ ಅಥವಾ ಅವರು ಅದಕ್ಕೆ ಡ್ಯಾನ್ಸ್ ಮಾಡುವುದನ್ನು ನೋಡಿದಾಗ ನನಗೆ ಸಂಕೋಚವಾಗುತ್ತದೆ. ಅದಕ್ಕಾಗಿಯೇ ನಾನು ಈಗ ಹೆಚ್ಚು ಜಾಗರೂಕಳಾಗಿದ್ದೇನೆ’ ಎಂದಿದ್​ದಾರೆ ಶ್ರೇಯಾ ಘೋಷಾಲ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?